AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಇಂದಿರಾ ಗಾಂಧಿ ಬಗ್ಗೆ ಕಂಗನಾ ಮಾಡುವ ‘ಎಮರ್ಜೆನ್ಸಿ’ ಚಿತ್ರ ಫ್ಲಾಪ್​ ಆಗಲಿದೆ; ಭವಿಷ್ಯ ನುಡಿದ ನಟ

Kamaal R Khan: ಸದಾ ಒಂದಿಲ್ಲೊಂದು ವಿಚಾರಗಳ ಬಗ್ಗೆ ಕಮೆಂಟ್​ ಮಾಡುತ್ತ, ವಿವಾದ ಸೃಷ್ಟಿಸಿಕೊಳ್ಳುವಲ್ಲಿ ಕಮಾಲ್​ ಆರ್​. ಖಾನ್​ ಫೇಮಸ್​. ಈಗ ಅವರು ಕಂಗನಾ ರಣಾವತ್​ ತಂಟೆಗೆ ಬಂದಿದ್ದಾರೆ.

Kangana Ranaut: ಇಂದಿರಾ ಗಾಂಧಿ ಬಗ್ಗೆ ಕಂಗನಾ ಮಾಡುವ ‘ಎಮರ್ಜೆನ್ಸಿ’ ಚಿತ್ರ ಫ್ಲಾಪ್​ ಆಗಲಿದೆ; ಭವಿಷ್ಯ ನುಡಿದ ನಟ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 27, 2021 | 1:45 PM

Share

ನಟಿ ಕಂಗನಾ ರಣಾವತ್​ ಅವರು ವಿವಾದ ಮಾಡಿಕೊಳ್ಳುವುದರಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅದರ ನಡುವೆಯೇ ಹೊಸ ಹೊಸ ಸಿನಿಮಾ ಅನೌನ್ಸ್​ ಮಾಡುತ್ತಿರುತ್ತಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡುವುದಾಗಿ ಅವರು ಕೆಲವೇ ದಿನಗಳ ಹಿಂದೆ ಘೋಷಿಸಿದರು. ಆ ಚಿತ್ರದ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ಅಚ್ಚರಿ ಎಂದರೆ ಚಿತ್ರಕ್ಕೆ ‘ಎಮರ್ಜೆನ್ಸಿ’ ಎಂದು ಹೆಸರು ಇಡಲಾಗಿದ್ದು, ಇಂದಿರಾ ಗಾಂಧಿಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಸ್ವತಃ ಕಂಗನಾ ಮಾಡಲಿದ್ದಾರೆ. ಆದರೆ ಆ ಸಿನಿಮಾ ಖಂಡಿತವಾಗಿ ಸೋಲಲಿದೆ ಎಂದು ಕಮಾಲ್​ ಆರ್​. ಖಾನ್ ಭವಿಷ್ಯ ನುಡಿದಿದ್ದಾರೆ.

‘ಇಂದಿರಾ ಗಾಂಧಿ ಮತ್ತು ಎಮರ್ಜೆನ್ಸಿ ಕುರಿತು ನಿರ್ದೇಶಕ ಮಧುರ್​ ಭಂಡಾರ್ಕರ್​ ಅವರು ‘ಇಂದೂ ಸರ್ಕಾರ್’ ಸಿನಿಮಾ ಮಾಡಿದ್ದರು. ನಾಯಿ ಕೂಡ ಆ ಸಿನಿಮಾ ನೋಡಲು ​ಹೋಗಿರಲಿಲ್ಲ. ಈಗ ಅಕ್ಕ ಕಂಗನಾ ರಣಾವತ್​ ಅವರು ಅದೇ ವಿಷಯದ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಅಂದರೆ ಆಕೆ ಸತತ 12ನೇ ಸಿನಿಮಾದಲ್ಲೂ ಸೋಲಬೇಕು ಅಂತ ಅಂದುಕೊಂಡಿದ್ದಾರೆ. ಅವರು ನಟಿಸಿದ 11 ಸಿನಿಮಾಗಳು ಈಗಾಗಲೇ ಫ್ಲಾಪ್​ ಆಗಿವೆ’ ಎಂದು ಕಮಾಲ್​ ಆರ್​. ಖಾನ್​ ವ್ಯಂಗ್ಯ ಮಾಡಿದ್ದಾರೆ.

ಸದಾ ಒಂದಿಲ್ಲೊಂದು ವಿಚಾರಗಳ ಬಗ್ಗೆ ಕಮೆಂಟ್​ ಮಾಡುತ್ತ, ವಿವಾದ ಸೃಷ್ಟಿಸಿಕೊಳ್ಳುವಲ್ಲಿ ಕಮಾಲ್​ ಆರ್​. ಖಾನ್​ ಫೇಮಸ್​. ಈಗ ಅವರು ಕಂಗನಾ ತಂಟೆಗೆ ಬಂದಿದ್ದಾರೆ. ಕಂಗನಾ ಎಂಥ ಕಿರಿಕ್​ ಪಾರ್ಟಿ ಎಂಬುದು ಗೊತ್ತಿದ್ದರೂ ಕೂಡ ಅವರು ‘ಎಮರ್ಜೆನ್ಸಿ’ ಸಿನಿಮಾ ಬಗ್ಗೆ ಅಪಶಕುನ ನುಡಿದಿದ್ದಾರೆ. ಇದು ಈಗ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಇದಕ್ಕೆ ಕಂಗನಾ ಯಾವ ರೀತಿ ತಿರುಗೇಟು ನೀಡುತ್ತಾರೆ ಎಂಬುದನ್ನು ನೋಡಲು ನೆಟ್ಟಿಗರು ಕಾಯುತ್ತಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ಮೇಲೆ ಕಂಗನಾ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಮತ್ತೊಮ್ಮೆ ನಿರ್ದೇಶಕಿಯ ಕ್ಯಾಪ್​ ಧರಿಸಲು ಖುಷಿ ಎನಿಸುತ್ತದೆ. ಈ ಚಿತ್ರಕ್ಕಾಗಿ 2 ವರ್ಷಕ್ಕೂ ಅಧಿಕ ಸಮಯ ಕೆಲಸ ಮಾಡಿದ ಬಳಿಕ ಅನಿಸುತ್ತಿರುವುದು ಏನೆಂದರೆ, ಈ ಚಿತ್ರಕ್ಕೆ ನನ್ನ ಹೊರತಾಗಿ ಬೇರೆ ಯಾರೂ ಕೂಡ ಚೆನ್ನಾಗಿ ನಿರ್ದೇಶನ ಮಾಡಲು ಸಾಧ್ಯವಿಲ್ಲ. ಈ ಸಿನಿಮಾಗಾಗಿ ನನ್ನ ನಟನೆಯ ಕೆಲವು ಬೇರೆ ಪ್ರಾಜೆಕ್ಟ್​ಗಳನ್ನು ತ್ಯಾಗ ಮಾಡಬೇಕಾಗಿದೆ. ಆದರೂ ನಾನು ಈ ಚಿತ್ರ ಮಾಡಲು ನಿರ್ಧರಿಸಿದ್ದೇನೆ. ತುಂಬ ಎಗ್ಸೈಟ್​ ಆಗಿದ್ದೇನೆ. ಇದು ಒಂದು ಅದ್ಭುತ ಜರ್ನಿ ಆಗಿರಲಿದೆ’ ಎಂದು ಕಂಗನಾ ಇತ್ತೀಚೆಗಷ್ಟೇ ಹೇಳಿಕೊಂಡಿದ್ದರು.

ಇದನ್ನೂ ಓದಿ:

‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾ ರಣಾವತ್​​ಗೆ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು

ಆ್ಯಸಿಡ್​ ದಾಳಿಯಿಂದ ಕಂಗನಾ ಅಕ್ಕನ ಮುಖಕ್ಕೆ 53 ಸರ್ಜರಿ; ಕಡೆಗೂ ಯೋಗದಿಂದ ನಡೆದಿದ್ದು ಮ್ಯಾಜಿಕ್​

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ