AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡಿದ್ದಕ್ಕಿಂತಲೂ ಮೊದಲೇ ರಿಲೀಸ್ ಆಗಲಿದೆ ‘ಕಲ್ಕಿ 2898 ಎಡಿ’ ಸೀಕ್ವೆಲ್

‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದೆ. ಈಗಾಗಲೇ ಸಿನಿಮಾದ ಗಳಿಕೆ 1200 ಕೋಟಿ ರೂಪಾಯಿ ಸಮೀಪಿಸಿದೆ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಸೀಕ್ವೆಲ್ ಬಗ್ಗೆ ನಿರ್ದೇಶಕರು ಈಗ ಮಾಹಿತಿ ನೀಡಿದ್ದಾರೆ.

ಅಂದುಕೊಂಡಿದ್ದಕ್ಕಿಂತಲೂ ಮೊದಲೇ ರಿಲೀಸ್ ಆಗಲಿದೆ ‘ಕಲ್ಕಿ 2898 ಎಡಿ’ ಸೀಕ್ವೆಲ್
ಕಲ್ಕಿ ಟೀಂ
ರಾಜೇಶ್ ದುಗ್ಗುಮನೆ
|

Updated on:Aug 06, 2024 | 7:30 AM

Share

‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೊದಲ ಭಾಗ ರಿಲೀಸ್ ಆಗಿ ಸೂಪರ್ ಹಿಟ್ ಆಗಿರುವುದೇ ಇದಕ್ಕೆ ಕಾರಣ. ಈಗಾಗಲೇ ಸೀಕ್ವೆಲ್​ಗೆ ಕೆಲಸ ಶುರುವಾಗಿದೆ. ಇದಕ್ಕೆ ಹೆಚ್ಚು ವರ್ಷ ಕಾಯೋ ಅವಶ್ಯಕತೆ ಇಲ್ಲ ಎಂದು ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಅವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಎರಡನೇ ಭಾಗ ಬೇಗ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮೊದಲ ಭಾಗಕ್ಕಾಗಿ ನಿರ್ದೇಶಕರು ಸಾಕಷ್ಟು ಸಮಯ ತೆಗೆದುಕೊಂಡಿದ್ದರು. ಆದರೆ, ಎರಡನೇ ಭಾಗಕ್ಕೆ ಅಷ್ಟೊಂದು ಸಮಯ ತೆಗೆದುಕೊಳ್ಳುವುದಿಲ್ಲ ಎನ್ನುವ ಮಾತನ್ನು ನಾಗ್ ಅಶ್ವಿನ್ ಅವರು ಹೇಳಿದ್ದಾರೆ.

‘ಎರಡನೇ ಪಾರ್ಟ್​​ಗೆ ಕೆಲಸಗಳು ನಡೆಯುತ್ತಿವೆ. ಮೊದಲ ಭಾಗದ ಶೂಟಿಂಗ್ ನಡೆಯುವಾಗಲೇ ಎರಡನೇ ಭಾಗದ ಕೆಲವು ದೃಶ್ಯಗಳ ಶೂಟಿಂಗ್ ಆಗಿದೆ. ಸುಮಾರು 20 ದಿನಗಳ ಶೂಟ್ ಪೂರ್ಣಗೊಂಡಿದೆ. ಇನ್ನೂ ಸಾಕಷ್ಟು ಯೋಚಿಸಿ ಕೆಲಸ ಮಾಡಬೇಕಿದೆ. ಮೊದಲ ಪಾರ್ಟ್​ಗೆ ತೆಗೆದುಕೊಂಡಷ್ಟು ಸಮಯ ಈ ಚಿತ್ರಕ್ಕೆ ಹಿಡಿಯುವುದಿಲ್ಲ’ ಎಂದಿದ್ದಾರೆ ನಾಗ್ ಅಶ್ವಿನ್. ಈ ಮೂಲಕ ಅಂದುಕೊಂಡಿದ್ದಕ್ಕಿಂತ ಮೊದಲೇ ಸಿನಿಮಾ ರಿಲೀಸ್ ಆಗುವ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಆಫರ್; ಅತೀ ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ

2020ರ ಫೆಬ್ರವರಿ ತಿಂಗಳಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಘೋಷಣೆ ಆಯಿತು. ನಾಲ್ಕು ವರ್ಷಗಳ ಸಮಯ ತೆಗೆದುಕೊಂಡು ನಿರ್ದೇಶಕರು ಚಿತ್ರವನ್ನು ರಿಲೀಸ್ ಮಾಡಿದ್ದಾರೆ. ಕೊವಿಡ್ ಬಂದಿದ್ದು ಸಿನಿಮಾ ಕೆಲಸಗಳ ವಿಳಂಬಕ್ಕೆ ಕಾರಣ ಇರಬಹುದು. ಈಗ ಇನ್ನೆರಡು ವರ್ಷಗಳಲ್ಲಾದರೂ ‘ಕಲ್ಕಿ’ ಸಿನಿಮಾ ರಿಲೀಸ್ ಆಗುತ್ತದೆಯೇ ಎನ್ನುವ ಪ್ರಶ್ನೆ ಕಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Tue, 6 August 24

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ