AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಇಂದಿರಾ ಗಾಂಧಿ ಬಗ್ಗೆ ಕಂಗನಾ ಮಾಡುವ ‘ಎಮರ್ಜೆನ್ಸಿ’ ಚಿತ್ರ ಫ್ಲಾಪ್​ ಆಗಲಿದೆ; ಭವಿಷ್ಯ ನುಡಿದ ನಟ

Kamaal R Khan: ಸದಾ ಒಂದಿಲ್ಲೊಂದು ವಿಚಾರಗಳ ಬಗ್ಗೆ ಕಮೆಂಟ್​ ಮಾಡುತ್ತ, ವಿವಾದ ಸೃಷ್ಟಿಸಿಕೊಳ್ಳುವಲ್ಲಿ ಕಮಾಲ್​ ಆರ್​. ಖಾನ್​ ಫೇಮಸ್​. ಈಗ ಅವರು ಕಂಗನಾ ರಣಾವತ್​ ತಂಟೆಗೆ ಬಂದಿದ್ದಾರೆ.

Kangana Ranaut: ಇಂದಿರಾ ಗಾಂಧಿ ಬಗ್ಗೆ ಕಂಗನಾ ಮಾಡುವ ‘ಎಮರ್ಜೆನ್ಸಿ’ ಚಿತ್ರ ಫ್ಲಾಪ್​ ಆಗಲಿದೆ; ಭವಿಷ್ಯ ನುಡಿದ ನಟ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 27, 2021 | 1:45 PM

Share

ನಟಿ ಕಂಗನಾ ರಣಾವತ್​ ಅವರು ವಿವಾದ ಮಾಡಿಕೊಳ್ಳುವುದರಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅದರ ನಡುವೆಯೇ ಹೊಸ ಹೊಸ ಸಿನಿಮಾ ಅನೌನ್ಸ್​ ಮಾಡುತ್ತಿರುತ್ತಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡುವುದಾಗಿ ಅವರು ಕೆಲವೇ ದಿನಗಳ ಹಿಂದೆ ಘೋಷಿಸಿದರು. ಆ ಚಿತ್ರದ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ಅಚ್ಚರಿ ಎಂದರೆ ಚಿತ್ರಕ್ಕೆ ‘ಎಮರ್ಜೆನ್ಸಿ’ ಎಂದು ಹೆಸರು ಇಡಲಾಗಿದ್ದು, ಇಂದಿರಾ ಗಾಂಧಿಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಸ್ವತಃ ಕಂಗನಾ ಮಾಡಲಿದ್ದಾರೆ. ಆದರೆ ಆ ಸಿನಿಮಾ ಖಂಡಿತವಾಗಿ ಸೋಲಲಿದೆ ಎಂದು ಕಮಾಲ್​ ಆರ್​. ಖಾನ್ ಭವಿಷ್ಯ ನುಡಿದಿದ್ದಾರೆ.

‘ಇಂದಿರಾ ಗಾಂಧಿ ಮತ್ತು ಎಮರ್ಜೆನ್ಸಿ ಕುರಿತು ನಿರ್ದೇಶಕ ಮಧುರ್​ ಭಂಡಾರ್ಕರ್​ ಅವರು ‘ಇಂದೂ ಸರ್ಕಾರ್’ ಸಿನಿಮಾ ಮಾಡಿದ್ದರು. ನಾಯಿ ಕೂಡ ಆ ಸಿನಿಮಾ ನೋಡಲು ​ಹೋಗಿರಲಿಲ್ಲ. ಈಗ ಅಕ್ಕ ಕಂಗನಾ ರಣಾವತ್​ ಅವರು ಅದೇ ವಿಷಯದ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಅಂದರೆ ಆಕೆ ಸತತ 12ನೇ ಸಿನಿಮಾದಲ್ಲೂ ಸೋಲಬೇಕು ಅಂತ ಅಂದುಕೊಂಡಿದ್ದಾರೆ. ಅವರು ನಟಿಸಿದ 11 ಸಿನಿಮಾಗಳು ಈಗಾಗಲೇ ಫ್ಲಾಪ್​ ಆಗಿವೆ’ ಎಂದು ಕಮಾಲ್​ ಆರ್​. ಖಾನ್​ ವ್ಯಂಗ್ಯ ಮಾಡಿದ್ದಾರೆ.

ಸದಾ ಒಂದಿಲ್ಲೊಂದು ವಿಚಾರಗಳ ಬಗ್ಗೆ ಕಮೆಂಟ್​ ಮಾಡುತ್ತ, ವಿವಾದ ಸೃಷ್ಟಿಸಿಕೊಳ್ಳುವಲ್ಲಿ ಕಮಾಲ್​ ಆರ್​. ಖಾನ್​ ಫೇಮಸ್​. ಈಗ ಅವರು ಕಂಗನಾ ತಂಟೆಗೆ ಬಂದಿದ್ದಾರೆ. ಕಂಗನಾ ಎಂಥ ಕಿರಿಕ್​ ಪಾರ್ಟಿ ಎಂಬುದು ಗೊತ್ತಿದ್ದರೂ ಕೂಡ ಅವರು ‘ಎಮರ್ಜೆನ್ಸಿ’ ಸಿನಿಮಾ ಬಗ್ಗೆ ಅಪಶಕುನ ನುಡಿದಿದ್ದಾರೆ. ಇದು ಈಗ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಇದಕ್ಕೆ ಕಂಗನಾ ಯಾವ ರೀತಿ ತಿರುಗೇಟು ನೀಡುತ್ತಾರೆ ಎಂಬುದನ್ನು ನೋಡಲು ನೆಟ್ಟಿಗರು ಕಾಯುತ್ತಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ಮೇಲೆ ಕಂಗನಾ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಮತ್ತೊಮ್ಮೆ ನಿರ್ದೇಶಕಿಯ ಕ್ಯಾಪ್​ ಧರಿಸಲು ಖುಷಿ ಎನಿಸುತ್ತದೆ. ಈ ಚಿತ್ರಕ್ಕಾಗಿ 2 ವರ್ಷಕ್ಕೂ ಅಧಿಕ ಸಮಯ ಕೆಲಸ ಮಾಡಿದ ಬಳಿಕ ಅನಿಸುತ್ತಿರುವುದು ಏನೆಂದರೆ, ಈ ಚಿತ್ರಕ್ಕೆ ನನ್ನ ಹೊರತಾಗಿ ಬೇರೆ ಯಾರೂ ಕೂಡ ಚೆನ್ನಾಗಿ ನಿರ್ದೇಶನ ಮಾಡಲು ಸಾಧ್ಯವಿಲ್ಲ. ಈ ಸಿನಿಮಾಗಾಗಿ ನನ್ನ ನಟನೆಯ ಕೆಲವು ಬೇರೆ ಪ್ರಾಜೆಕ್ಟ್​ಗಳನ್ನು ತ್ಯಾಗ ಮಾಡಬೇಕಾಗಿದೆ. ಆದರೂ ನಾನು ಈ ಚಿತ್ರ ಮಾಡಲು ನಿರ್ಧರಿಸಿದ್ದೇನೆ. ತುಂಬ ಎಗ್ಸೈಟ್​ ಆಗಿದ್ದೇನೆ. ಇದು ಒಂದು ಅದ್ಭುತ ಜರ್ನಿ ಆಗಿರಲಿದೆ’ ಎಂದು ಕಂಗನಾ ಇತ್ತೀಚೆಗಷ್ಟೇ ಹೇಳಿಕೊಂಡಿದ್ದರು.

ಇದನ್ನೂ ಓದಿ:

‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾ ರಣಾವತ್​​ಗೆ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು

ಆ್ಯಸಿಡ್​ ದಾಳಿಯಿಂದ ಕಂಗನಾ ಅಕ್ಕನ ಮುಖಕ್ಕೆ 53 ಸರ್ಜರಿ; ಕಡೆಗೂ ಯೋಗದಿಂದ ನಡೆದಿದ್ದು ಮ್ಯಾಜಿಕ್​

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು