‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್​ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್

‘ಕಲ್ಕಿ 2898 ಎಡಿ’ ಸಿನಿಮಾ ತಂಡದವರು ರಾಮ್ ಚರಣ್-ಉಪಾಸನಾ ಮಗಳು ಕ್ಲಿನ್​ಕಾರಾಗೆ ಸ್ಕೆಚ್ಚಸ್, ಸ್ಟಿಕ್ಕರ್ಸ್, ಗೊಂಬೆಗಳನ್ನು ಕಳುಹಿಸಿದ್ದಾರೆ. ಈ ಫೋಟೋನ ಉಪಾಸನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ತಂಡಕ್ಕೆ ಅವರು ಧನ್ಯವಾದ ಹೇಳಿದ್ದಾರೆ.

‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್​ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್
ಕಲ್ಕಿ
Follow us
|

Updated on: Jun 03, 2024 | 2:35 PM

‘ಕಲ್ಕಿ 2898 ಎಡಿ’ ಸಿನಿಮಾ (Kalki 2898 AD Movie) ಬಗ್ಗೆ ಫ್ಯಾನ್ಸ್ ಇಟ್ಟುಕೊಂಡಿರೋ ನಿರೀಕ್ಷೆ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡುವ ಕೆಲಸ ಆಗುತ್ತಿದೆ. ನಿರ್ಮಾಪಕರು ಭರ್ಜರಿ ಹಣ ಸುರಿದು ಸಿನಿಮಾಗೆ ಪ್ರಚಾರ ಮಾಡುತ್ತಿದ್ದಾರೆ. ಸೆಲೆಬ್ರಿಟಿ ಮಕ್ಕಳನ್ನು ಕೂಡ ಇದರಲ್ಲಿ ಸೇರಿಸಿಕೊಳ್ಳಲಾಗುತ್ತಿದೆ. ಹೌದು, ರಾಮ್ ಚರಣ್ ಮಗಳಿಗೆ ‘ಕಲ್ಕಿ 2898 ಎಡಿ’ ತಂಡದಿಂದ ಗಿಫ್ಟ್ ಸಿಕ್ಕಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ನಡೆಯುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ತಂಡದವರು ರಾಮ್ ಚರಣ್-ಉಪಾಸನಾ ಮಗಳು ಕ್ಲಿನ್​ಕಾರಾಗೆ ಸ್ಕೆಚ್ಚಸ್, ಸ್ಟಿಕ್ಕರ್ಸ್, ಗೊಂಬೆಗಳನ್ನು ಕಳುಹಿಸಿದ್ದಾರೆ. ಈ ಫೋಟೋನ ಉಪಾಸನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ತಂಡಕ್ಕೆ ಅವರು ಧನ್ಯವಾದ ಹೇಳಿದ್ದಾರೆ. ಇದು ಕೂಡ ಸಿನಿಮಾ ಪ್ರಚಾರದ ಒಂದು ಭಾಗ ಎಂದು ಕೆಲವರು ಊಹಿಸಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳಿಗೆ ಆಗಲೇ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿರುತ್ತದೆ. ಸೆಲೆಬ್ರಿಟಿಗಳನ್ನು ಪ್ರಚಾರಕ್ಕೆ ಸೇರಿಸಿಕೊಳ್ಳುವುದರ ಜೊತೆಗೆ ಮಕ್ಕಳನ್ನೂ ಸೇರಿಸಿಕೊಳ್ಳುತ್ತಿರುವುದರಿಂದ ಚಿತ್ರದ ಬಗ್ಗೆ ಮಕ್ಕಳಲ್ಲೂ ಕುತೂಹಲ ಮೂಡಲಿದೆ. ಈಗಾಗಲೇ ‘ಬುಜ್ಜಿ ಆ್ಯಂಡ್ ಭೈರವ’ ಅನಿಮೇಟೆಡ್ ಸೀರಿಸ್ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಕಾಣುತ್ತಿದೆ. ಅವುಗಳ ವೀಕ್ಷಣೆ ಕೂಡ ಇದರಿಂದ ಹೆಚ್ಚಲಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾ ಬುಕಿಂಗ್ ಓಪನ್ ಯಾವಾಗ? ಇದು ಸುದೀರ್ಘ ಅವಧಿಯ ಸಿನಿಮಾ

‘ಕಲ್ಕಿ 2898 ಎಡಿ’ ಚಿತ್ರಕ್ಕೆ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಜೂನ್ 27ರಂದು ತೆರೆಕಾಣಲಿರೋ ಸಿನಿಮಾಗೆ ಜೂನ್ 7ರಂದೇ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಶುರುವಾಗಲಿದೆ. ಈ ಸಿನಿಮಾದ ಅವಧಿ 2 ಗಂಟೆ 50 ನಿಮಿಷ ಇರಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ಚಿತ್ರದಲ್ಲಿ 6000 ಸಾವಿರ ವರ್ಷಗಳ ಕಥೆ ಇರಲಿದೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡುತ್ತಿದ್ದು, ಅಶ್ವಿನಿ ದತ್ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ