AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ಮತ್ತೆ ಶುರುವಾಯ್ತು ಶೂಟಿಂಗ್; ಭರ್ಜರಿ ಸೆಟ್ ಹಾಕಿ ಚಿತ್ರೀಕರಣ

‘ಆದಿಪುರುಷ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಪ್ರಭಾಸ್ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 50 ದಿನ ಅವರು ಅಮೆರಿಕದಲ್ಲಿಯೇ ಇದ್ದರು. ಈಗ ಅವರು ಭಾರತಕ್ಕೆ ಮರಳಿದ್ದಾರೆ. ಇಲ್ಲಿಗೆ ಆಗಮಿಸಿದ ಬಳಿಕ ಅವರು ಕೆಲ ದಿನ ರೆಸ್ಟ್ ಮಾಡಿದ್ದರು. ಈಗ ಪ್ರಭಾಸ್ ಶೂಟಿಂಗ್​ಗೆ ಮರಳಿದ್ದಾರೆ.

‘ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ಮತ್ತೆ ಶುರುವಾಯ್ತು ಶೂಟಿಂಗ್; ಭರ್ಜರಿ ಸೆಟ್ ಹಾಕಿ ಚಿತ್ರೀಕರಣ
ಪ್ರಭಾಸ್
TV9 Web
| Edited By: |

Updated on:Aug 09, 2023 | 2:16 PM

Share

ನಟ ಪ್ರಭಾಸ್ (Prabhas) ಸಾಲು ಸಾಲಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಬಾಹುಬಲಿ 2’ ಬಳಿಕ ಅವರ ಆಯ್ಕೆ ಬದಲಾಗಿದೆ. ಕೇವಲ ಪ್ಯಾನ್ ಇಂಡಿಯಾ ಚಿತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಬಿಗ್ ಬಜೆಟ್ ಸಿನಿಮಾಗಳ ಪಟ್ಟಿ ದೊಡ್ಡದಿದೆ. ಪ್ರಭಾಸ್ ಇಷ್ಟು ದಿನ ‘ಸಲಾರ್’ ಸಿನಿಮಾದ ಶೂಟಿಂಗ್​​ನಲ್ಲಿ ಬ್ಯುಸಿಯಾಗಿದ್ದರು. ಇದರ ಜೊತೆ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮತ್ತೆ ಆರಂಭ ಆಗಿದೆ. ಈ ಚಿತ್ರದ ಗ್ಲಿಂಪ್ಸ್ ಕೂಡ ಇತ್ತೀಚೆಗೆ ಬಿಡುಗಡೆಯಾಗಿದೆ.

‘ಆದಿಪುರುಷ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಪ್ರಭಾಸ್ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 50 ದಿನ ಅವರು ಅಮೆರಿಕದಲ್ಲಿಯೇ ಇದ್ದರು. ಈಗ ಅವರು ಭಾರತಕ್ಕೆ ಮರಳಿದ್ದಾರೆ. ಇಲ್ಲಿಗೆ ಆಗಮಿಸಿದ ಬಳಿಕ ಅವರು ಕೆಲ ದಿನ ರೆಸ್ಟ್ ಮಾಡಿದ್ದರು. ಈಗ ಪ್ರಭಾಸ್ ಶೂಟಿಂಗ್​ಗೆ ಮರಳಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ಶೂಟಿಂಗ್​ ಹೈದರಾಬಾದ್‌ನ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುತ್ತಿದೆ. ಆಗಸ್ಟ್ 28ರವರೆಗೆ ಚಿತ್ರತಂಡ ಇಲ್ಲಿ ಶೂಟಿಂಗ್ ಮುಂದುವರಿಸಲಿದೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲ ಗ್ಲಿಂಪ್ಸ್ ಇತ್ತೀಚೆಗೆ ಬಿಡುಗಡೆ ಆಗಿದೆ. ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರ ಪಾತ್ರ ಇಲ್ಲಿ ಹೈಲೈಟ್ ಆಗಿತ್ತು. ಹೈದರಾಬಾದ್​ನಲ್ಲಿ ನಡೆಯುತ್ತಿರುವ ಶೂಟ್​ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತಿತರು ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದ ಫಸ್ಟ್​ ಗ್ಲಿಂಪ್ಸ್​ನಲ್ಲಿ ಕಾಣಿಸಿಕೊಂಡಿಲ್ಲ ಕಮಲ್​ ಹಾಸನ್​; ವಿಶೇಷ ದಿನದಂದು ಆಗುತ್ತಾ ವಿಲನ್​ ಎಂಟ್ರಿ?

ಕಲ್ಕಿ ಅವತಾರದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಈ ಚಿತ್ರದ ಕಥೆ ಭಿನ್ನವಾಗಿ ಇರಲಿದೆ ಎನ್ನಲಾಗುತ್ತಿದೆ. ಕಲ್ಕಿ ಜನಿಸಿದ ಬಳಿಕ ಕಲಿಯುಗ ಅಂತ್ಯವಾಗಿ ಸತ್ಯಯುಗ ಆರಂಭ ಆಗುತ್ತದೆ ಎನ್ನುವ ನಂಬಿಕೆ ಅನೇಕರದ್ದು. ಹೀಗಾಗಿ ಸಿನಿಮಾದ ಕಥೆ ಕಲಿಯುಗದ ಅಂತ್ಯವನ್ನು ತೋರಿಸುವ ರೀತಿಯಲ್ಲಿ ಇರಲಿದೆ ಎಂದು ಅನೇಕರು ಭಾವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:16 pm, Wed, 9 August 23

Follow Us
Web contact
Web contact

TV9 Kannada

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!