ಸಿನಿಮಾ ಪ್ರಚಾರಕ್ಕೆ ಮದುವೆ ವಿಚಾರ ಎಳೆತಂದ ಪ್ರಭಾಸ್​? ಸ್ಟೇಟಸ್​ ಅರ್ಥ ಏನು?

ಪ್ರೇಕ್ಷಕರನ್ನು ಸೆಳೆಯಲು ಸಿನಿಮಾಗಳ ಪ್ರಚಾರಕ್ಕೆ ಸಾಕಷ್ಟು ತಲೆ ಕೆಡಿಸಿಕೊಳ್ಳಬೇಕು. ‘ಕಲ್ಕಿ 2898 ಎಡಿ’ ಸಿನಿಮಾ ತಂಡ ಕೂಡ ವಿಶೇಷ ರೀತಿಯಲ್ಲಿ ಪ್ರಚಾರ ಮಾಡಲು ಸಜ್ಜಾಗಿದೆ. ಪ್ರಭಾಸ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡ ಸಾಲುಗಳನ್ನು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಅನೇಕರು ಇದು ಮದುವೆ ವಿಷಯ ಎಂದು ಊಹಿಸಿದ್ದಾರೆ. ಆದರೆ ಅದು ಸಿನಿಮಾದ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟ್​ ಎನ್ನಲಾಗಿದೆ.

ಸಿನಿಮಾ ಪ್ರಚಾರಕ್ಕೆ ಮದುವೆ ವಿಚಾರ ಎಳೆತಂದ ಪ್ರಭಾಸ್​? ಸ್ಟೇಟಸ್​ ಅರ್ಥ ಏನು?
ಪ್ರಭಾಸ್​
Follow us
|

Updated on: May 17, 2024 | 7:23 PM

ನಟ ಪ್ರಭಾಸ್​ ಅವರ ಮದುವೆ (Prabhas Marriage) ಬಗ್ಗೆ ಈಗ ಏಕಾಏಕಿ ಸುದ್ದಿ ಹಬ್ಬಿದೆ. ಅದಕ್ಕೆ ಕಾರಣ ಆಗಿರುವುದು ಅವರು ಹಾಕಿರುವ ಸೋಶಿಯಲ್​ ಮೀಡಿಯಾ ಸ್ಟೇಟಸ್​. ‘ಕಡೆಗೂ ವಿಶೇಷ ವ್ಯಕ್ತಿಯೊಬ್ಬರು ನಮ್ಮ ಜೀವನದಲ್ಲಿ ಪ್ರವೇಶಿಸುತ್ತಿದ್ದಾರೆ’ ಎಂದು ಪ್ರಭಾಸ್ (Prabhas) ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇದನ್ನು ನೋಡಿದ ಎಲ್ಲರೂ ಇದು ಮದುವೆ ಸಮಾಚಾರ ಎಂದೇ ಊಹಿಸಿದ್ದಾರೆ. ಆದರೆ ಟಾಲಿವುಡ್​ ಮೂಲಗಳ ಪ್ರಕಾರ ಇದು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಪ್ರಚಾರಕ್ಕಾಗಿ ಮಾಡಿದ ತಂತ್ರ. ಆ ಬಗ್ಗೆ ಶೀಘ್ರದಲ್ಲೇ ಅಸಲಿ ವಿಷಯ ಹೊರಬರಲಿದೆ.

ಪ್ರಭಾಸ್​ ಅವರ ವೃತ್ತಿ ಜೀವನದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ತುಂಬ ವಿಶೇಷವಾದದ್ದು. ಇದರಲ್ಲಿ ಸೈನ್ಸ್​ ಫಿಕ್ಷನ್​ ಕಥಾಹಂದರ ಇರಲಿದೆ. ನಾಗ್​ ಅಶ್ವಿನ್​ ಅವರು ಇದಕ್ಕೆ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ ಜೊತೆ ಕಮಲ್​ ಹಾಸನ್​, ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​, ದಿಶಾ ಪಟಾನಿ ಮುಂತಾದವರು ನಟಿಸಿದ್ದಾರೆ. ರಿಲೀಸ್​ ದಿನಾಂಕ ಹತ್ತಿರ ಆಗಿರುವ ಈ ಸಂದರ್ಭದಲ್ಲಿ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾದ ಪ್ರಚಾರಕ್ಕಾಗಿ ಒಂದು ವಿಶೇಷ ಕಾರನ್ನು ವಿನ್ಯಾಸಗೊಳಿಸಲಾಗಿದೆ ಎಂಬ ಮಾಹಿತಿ ಇದೆ. ಅದನ್ನು ಸದ್ಯದಲ್ಲೇ ಪರಿಚಯಿಸಲು ಚಿತ್ರತಂಡ ಸಿದ್ಧವಾಗಿದೆ. ಆ ವಿಚಾರದ ಬಗ್ಗೆ ಜನರಿಗೆ ಕೌತುಕ ಮೂಡಿಸುವ ಸಲುವಾಗಿ ಪ್ರಭಾಸ್​ ಅವರು ಈ ರೀತಿ ಪೋಸ್ಟ್​ ಮಾಡಿದ್ದಾರೆ ಎನ್ನಲಾಗಿದೆ. ಇದು ಅವರ ಸಿನಿಮಾ ಕರಿಯರ್​ನಲ್ಲೇ ವಿಶೇಷ ರೀತಿಯ ಪ್ರಚಾರ ತಂತ್ರ ಆದ್ದರಿಂದ ‘ವಿಶೇಷವಾದ ವ್ಯಕ್ತಿ’ ಎಂದು ಅವರು ಹೇಳಿರಬಹುದು ಅಂತ ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಕಣ್ಣಪ್ಪ’ ಶೂಟಿಂಗ್​ ಸೆಟ್​ಗೆ ಬಂದ ಪ್ರಭಾಸ್​; ಪೋಸ್ಟರ್​ ಮೂಲಕ ಗುಡ್​ ನ್ಯೂಸ್​

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮೇ 9ರಂದು ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ರಿಲೀಸ್​ ದಿನಾಂಕ ಮುಂದೂಡಲಾಯಿತು. ಜೂನ್​ 27ರಂದು ಈ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಅದಕ್ಕೂ ಮುನ್ನ ಪ್ರಚಾರಕ್ಕಾಗಿ ವಿವಿಧ ತಂತ್ರಗಳನ್ನು ಮಾಡಲಾಗುತ್ತಿದೆ. ‘ವೈಜಯಂತಿ ಮೂವೀಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈ ಸಿನಿಮಾದಿಂದ ಪ್ರಭಾಸ್​ ಅವರು ದೊಡ್ಡ ಗೆಲುವು ಪಡೆಯಬಹುದು ಎಂಬ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ