AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಇಂದಿರಾ ಗಾಂಧಿ ಬಗ್ಗೆ ಕಂಗನಾ ಮಾಡುವ ‘ಎಮರ್ಜೆನ್ಸಿ’ ಚಿತ್ರ ಫ್ಲಾಪ್​ ಆಗಲಿದೆ; ಭವಿಷ್ಯ ನುಡಿದ ನಟ

Kamaal R Khan: ಸದಾ ಒಂದಿಲ್ಲೊಂದು ವಿಚಾರಗಳ ಬಗ್ಗೆ ಕಮೆಂಟ್​ ಮಾಡುತ್ತ, ವಿವಾದ ಸೃಷ್ಟಿಸಿಕೊಳ್ಳುವಲ್ಲಿ ಕಮಾಲ್​ ಆರ್​. ಖಾನ್​ ಫೇಮಸ್​. ಈಗ ಅವರು ಕಂಗನಾ ರಣಾವತ್​ ತಂಟೆಗೆ ಬಂದಿದ್ದಾರೆ.

Kangana Ranaut: ಇಂದಿರಾ ಗಾಂಧಿ ಬಗ್ಗೆ ಕಂಗನಾ ಮಾಡುವ ‘ಎಮರ್ಜೆನ್ಸಿ’ ಚಿತ್ರ ಫ್ಲಾಪ್​ ಆಗಲಿದೆ; ಭವಿಷ್ಯ ನುಡಿದ ನಟ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 27, 2021 | 1:45 PM

Share

ನಟಿ ಕಂಗನಾ ರಣಾವತ್​ ಅವರು ವಿವಾದ ಮಾಡಿಕೊಳ್ಳುವುದರಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅದರ ನಡುವೆಯೇ ಹೊಸ ಹೊಸ ಸಿನಿಮಾ ಅನೌನ್ಸ್​ ಮಾಡುತ್ತಿರುತ್ತಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡುವುದಾಗಿ ಅವರು ಕೆಲವೇ ದಿನಗಳ ಹಿಂದೆ ಘೋಷಿಸಿದರು. ಆ ಚಿತ್ರದ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ಅಚ್ಚರಿ ಎಂದರೆ ಚಿತ್ರಕ್ಕೆ ‘ಎಮರ್ಜೆನ್ಸಿ’ ಎಂದು ಹೆಸರು ಇಡಲಾಗಿದ್ದು, ಇಂದಿರಾ ಗಾಂಧಿಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಸ್ವತಃ ಕಂಗನಾ ಮಾಡಲಿದ್ದಾರೆ. ಆದರೆ ಆ ಸಿನಿಮಾ ಖಂಡಿತವಾಗಿ ಸೋಲಲಿದೆ ಎಂದು ಕಮಾಲ್​ ಆರ್​. ಖಾನ್ ಭವಿಷ್ಯ ನುಡಿದಿದ್ದಾರೆ.

‘ಇಂದಿರಾ ಗಾಂಧಿ ಮತ್ತು ಎಮರ್ಜೆನ್ಸಿ ಕುರಿತು ನಿರ್ದೇಶಕ ಮಧುರ್​ ಭಂಡಾರ್ಕರ್​ ಅವರು ‘ಇಂದೂ ಸರ್ಕಾರ್’ ಸಿನಿಮಾ ಮಾಡಿದ್ದರು. ನಾಯಿ ಕೂಡ ಆ ಸಿನಿಮಾ ನೋಡಲು ​ಹೋಗಿರಲಿಲ್ಲ. ಈಗ ಅಕ್ಕ ಕಂಗನಾ ರಣಾವತ್​ ಅವರು ಅದೇ ವಿಷಯದ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಅಂದರೆ ಆಕೆ ಸತತ 12ನೇ ಸಿನಿಮಾದಲ್ಲೂ ಸೋಲಬೇಕು ಅಂತ ಅಂದುಕೊಂಡಿದ್ದಾರೆ. ಅವರು ನಟಿಸಿದ 11 ಸಿನಿಮಾಗಳು ಈಗಾಗಲೇ ಫ್ಲಾಪ್​ ಆಗಿವೆ’ ಎಂದು ಕಮಾಲ್​ ಆರ್​. ಖಾನ್​ ವ್ಯಂಗ್ಯ ಮಾಡಿದ್ದಾರೆ.

ಸದಾ ಒಂದಿಲ್ಲೊಂದು ವಿಚಾರಗಳ ಬಗ್ಗೆ ಕಮೆಂಟ್​ ಮಾಡುತ್ತ, ವಿವಾದ ಸೃಷ್ಟಿಸಿಕೊಳ್ಳುವಲ್ಲಿ ಕಮಾಲ್​ ಆರ್​. ಖಾನ್​ ಫೇಮಸ್​. ಈಗ ಅವರು ಕಂಗನಾ ತಂಟೆಗೆ ಬಂದಿದ್ದಾರೆ. ಕಂಗನಾ ಎಂಥ ಕಿರಿಕ್​ ಪಾರ್ಟಿ ಎಂಬುದು ಗೊತ್ತಿದ್ದರೂ ಕೂಡ ಅವರು ‘ಎಮರ್ಜೆನ್ಸಿ’ ಸಿನಿಮಾ ಬಗ್ಗೆ ಅಪಶಕುನ ನುಡಿದಿದ್ದಾರೆ. ಇದು ಈಗ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಇದಕ್ಕೆ ಕಂಗನಾ ಯಾವ ರೀತಿ ತಿರುಗೇಟು ನೀಡುತ್ತಾರೆ ಎಂಬುದನ್ನು ನೋಡಲು ನೆಟ್ಟಿಗರು ಕಾಯುತ್ತಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ಮೇಲೆ ಕಂಗನಾ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಮತ್ತೊಮ್ಮೆ ನಿರ್ದೇಶಕಿಯ ಕ್ಯಾಪ್​ ಧರಿಸಲು ಖುಷಿ ಎನಿಸುತ್ತದೆ. ಈ ಚಿತ್ರಕ್ಕಾಗಿ 2 ವರ್ಷಕ್ಕೂ ಅಧಿಕ ಸಮಯ ಕೆಲಸ ಮಾಡಿದ ಬಳಿಕ ಅನಿಸುತ್ತಿರುವುದು ಏನೆಂದರೆ, ಈ ಚಿತ್ರಕ್ಕೆ ನನ್ನ ಹೊರತಾಗಿ ಬೇರೆ ಯಾರೂ ಕೂಡ ಚೆನ್ನಾಗಿ ನಿರ್ದೇಶನ ಮಾಡಲು ಸಾಧ್ಯವಿಲ್ಲ. ಈ ಸಿನಿಮಾಗಾಗಿ ನನ್ನ ನಟನೆಯ ಕೆಲವು ಬೇರೆ ಪ್ರಾಜೆಕ್ಟ್​ಗಳನ್ನು ತ್ಯಾಗ ಮಾಡಬೇಕಾಗಿದೆ. ಆದರೂ ನಾನು ಈ ಚಿತ್ರ ಮಾಡಲು ನಿರ್ಧರಿಸಿದ್ದೇನೆ. ತುಂಬ ಎಗ್ಸೈಟ್​ ಆಗಿದ್ದೇನೆ. ಇದು ಒಂದು ಅದ್ಭುತ ಜರ್ನಿ ಆಗಿರಲಿದೆ’ ಎಂದು ಕಂಗನಾ ಇತ್ತೀಚೆಗಷ್ಟೇ ಹೇಳಿಕೊಂಡಿದ್ದರು.

ಇದನ್ನೂ ಓದಿ:

‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾ ರಣಾವತ್​​ಗೆ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು

ಆ್ಯಸಿಡ್​ ದಾಳಿಯಿಂದ ಕಂಗನಾ ಅಕ್ಕನ ಮುಖಕ್ಕೆ 53 ಸರ್ಜರಿ; ಕಡೆಗೂ ಯೋಗದಿಂದ ನಡೆದಿದ್ದು ಮ್ಯಾಜಿಕ್​

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ