AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್​; ಯಾರಿಗೆ ಸಿಕ್ಕಿದೆ ಈ ಹಣ?

ಪ್ರತಿ ಸಿನಿಮಾಗೆ ಪ್ರಭಾಸ್​ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅದೇ ರೀತಿ ಅವರು ಕೊಡುಗೈ ದಾನಿ ಕೂಡ ಹೌದು. ಈಗ ಅವರು 35 ಲಕ್ಷ ರೂಪಾಯಿ ದೇಣಿಗೆ ನೀಡಿರುವುದು ಸುದ್ದಿ ಆಗಿದೆ. ಈ ಮೊದಲು ಸಹ ಹಲವು ಸಂದರ್ಭಗಳಲ್ಲಿ ಪ್ರಭಾಸ್​ ಅವರು ದಾನ ಮಾಡಿದ್ದರು. ಈಗ ಪ್ರಭಾಸ್​ ನೀಡಿದ ಈ ಹಣದಿಂದ ಒಂದಷ್ಟು ಕಾರ್ಯಗಳನ್ನು ಮಾಡಲು ನಿರ್ಧರಿಸಲಾಗಿದೆ.

35 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್​; ಯಾರಿಗೆ ಸಿಕ್ಕಿದೆ ಈ ಹಣ?
ಪ್ರಭಾಸ್​
ಮದನ್​ ಕುಮಾರ್​
|

Updated on: Apr 23, 2024 | 3:04 PM

Share

ತೆಲುಗು ಚಿತ್ರರಂಗದ ಸ್ಟಾರ್​ ನಟ, ಪ್ಯಾನ್​ ಇಂಡಿಯಾ ಹೀರೋ ಪ್ರಭಾಸ್​ (Prabhas) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಒಂದು ಸ್ಪೆಷಲ್​ ಕಾರಣದಿಂದ ಸುದ್ದಿ ಆಗಿದ್ದಾರೆ. ಪ್ರಭಾಸ್​ ಅವರು 35 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಅಂದಹಾಗೆ, ಅವರು ಇಷ್ಟು ದೊಡ್ಡ ಮಟ್ಟದ ಹಣವನ್ನು ನೀಡಿರುವುದು ಸಿನಿಮಾ ನಿರ್ದೇಶಕರಿಗಾಗಿ. ಹೌದು, ತೆಲುಗು ಸಿನಿಮಾ ನಿರ್ದೇಶಕರ ಸಂಘಕ್ಕೆ (Telugu Film Directors Association) ಪ್ರಭಾಸ್​ ಅವರು ಬರೋಬ್ಬರಿ 35 ಲಕ್ಷ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ. ಇದರಿಂದ ನಿರ್ದೇಶಕರ ಸಂಘಕ್ಕೆ ದೊಡ್ಡ ಬಲ ಬಂದಂತಾಗಿದೆ. ಪ್ರಭಾಸ್​ ಅವರು ಸದ್ಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಪ್ರಭಾಸ್ ಅವರು ಕೊಡುಗೈ ದಾನಿ. ಈ ಮೊದಲು ಕೂಡ ಅನೇಕ ಸಂದರ್ಭಗಳಲ್ಲಿ ಅವರು ದಾನ ಮಾಡಿದ್ದರು. ಚಿತ್ರರಂಗದ ಬಗ್ಗೆ ಅವರಿಗೆ ಸಾಕಷ್ಟು ಕಾಳಜಿ ಇದೆ. ನಿರ್ದೇಶಕರ ಬಗ್ಗೆಯೂ ಗೌರವ ಇದೆ. ಈ ಎಲ್ಲ ಕಾರಣದಿಂದ ಅವರು ‘ತೆಲುಗು ಸಿನಿಮಾ ನಿರ್ದೇಶಕರ ಸಂಘ’ಕ್ಕೆ 35 ಲಕ್ಷ ರೂಪಾಯಿಯನ್ನು ದೇಣಿಗೆ ರೂಪದಲ್ಲಿ ಕೊಟ್ಟಿದ್ದಾರೆ. ಇದನ್ನು ತಿಳಿಸಲು ಸಂಘದ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ.

ಇಷ್ಟು ದೊಡ್ಡ ಮೊತ್ತವನ್ನು ಪ್ರಭಾಸ್​ ಅವರು ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ನಿರ್ದೇಶಕ ಮಾರುತಿ ಖಚಿತಪಡಿಸಿದ್ದಾರೆ. ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ, ನಿರ್ಮಾಪಕರಾದ ದಾಸರಿ ನಾರಾಯಣ ರಾವ್​ ಅವರ ಜನ್ಮದಿನದ ಪ್ರಯುಕ್ತ ಮೇ 4ರಂದು ‘ನಿರ್ದೇಶಕರ ದಿನ’ ಆಚರಿಸಲಾಗುತ್ತದೆ. ಈ ಬಾರಿ ಪ್ರಭಾಸ್​ ಅವರಿಂದ ನಿರ್ದೇಶಕರ ಸಂಘಕ್ಕೆ ಭರ್ಜರಿ ದೇಣಿಗೆ ಸಿಕ್ಕಿರುವುದರಿಂದ ತುಂಬ ಗ್ರ್ಯಾಂಡ್​ ಆಗಿ ‘ನಿರ್ದೇಶಕರ ದಿನ’ವನ್ನು ಸೆಲೆಬ್ರೇಟ್​ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಭಾಸ್​ ಫ್ಯಾನ್​​ಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಥಳಿತ

ಹೈದರಾಬಾದ್​​ನ ಎಲ್​ಬಿ ಸ್ಟೇಡಿಯಂನಲ್ಲಿ ಮೇ 4ರಂದು ‘ನಿರ್ದೇಶಕರ ದಿನ’ ಆಚರಣೆ ಮಾಡಲಾಗುವುದು. ಆ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಆಗಮಿಸಲಿದ್ದಾರೆ. ಪ್ರಭಾಸ್​ ಕೂಡ ಹಾಜರಿ ಹಾಕುವ ನಿರೀಕ್ಷೆ ಇದೆ. ಪ್ರಭಾಸ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ದಿ ರಾಜಾ ಸಾಬ್​’, ‘ಸ್ಪಿರಿಟ್​’, ‘ಸಲಾರ್​ 2’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?