AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್​; ಯಾರಿಗೆ ಸಿಕ್ಕಿದೆ ಈ ಹಣ?

ಪ್ರತಿ ಸಿನಿಮಾಗೆ ಪ್ರಭಾಸ್​ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅದೇ ರೀತಿ ಅವರು ಕೊಡುಗೈ ದಾನಿ ಕೂಡ ಹೌದು. ಈಗ ಅವರು 35 ಲಕ್ಷ ರೂಪಾಯಿ ದೇಣಿಗೆ ನೀಡಿರುವುದು ಸುದ್ದಿ ಆಗಿದೆ. ಈ ಮೊದಲು ಸಹ ಹಲವು ಸಂದರ್ಭಗಳಲ್ಲಿ ಪ್ರಭಾಸ್​ ಅವರು ದಾನ ಮಾಡಿದ್ದರು. ಈಗ ಪ್ರಭಾಸ್​ ನೀಡಿದ ಈ ಹಣದಿಂದ ಒಂದಷ್ಟು ಕಾರ್ಯಗಳನ್ನು ಮಾಡಲು ನಿರ್ಧರಿಸಲಾಗಿದೆ.

35 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್​; ಯಾರಿಗೆ ಸಿಕ್ಕಿದೆ ಈ ಹಣ?
ಪ್ರಭಾಸ್​
ಮದನ್​ ಕುಮಾರ್​
|

Updated on: Apr 23, 2024 | 3:04 PM

Share

ತೆಲುಗು ಚಿತ್ರರಂಗದ ಸ್ಟಾರ್​ ನಟ, ಪ್ಯಾನ್​ ಇಂಡಿಯಾ ಹೀರೋ ಪ್ರಭಾಸ್​ (Prabhas) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಒಂದು ಸ್ಪೆಷಲ್​ ಕಾರಣದಿಂದ ಸುದ್ದಿ ಆಗಿದ್ದಾರೆ. ಪ್ರಭಾಸ್​ ಅವರು 35 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಅಂದಹಾಗೆ, ಅವರು ಇಷ್ಟು ದೊಡ್ಡ ಮಟ್ಟದ ಹಣವನ್ನು ನೀಡಿರುವುದು ಸಿನಿಮಾ ನಿರ್ದೇಶಕರಿಗಾಗಿ. ಹೌದು, ತೆಲುಗು ಸಿನಿಮಾ ನಿರ್ದೇಶಕರ ಸಂಘಕ್ಕೆ (Telugu Film Directors Association) ಪ್ರಭಾಸ್​ ಅವರು ಬರೋಬ್ಬರಿ 35 ಲಕ್ಷ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ. ಇದರಿಂದ ನಿರ್ದೇಶಕರ ಸಂಘಕ್ಕೆ ದೊಡ್ಡ ಬಲ ಬಂದಂತಾಗಿದೆ. ಪ್ರಭಾಸ್​ ಅವರು ಸದ್ಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಪ್ರಭಾಸ್ ಅವರು ಕೊಡುಗೈ ದಾನಿ. ಈ ಮೊದಲು ಕೂಡ ಅನೇಕ ಸಂದರ್ಭಗಳಲ್ಲಿ ಅವರು ದಾನ ಮಾಡಿದ್ದರು. ಚಿತ್ರರಂಗದ ಬಗ್ಗೆ ಅವರಿಗೆ ಸಾಕಷ್ಟು ಕಾಳಜಿ ಇದೆ. ನಿರ್ದೇಶಕರ ಬಗ್ಗೆಯೂ ಗೌರವ ಇದೆ. ಈ ಎಲ್ಲ ಕಾರಣದಿಂದ ಅವರು ‘ತೆಲುಗು ಸಿನಿಮಾ ನಿರ್ದೇಶಕರ ಸಂಘ’ಕ್ಕೆ 35 ಲಕ್ಷ ರೂಪಾಯಿಯನ್ನು ದೇಣಿಗೆ ರೂಪದಲ್ಲಿ ಕೊಟ್ಟಿದ್ದಾರೆ. ಇದನ್ನು ತಿಳಿಸಲು ಸಂಘದ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ.

ಇಷ್ಟು ದೊಡ್ಡ ಮೊತ್ತವನ್ನು ಪ್ರಭಾಸ್​ ಅವರು ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ನಿರ್ದೇಶಕ ಮಾರುತಿ ಖಚಿತಪಡಿಸಿದ್ದಾರೆ. ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ, ನಿರ್ಮಾಪಕರಾದ ದಾಸರಿ ನಾರಾಯಣ ರಾವ್​ ಅವರ ಜನ್ಮದಿನದ ಪ್ರಯುಕ್ತ ಮೇ 4ರಂದು ‘ನಿರ್ದೇಶಕರ ದಿನ’ ಆಚರಿಸಲಾಗುತ್ತದೆ. ಈ ಬಾರಿ ಪ್ರಭಾಸ್​ ಅವರಿಂದ ನಿರ್ದೇಶಕರ ಸಂಘಕ್ಕೆ ಭರ್ಜರಿ ದೇಣಿಗೆ ಸಿಕ್ಕಿರುವುದರಿಂದ ತುಂಬ ಗ್ರ್ಯಾಂಡ್​ ಆಗಿ ‘ನಿರ್ದೇಶಕರ ದಿನ’ವನ್ನು ಸೆಲೆಬ್ರೇಟ್​ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಭಾಸ್​ ಫ್ಯಾನ್​​ಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಥಳಿತ

ಹೈದರಾಬಾದ್​​ನ ಎಲ್​ಬಿ ಸ್ಟೇಡಿಯಂನಲ್ಲಿ ಮೇ 4ರಂದು ‘ನಿರ್ದೇಶಕರ ದಿನ’ ಆಚರಣೆ ಮಾಡಲಾಗುವುದು. ಆ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಆಗಮಿಸಲಿದ್ದಾರೆ. ಪ್ರಭಾಸ್​ ಕೂಡ ಹಾಜರಿ ಹಾಕುವ ನಿರೀಕ್ಷೆ ಇದೆ. ಪ್ರಭಾಸ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ದಿ ರಾಜಾ ಸಾಬ್​’, ‘ಸ್ಪಿರಿಟ್​’, ‘ಸಲಾರ್​ 2’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ