AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಆಫರ್; ಅತೀ ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ

‘ಕಲ್ಕಿ 2898 ಎಡಿ’ ಸಿನಿಮಾ 1200 ಕೋಟಿ ರೂಪಾಯಿ ಗಳಿಕೆ ಮಾಡುವ ಹಂತದಲ್ಲಿದೆ. ಈ ಚಿತ್ರದಿಂದ ಪ್ರಭಾಸ್, ಅಮಿತಾಭ್ ಬಚ್ಚನ್ ಖ್ಯಾತಿ ಹೆಚ್ಚಿದೆ. ಈಗ ಸಿನಿಮಾ ತಂಡ ಕಲೆಕ್ಷನ್ ಹೆಚ್ಚಿಸಿಕೊಳ್ಳಲು ಹೊಸ ಪ್ಲ್ಯಾನ್ ಮಾಡಿದೆ. ಚಿತ್ರದ ಟಿಕೆಟ್ ಬೆಲೆಯನ್ನು 100 ರೂಪಾಯಿಗೆ ಇಳಿಕೆ ಮಾಡಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಆಫರ್; ಅತೀ ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on: Aug 02, 2024 | 6:59 AM

Share

‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದೆ. ಈಗಾಗಲೇ ಸಿನಿಮಾದ ಗಳಿಕೆ 1200 ಕೋಟಿ ರೂಪಾಯಿ ಸಮೀಪಿಸಿದೆ. ಈಗ ಸಿನಿಮಾ ತಂಡದ ಕಲೆಕ್ಷನ್ ಹೆಚ್ಚಿಸಲು ದೊಡ್ಡ ಆಫರ್ ಘೋಷಣೆ ಮಾಡಿದೆ. ಈ ಚಿತ್ರದ ಟಿಕೆಟ್​ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಈ ವಿಚಾರ ಪ್ರಭಾಸ್ ಫ್ಯಾನ್ಸ್​ಗೆ ಖುಷಿ ನೀಡಿದೆ. ದುಬಾರಿ ಟಿಕೆಟ್ ಎನ್ನುವ ಕಾರಣಕ್ಕೆ ಥಿಯೇಟರ್​ಗೆ ಹೋಗದೆ ಇದ್ದವರು, ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಣೆಗೆ ಈಗ ತೆರಳಬಹುದು.

‘ಕಲ್ಕಿ 2898 ಎಡಿ’ ಟಿಕೆಟ್ ದರವನ್ನು 100 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಈ ಆಫರ್ ಆಗಸ್ಟ್ 2ರಿಂದ 9ರವರೆಗೆ ಇರಲಿದೆ. 100 ರೂಪಾಯಿ ಟಿಕೆಟ್ ದರದ ಜೊತೆಗೆ ಟ್ಯಾಕ್ಸ್ ಹಾಗೂ ಷರತ್ತುಗಳು ಅನ್ವಯ ಆಗುತ್ತವೆ ಎಂದು ತಂಡ ಹೇಳಿಕೊಂಡಿದೆ.

ಈಗಾಗಲೇ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ‘ಕಲ್ಕಿ 2898 ಎಡಿ’ ರಿಲೀಸ್ ಆದ ಬಳಿಕ ಹಲವು ಸಿನಿಮಾಗಳು ತೆರೆಗೆ ಅಪ್ಪಳಿಸಿವೆ. ಈ ಎಲ್ಲಾ ಕಾರಣದಿಂದ ಸಿನಿಮಾ ವೀಕ್ಷಣೆಗೆ ತೆರಳುವವರ ಸಂಖ್ಯೆ ಕಡಿಮೆ ಆಗುತ್ತಿದೆ. ಇದರ ಜೊತೆಗೆ ಶೋಗಳ ಸಂಖ್ಯೆ ಕೂಡ ಕಡಿಮೆ ಇರುತ್ತದೆ. ಆದರೆ, 100 ರೂಪಾಯಿ ಟಿಕೆಟ್ ದರ ಫಿಕ್ಸ್ ಮಾಡಿದರೆ ಜನರು ಹೆಚ್ಚೆಚ್ಚು ಥಿಯೇಟರ್​ನತ್ತ ಮುಖ ಮಾಡುತ್ತಾರೆ ಅನ್ನೋದು ಇವರ ಆಲೋಚನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಲ್ಕಿ ಬುಜ್ಜಿ ಮೇನಿಯಾ; ಏಳು ಕೋಟಿ ವೆಚ್ಚದ ಬುಜ್ಜಿ ವಿಶೇಷತೆಗಳೇನು?

ಆದರೆ, ಈ ಆಫರ್ ಸಂಪೂರ್ಣವಾಗಿ ಅನ್ವಯ ಆಗುವ ರೀತಿ ಕಾಣುತ್ತಿಲ್ಲ. ವೀಕೆಂಡ್ ಎನ್ನುವ ಕಾರಣಕ್ಕೋ ಏನೋ ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಟಿಕೆಟ್ ದರಗಳು 150-200 ರೂಪಾಯಿಗೆ ಮಾರಾಟ ಆಗುತ್ತಿವೆ. ಹೀಗಿರುವಾಗ ಆಫರ್​ ಎಂದು ಹೇಳೋದು ಏಕೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ