AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಒಟಿಟಿಗೆ ಬರಲ್ಲ ‘ಕಲ್ಕಿ 2898 ಎಡಿ’ ಸಿನಿಮಾ; ಎಷ್ಟು ತಿಂಗಳು ಕಾಯಬೇಕು?

ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದ್ದಂತೆ ಒಟಿಟಿಯಲ್ಲಿ ಯಾವಾಗ ರಿಲೀಸ್ ಎನ್ನುವ ಚರ್ಚೆ ಆರಂಭ ಆಗುತ್ತದೆ. ‘ಕಲ್ಕಿ 2898 ಎಡಿ’ ಸಿನಿಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ.

ಸದ್ಯಕ್ಕಂತೂ ಒಟಿಟಿಗೆ ಬರಲ್ಲ ‘ಕಲ್ಕಿ 2898 ಎಡಿ’ ಸಿನಿಮಾ; ಎಷ್ಟು ತಿಂಗಳು ಕಾಯಬೇಕು?
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on: Jul 17, 2024 | 7:04 AM

Share

‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ಪ್ರಭಾಸ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮೊದಲಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟಿಕೆಟ್ ಬೆಲೆ ಹೆಚ್ಚಿರುವುದರಿಂದ ಕೆಲವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು ಎಂದು ಭಾವಿಸಿದ್ದರು. ಆದರೆ, ಇದಕ್ಕೆ ಮತ್ತಷ್ಟು ಸಮಯ ಹಿಡಿಯಲಿದೆ.

‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಬಜೆಟ್ ಚಿತ್ರ. ಈ ಸಿನಿಮಾಗಾಗಿ ವೈಜಯಂತಿ ಮೂವಿಸ್ ಅವರು ಬರೋಬ್ಬರಿ 600 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಇಷ್ಟೆಲ್ಲ ದೊಡ್ಡ ಮೊತ್ತ ಹಾಕಿ ಸಿನಿಮಾ ಮಾಡಿದಾಗ ಹೆಚ್ಚಿನ ಗಳಿಕೆಯನ್ನು ನಿರೀಕ್ಷಿಸಲಾಗುತ್ತದೆ. ಹೀಗಾಗಿ, ಹೆಚ್ಚು ದಿನ ಸಿನಿಮಾ ಥಿಯೇಟರ್​​ನಲ್ಲಿ ಓಡಬೇಕಾದ ಅನಿವಾರ್ಯತೆ ಇದೆ. ಈ ಕಾರಣದಿಂದ ಸದ್ಯಕ್ಕಂತೂ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುವುದಿಲ್ಲ. ಅಮೇಜಾನ್ ಪ್ರೈಮ್ ವಿಡಿಯೋ ಹಾಗೂ ನೆಟ್​ಫ್ಲಿಕ್ಸ್​ನವರು ಈ ಚಿತ್ರದ ಒಟಿಟಿ ಹಕ್ಕನ್ನು ಪಡೆದಿದ್ದಾರೆ.

ಕೆಲವು ಸಿನಿಮಾಗಳು ಥಿಯೇಟರ್​ನಲ್ಲಿ ರಿಲೀಸ್ ಆದ ಕೇವಲ 30 ದಿನಕ್ಕೆ ಒಟಿಟಿಯಲ್ಲಿ ರಿಲೀಸ್ ಆಗುತ್ತವೆ. ಥಿಯೇಟರ್​ನಲ್ಲಿ ಬಿಸ್ನೆಸ್ ಇಲ್ಲದಾಗ ಈ ರೀತಿ ಒಟಿಟಿಯಲ್ಲಿ ರಿಲೀಸ್ ಮಾಡಲಾಗುತ್ತದೆ. ಆದರೆ, ‘ಕಲ್ಕಿ 2898 ಎಡಿ’ ವಿಚಾರದಲ್ಲಿ ಆ ರೀತಿ ಇಲ್ಲ. ನಿರ್ಮಾಪಕರು ಎರಡು ತಿಂಗಳ ಬಳಿಕ ‘ಕಲ್ಕಿ 2898’ ಚಿತ್ರವನ್ನು ರಿಲೀಸ್ ಮಾಡಲಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಶೋ ವೇಳೆ ಪಿವಿಆರ್ ಒಳಗೆ ಸುರಿಯಿತು ಮಳೆ ನೀರು; ವಿಡಿಯೋ ವೈರಲ್​

‘ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅಶ್ವಿನಿ ದತ್ ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ ದೊಡ್ಡ ಪಾತ್ರವರ್ಗದ ಕಾರಣಕ್ಕೂ ಅನೇಕರಿಗೆ ಇಷ್ಟ ಆಗಿದೆ. ಈ ಸಿನಿಮಾದಲ್ಲಿ ಮಹಾಭಾರತಕ್ಕೂ ಕನೆಕ್ಷನ್ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್