AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ

RRR Movie Box Office Collection: ವಿವಾದಗಳಿಗೂ ಕಮಾಲ್​ ಆರ್​. ಖಾನ್​ ಅವರಿಗೂ ಎಲ್ಲಿಲ್ಲದ ನಂಟು. ಈಗ ಅವರು ‘ಆರ್​ಆರ್​ಆರ್​’ ಚಿತ್ರತಂಡದ ವಿಶ್ವಾಸಾರ್ಹತೆಗೆ ಧಕ್ಕೆ ಆಗುವಂತಹ ಹೇಳಿಕೆ ನೀಡಿದ್ದಾರೆ.

RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
ಆರ್​ಆರ್​ಆರ್​ ಸಿನಿಮಾ ಪೋಸ್ಟರ್​, ಕಮಾಲ್​ ಆರ್​. ಖಾನ್​
Follow us
TV9 Web
| Updated By: ಮದನ್​ ಕುಮಾರ್​

Updated on: Apr 03, 2022 | 10:06 AM

ಸ್ವಯಂ ಘೋಷಿತ ವಿಮರ್ಶಕ ಕಮಾಲ್​ ಆರ್​. ಖಾನ್​ (Kamaal R Khan) ಅವರು ದಿನಕ್ಕೊಂದು ಶಾಕಿಂಗ್​ ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನೇಕ ಸ್ಟಾರ್​ ಸೆಲೆಬ್ರಿಟಿಗಳನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಅವರ ಕಣ್ಣು ‘ಆರ್​ಆರ್​ಆರ್’​ ಸಿನಿಮಾ (RRR Movie) ಮೇಲೆ ಬಿದ್ದಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸಿರುವ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್​ ಆಗುತ್ತಿದೆ. 700 ಕೋಟಿ ರೂಪಾಯಿಗಿಂತಲೂ ಹೆಚ್ಚು ಗಳಿಕೆ ಮಾಡಿ ಈ ಸಿನಿಮಾ ಮುನ್ನುಗ್ಗುತ್ತಿದೆ. ಆದರೆ ಈ ಕಲೆಕ್ಷನ್​ ರಿಪೋರ್ಟ್​ (RRR Movie Box Office Collection) ಸುಳ್ಳು ಎಂದು ಕಮಾಲ್ ಆರ್​. ಖಾನ್​ ವಾದ ಮಾಡುತ್ತಿದ್ದಾರೆ. ಈ ಕುರಿತಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಇದನ್ನು ಕಂಡು ರಾಜಮೌಳಿ ಅಭಿಮಾನಿಗಳು ಗರಂ ಆಗಿದ್ದಾರೆ. ಕಮಾಲ್​ ಆರ್​. ಖಾನ್ ಅವರ ಮಾತುಗಳನ್ನು ಅನೇಕರು ವಿರೋಧಿಸಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ನಿಜಕ್ಕೂ ‘ಆರ್​ಆರ್​ಆರ್​’ ಸಿನಿಮಾದ ಗಲ್ಲಾಪೆಟ್ಟಿಗೆ ಗಳಿಕೆ ಎಷ್ಟು ಎಂಬ ಬಗ್ಗೆ ಅನುಮಾನ ವ್ಯಕ್ತವಾಗುವ ರೀತಿಯಲ್ಲಿ ಕಮಾಲ್ ಆರ್​. ಖಾನ್​ ಅವರು ಟ್ವೀಟ್​ ಮಾಡಿದ್ದಾರೆ.

ವಿವಾದಗಳಿಗೂ ಕಮಾಲ್​ ಆರ್​. ಖಾನ್​ ಅವರಿಗೂ ಎಲ್ಲಿಲ್ಲದ ನಂಟು. ಈಗ ಅವರು ‘ಆರ್​ಆರ್​ಆರ್​’ ಚಿತ್ರತಂಡದ ವಿಶ್ವಾಸಾರ್ಹತೆಗೆ ಧಕ್ಕೆ ಆಗುವಂತಹ ಹೇಳಿಕೆ ನೀಡಿದ್ದಾರೆ. ಮಾ.25ರಂದು ಬಿಡುಗಡೆಯಾದ ಈ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಂಡಿದೆ. ಈವರೆಗೂ ವಿಶ್ವಾದ್ಯಂತ 710 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಆದರೆ ಅದನ್ನು ಕಮಾಲ್​ ಆರ್​. ಖಾನ್​ ಪ್ರಶ್ನಿಸಿದ್ದಾರೆ.

‘ಜನರು ಆರ್​ಆರ್​ಆರ್​ ಸಿನಿಮಾವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇದೊಂದು ದುರಂತ. ಆದರೆ ನಿರ್ಮಾಪಕರು ಸುಳ್ಳು ಹೈಪ್​ ಸೃಷ್ಟಿ ಮಾಡಿಸಿದ್ದಾರೆ. ಅದನ್ನು ನಾನು ನನ್ನ ಮುಂದಿನ ವಿಮರ್ಶೆಯಲ್ಲಿ ಸಾಬೀತು ಮಾಡುತ್ತೇನೆ. 680 ಕೋಟಿ ರೂಪಾಯಿ ಬಜೆಟ್​ ಲೆಕ್ಕಾಚಾರ ಹೇಗೆ ಮಾಡಬೇಕು ಅಂತ ಜನರಿಗೆ ಗೊತ್ತಿಲ್ಲ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

ರಾಜಮೌಳಿ ಅಭಿಮಾನಿಗಳು ಕಮಾಲ್​ ಆರ್​. ಖಾನ್​ ಅವರ ಮಾತನ್ನು ವಿರೋಧಿಸಿದ್ದಾರೆ. ಅಲ್ಲದೆ, ಕಟುವಾಗಿ ಕಮೆಂಟ್​ ಮಾಡುವ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ‘ದಕ್ಷಿಣ ಭಾರತದ ಸಿನಿಮಾಗಳ ಗೆಲುವಿನ ಬಗ್ಗೆ ನಿಮಗೆ ಯಾಕೆ ಹೊಟ್ಟೆಕಿಚ್ಚು’ ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ. ‘ನಿಮ್ಮ ಹುಚ್ಚಾಟ ನಿಲ್ಲಿಸಿ. ನಾನು ಇಂದು ಸಿನಿಮಾ ನೋಡಲು ಹೋಗಿದ್ದೆ. ಚಿತ್ರಮಂದಿರ ಹೌಸ್​ಫುಲ್​ ಆಗಿತ್ತು. ಜನರು ಸಿನಿಮಾ ನೋಡುತ್ತ ಎಂಜಾಯ್​ ಮಾಡುತ್ತಿದ್ದರು. ನಾನು ಎರಡನೇ ಬಾರಿಗೆ ಸಿನಿಮಾ ನೋಡಲು ಹೋಗಿದ್ದೆ. ಆದರೂ ಸಹ ಖುಷಿ ನೀಡಿತು. ಕೊನೆಯ ದೃಶ್ಯ ರೋಮಾಂಚಕವಾಗಿತ್ತು’ ಎಂದು ಪ್ರೇಕ್ಷಕರೊಬ್ಬರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ದುಪ್ಪಟ್ಟು ಬಜೆಟ್​ನಲ್ಲಿ ‘ಆರ್​ಆರ್​ಆರ್’ ಸಿಮಾ​ ಸಿದ್ಧವಾಗಿದೆ ಎಂಬುದು ಕಮಾಲ್​ ಆರ್​. ಖಾನ್​ ಅವರ ವಾದ. ಅದನ್ನು ಕೂಡ ಜನರು ಅಲ್ಲಗಳೆದಿದ್ದಾರೆ. ‘ಆ ಎರಡೂ ಸಿನಿಮಾಗಳ ಒಟ್ಟು ಬಜೆಟ್​ 450 ಕೋಟಿ ರೂಪಾಯಿ. ಅದರ ಡಬಲ್​ ಎಂದರೆ 900 ಕೋಟಿ ರೂಪಾಯಿ ಆಗುತ್ತದೆ. ಆರ್​ಆರ್​ಆರ್​ ಚಿತ್ರಕ್ಕೆ ಅಷ್ಟು ಬಜೆಟ್​ ಆಗಿಲ್ಲ’ ಎಂದು ಜನರು ಕಮಾಲ್ ಆರ್​. ಖಾನ್​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೊಡ್ಡ ಸಿನಿಮಾಗಳ ಬಗ್ಗೆ ಮತ್ತು ಸ್ಟಾರ್​ ಕಲಾವಿದರ ಬಗ್ಗೆ ಕಮಾಲ್​ ಆರ್​. ಖಾನ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಅವರು ಸಲ್ಮಾನ್ ಖಾನ್​, ಶಾರುಖ್​ ಖಾನ್​ ಸೇರಿದಂತೆ ಅನೇಕ ಹೀರೋಗಳ ಬಗ್ಗೆ ಕೊಂಕು ನುಡಿದು ಸುದ್ದಿ ಆಗಿದ್ದುಂಟು. ಪದೇ ಪದೇ ಇದೇ ಚಾಳಿ ಮುಂದುವರಿಸುತ್ತಿರುವ ಅವರ ಮಾತನ್ನು ಕೆಲವು ಸೆಲೆಬ್ರಿಟಿಗಳು ಗಂಭೀರವಾಗಿ ಪರಿಗಣಿಸುವುದಿಲ್ಲ.

ಇದನ್ನೂ ಓದಿ:

ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್