AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಮಾಫಿಯಾಗೆ ಹೆದರಿ ಸಿನಿಮಾ ವಿಮರ್ಶೆ ನಿಲ್ಲಿಸಿದ ಕಮಾಲ್​ ಖಾನ್

ಕಮಾಲ್ ಅವರು ಸಿನಿಮಾ ರಂಗದಲ್ಲಿ ವೃತ್ತಿಜೀವನ ಆರಂಭಿಸಿದರು. ಆದರೆ ನಟನೆ ಅವರ ಕೈ ಹಿಡಿಯಲಿಲ್ಲ. ಅವರ ಸಿನಿಮಾಗಳು ಹೀನಾಯವಾಗಿ ಸೋತವು. ಅ ಬಳಿಕ ಕಮಾಲ್ ಅವರು ಆಯ್ಕೆ ಮಾಡಿಕೊಂಡಿದ್ದು ಸಿನಿಮಾ ವಿಮರ್ಶೆ.

ಬಾಲಿವುಡ್ ಮಾಫಿಯಾಗೆ ಹೆದರಿ ಸಿನಿಮಾ ವಿಮರ್ಶೆ ನಿಲ್ಲಿಸಿದ ಕಮಾಲ್​ ಖಾನ್
ಕಮಾಲ್
TV9 Web
| Edited By: |

Updated on:Sep 26, 2022 | 4:55 PM

Share

ಬಾಲಿವುಡ್ ನಟ ಕಮಾಲ್ ಆರ್​. ಖಾನ್ (Kamaal R. Khan) ವಿರುದ್ಧ ಇತ್ತೀಚೆಗೆ ಕೇಸ್ ದಾಖಲಾಗಿತ್ತು. ಲೈಂಗಿಕ ಕಿರುಕುಳ ಹಾಗೂ ಆಕ್ಷೇಪಾರ್ಹ ಟ್ವೀಟ್ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಅವರನ್ನು ಹತ್ಯೆ ಮಾಡಲು ಸಂಚು ನಡೆದಿದೆ ಎಂದು ಅವರ ಮಗ ಆರೋಪಿಸಿದ್ದರು. ಆದರೆ, ಅವರ ಮಗ ಮಾಡಿದ ಆರೋಪದ ರೀತಿ ಯಾವುದೂ ನಡೆದಿಲ್ಲ. ಕಮಾಲ್ ಅವರು ಸುರಕ್ಷಿತವಾಗಿ ಜೈಲಿನಿಂದ ಹೊರ ಬಂದಿದ್ದಾರೆ. ಈ ಮಧ್ಯೆ ಅವರು ಹೊಸ ಟ್ವೀಟ್ ಮಾಡಿದ್ದು, ಸಿನಿಮಾ ವಿಮರ್ಶೆ ಮಾಡುವುದನ್ನೇ ನಿಲ್ಲಿಸುವುದಾಗಿ ಘೋಷಿಸಿದ್ದಾರೆ. ಇದಕ್ಕೆ ಬಾಲಿವುಡ್ ಮಾಫಿಯಾ ಕಾರಣ ಎಂಬುದು ಅವರ ಆರೋಪ.

ಕಮಾಲ್ ಅವರು ಸಿನಿಮಾ ರಂಗದಲ್ಲಿ ವೃತ್ತಿಜೀವನ ಆರಂಭಿಸಿದರು. ಆದರೆ ನಟನೆ ಅವರ ಕೈ ಹಿಡಿಯಲಿಲ್ಲ. ಅವರ ಸಿನಿಮಾಗಳು ಹೀನಾಯವಾಗಿ ಸೋತವು. ಅ ಬಳಿಕ ಕಮಾಲ್ ಅವರು ಆಯ್ಕೆ ಮಾಡಿಕೊಂಡಿದ್ದು ಸಿನಿಮಾ ವಿಮರ್ಶೆ. ಸ್ಟಾರ್ ಸಿನಿಮಾಗಳನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಕಾರಣಕ್ಕೆ ಹಲವರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಅವರ ಹೊಸ ಟ್ವೀಟ್ ಸಾಕಷ್ಟು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಕಮಾಲ್ ಆರ್. ಖಾನ್ ಅವರು ಸಿನಿಮಾ ವಿಮರ್ಶೆ ನಿಲ್ಲಿಸುತ್ತಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ನನ್ನ ಬಳಿ ಎರಡು ಆಯ್ಕೆಗಳು ಇದ್ದವು. ಶಾಶ್ವತವಾಗಿ ಮುಂಬೈ ತೊರೆಯುವುದು ಒಂದನೇ ಆಯ್ಕೆ ಆದರೆ, ಎರಡನೇ ಆಯ್ಕೆ ಸಿನಿಮಾ ವಿಮರ್ಶೆ ಮಾಡುವುದನ್ನು ನಿಲ್ಲಿಸುವುದು. ನಾನು ಎರಡನೇ ಆಯ್ಕೆಯನ್ನು ಸೆಲೆಕ್ಟ್ ಮಾಡಿದೆ. ಏಕೆಂದರೆ ಮುಂಬೈನಲ್ಲಿ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲು ಬಾಲಿವುಡ್ ಮಂದಿ ಸಾಕಷ್ಟು ರಾಜಕೀಯ ಬೆಂಬಲವನ್ನು ಹೊಂದಿದ್ದಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಮಾಲ್​ ಖಾನ್​ಗೆ ಜಾಮೀನು; ಆದರೂ ಇಲ್ಲ ಬಿಡುಗಡೆಗೆ ಅವಕಾಶ

ನಟ ಸಲ್ಮಾನ್ ಖಾನ್​, ನಿರ್ಮಾಪಕ ಕರಣ್ ಜೋಹರ್ ವಿರುದ್ಧ್ ಕಮಾಲ್ ಖಾನ್ ಗುಡುಗಿದ್ದೂ ಇದೆ. ತಮ್ಮ ಕರಿಯರ್ ನಾಶ ಮಾಡಲು ಇವರು ಪ್ರಯತ್ನಿಸುತ್ತಿದ್ದಾರೆ ಎಂದು ಕಮಾಲ್ ಈ ಮೊದಲಿನಿಂದಲೂ ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಬಾಲಿವುಡ್ ಮಾಫಿಯಾ ವಿಚಾರವನ್ನು ಅನೇಕ ಬಾರಿ ಅವರು ಚರ್ಚೆ ಮಾಡಿದ್ದರು. ಈಗ ತಮ್ಮ ವಿರುದ್ಧ ಕೇಸ್ ದಾಖಲಾಗಲು ಇವರೇ ಕಾರಣ ಮತ್ತು ಅದು ಫೇಕ್ ಎಂಬುದನ್ನು ಈ ಟ್ವೀಟ್ ಮೂಲಕ ಮತ್ತೊಮ್ಮೆ ಬಹಿರಂಗವಾಗಿ ಅವರು ಹೇಳಿಕೊಂಡಂತೆ ಆಗಿದೆ.

Published On - 4:25 pm, Mon, 26 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್