AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ ಶೂಟಿಂಗ್​ ಸೆಟ್​ಗೆ ಬಂದ ಪ್ರಭಾಸ್​; ಪೋಸ್ಟರ್​ ಮೂಲಕ ಗುಡ್​ ನ್ಯೂಸ್​

ಪ್ರೇಕ್ಷಕರಿಗೆ ‘ಕಣ್ಣಪ್ಪ’ ಸಿನಿಮಾ ಬಗ್ಗೆ ಇರುವ ಕ್ರೇಜ್​ ಜಾಸ್ತಿ ಆಗಿದೆ. ಅದಕ್ಕೆ ಕಾರಣ ಆಗಿರುವುದು ಪ್ರಭಾಸ್​ ಅವರ ಎಂಟ್ರಿ. ಹೌದು, ಈ ಬಹುನಿರೀಕ್ಷಿತ ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್​ ಈಗ ಭಾಗಿ ಆಗಿದ್ದಾರೆ. ಅವರ ಆಗಮನವನ್ನು ಖಚಿತಪಡಿಸಲು ಚಿತ್ರತಂಡದವರು ಹೊಸ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಪ್ರಭಾಸ್​ ಅವರ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

‘ಕಣ್ಣಪ್ಪ’ ಶೂಟಿಂಗ್​ ಸೆಟ್​ಗೆ ಬಂದ ಪ್ರಭಾಸ್​; ಪೋಸ್ಟರ್​ ಮೂಲಕ ಗುಡ್​ ನ್ಯೂಸ್​
ಪ್ರಭಾಸ್​
ಮದನ್​ ಕುಮಾರ್​
|

Updated on:May 09, 2024 | 7:52 PM

Share

ನಟ ಪ್ರಭಾಸ್​ (Prabhas) ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಬಿಡುವಿಲ್ಲದೇ ಅವರು ಕೆಲಸ ಮಾಡುತ್ತಿದ್ದಾರೆ. ‘ಕಲ್ಕಿ 2898 ಎಡಿ’, ‘ದಿ ರಾಜಾ ಸಾಬ್​’, ‘ಸಲಾರ್ 2’ ಮುಂತಾದ ಸಿನಿಮಾಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ನಡುವೆ ಇನ್ನೊಂದು ಗುಡ್​ ನ್ಯೂಸ್​ ಸಿಕ್ಕಿದೆ. ಪ್ರಭಾಸ್​ ಅವರು ‘ಕಣ್ಣಪ್ಪ’ (Kannappa) ಚಿತ್ರತಂಡಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿದ್ದಾರೆ. ಈಗಾಗಲೇ ಪಾತ್ರವರ್ಗದ ಕಾರಣದಿಂದ ಸಾಕಷ್ಟು ಸುದ್ದಿಯಲ್ಲಿರುವ ಪ್ಯಾನ್‌ ಇಂಡಿಯಾ ಸಿನಿಮಾ ಇದು. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಕಣ್ಣಪ್ಪ’ ಸಿನಿಮಾದ ಶೂಟಿಂಗ್​ನಲ್ಲಿ ಈಗ ಪ್ರಭಾಸ್ ಅವರು ಭಾಗಿ ಆಗಿದ್ದಾರೆ.‌

ವಿಷ್ಣು ಮಂಚು ಅವರು ‘ಕಣ್ಣಪ್ಪ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ಜೊತೆ ಅಕ್ಷಯ್‌ ಕುಮಾರ್‌, ಮೋಹನ್‌ ಲಾಲ್‌, ಮೋಹನ್‌ ಬಾಬು, ಶರತ್‌ಕುಮಾರ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿ ಇದ್ದಾರೆ. ಈಗ ಪ್ಯಾನ್​ ಇಂಡಿಯಾ ಸ್ಟಾರ್‌ ನಟ ಪ್ರಭಾಸ್‌ ಅವರು ಕೂಡ ಸೇರ್ಪಡೆ ಆಗಿರುವುದರಿಂದ ಚಿತ್ರತಂಡದ ಮೆರುಗು ಹೆಚ್ಚಾಗಿದೆ. ಸಿನಿಪ್ರಿಯರು ಈ ಚಿತ್ರದ ಮೇಲೆ ಇನ್ನಷ್ಟು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ.

‘ಕಣ್ಣಪ್ಪ ಸಿನಿಮಾಗೆ ಮುಖೇಷ್‌ ಕುಮಾರ್‌ ಸಿಂಗ್‌ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತೆಲುಗಿನಲ್ಲಿ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ತಯಾರಾಗುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗುತ್ತಿದೆ. ಶಿವನ ಪರಮ ಭಕ್ತ ಕಣ್ಣಪ್ಪನ ಪಾತ್ರದಲ್ಲಿ ವಿಷ್ಣು ಮಂಚು ಹೇಗೆ ಕಾಣಿಸಲಿದ್ದಾರೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: 35 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್​; ಯಾರಿಗೆ ಸಿಕ್ಕಿದೆ ಈ ಹಣ?

ವಿಶೇಷ ಏನೆಂದರೆ, ಕಳೆದ 7 ವರ್ಷಗಳಿಂದ ಈ ಸಿನಿಮಾದ ಸಲುವಾಗಿ ವಿಷ್ಣು ಮಂಚು ಅವರು ಶ್ರಮಿಸುತ್ತಿದ್ದಾರೆ. ಅವರ ಪಾಲಿಗೆ ಇದು ಮಹತ್ವಾಕಾಂಕ್ಷಿ ಪ್ರಾಜೆಕ್ಟ್​ ಆಗಿದೆ. ಬಜೆಟ್​ನಲ್ಲಿ ಮಾತ್ರ ಅಲ್ಲದೇ ತಾರಾಗಣದ ವಿಚಾರದಲ್ಲೂ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ. ಎಲ್ಲ ಭಾಷೆಯ ಹೆಸರಾಂತ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಲಿವುಡ್‌ನಿಂದ ಬಂದ ಶೆಲ್ಡೋನ್‌ ಚಾವ್‌ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೇಚ ಖಂಫಕದೀ ಅವರು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್​ ಅವರು ಶೂಟಿಂಗ್​ ಶುರುಮಾಡಿದ್ದಾರೆ ಎಂಬುದನ್ನು ತಿಳಿಸಲು ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:50 pm, Thu, 9 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?