AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಪಾಕಿಸ್ತಾನದ ಬಗ್ಗೆ ಅಕ್ಷಯ್​ ಕುಮಾರ್​ ಪ್ರೀತಿಯ ಮಾತು; ವಿಡಿಯೋ ವೈರಲ್​ ಮಾಡಿದ ಕಮಾಲ್​ ಖಾನ್​

Kamaal R Khan: ಈ ವಿಚಾರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಅನೇಕರು ಅಕ್ಷಯ್​ ಕುಮಾರ್​ ಪರವಾಗಿ ಮಾತನಾಡಿದ್ದಾರೆ.

Akshay Kumar: ಪಾಕಿಸ್ತಾನದ ಬಗ್ಗೆ ಅಕ್ಷಯ್​ ಕುಮಾರ್​ ಪ್ರೀತಿಯ ಮಾತು; ವಿಡಿಯೋ ವೈರಲ್​ ಮಾಡಿದ ಕಮಾಲ್​ ಖಾನ್​
ಅಕ್ಷಯ್​ ಕುಮಾರ್​
TV9 Web
| Edited By: |

Updated on: Jun 18, 2021 | 5:06 PM

Share

ರಾಷ್ಟ್ರೀಯತೆಯ ವಿಷಯ ಬಂದಾಗಲೆಲ್ಲ ನಟ ಅಕ್ಷಯ್​ ಕುಮಾರ್​ ಅವರನ್ನು ಅನುಮಾನದ ದೃಷ್ಟಿಯಲ್ಲಿ ನೋಡಲಾಗುತ್ತದೆ. ಅವರು ಕೆನಡಾ ಪೌರತ್ವ ಹೊಂದಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಆಗಾಗ ಜನರು ಟ್ರೋಲ್​ ಮಾಡುತ್ತಾರೆ. ಅದರ ನಡುವೆ ಪಾಕಿಸ್ತಾನದ ಬಗ್ಗೆ ಅಕ್ಷಯ್​ ಕುಮಾರ್​ ಪ್ರೀತಿಯಿಂದ ಮಾತನಾಡಿರುವ ವಿಡಿಯೋ ಈಗ ವೈರಲ್​ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ಬಾಲಿವುಡ್​ನ ಕಿರಿಕ್​ ನಟ, ನಿರ್ಮಾಪಕ ಕಮಾಲ್​ ಆರ್​ ಖಾನ್​.

ಅಕ್ಷಯ್​ ಕುಮಾರ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ ಎಂಬುದರಲ್ಲಿ ಅನುಮಾನವೇ ಇಲ್ಲ. ಅದೇ ರೀತಿ ಪಾಕಿಸ್ತಾನದಲ್ಲೂ ಕೂಡ ಅವರ ಸಿನಿಮಾಗಳಿಗೆ ದೊಡ್ಡ ಪ್ರೇಕ್ಷಕ ವರ್ಗ ಇದೆ. ಉರಿ ಭಯೋತ್ಪಾದಕ ದಾಳಿ ಆದ ಬಳಿಕ ಭಾರತ ಮತ್ತು ಪಾಕ್​ ನಡುವೆ ಮನರಂಜನಾ ಕ್ಷೇತ್ರದ ಕೊಡುಕೊಳ್ಳುವಿಕೆ ಕೂಡ ನಿಂತು ಹೋಯಿತು. ಭಾರತೀಯ ಸಿನಿಮಾಗಳಲ್ಲಿ ಪಾಕ್​ನಲ್ಲಿ ರಿಲೀಸ್​ ಮಾಡುತ್ತಿಲ್ಲ. ಪಾಕ್ ನಟರನ್ನು ಭಾರತದಲ್ಲಿ ಬ್ಯಾನ್​ ಮಾಡಲಾಗಿದೆ. ಆದರೆ ಹಲವು ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ.

ಅಕ್ಷಯ್​ ಕುಮಾರ್​ ಸಿನಿಮಾಗಳಿಗೆ ಪಾಕಿಸ್ತಾನದಲ್ಲಿ ಒಳ್ಳೆಯ ಕಲೆಕ್ಷನ್​ ಆಗುತ್ತಿತ್ತು. ಆ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ನೀಡಿದ್ದ ಒಂದು ವಿಡಿಯೋ ಸಂದರ್ಶನದ ತುಣುಕು ಈಗ ವೈರಲ್​ ಆಗುತ್ತಿದೆ. ಅದನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಕಮಾಲ್​ ಆರ್.​ ಖಾನ್​ ಶೇರ್​ ಮಾಡಿಕೊಂಡಿದ್ದಾರೆ. ‘ಪಾಕಿಸ್ತಾನದಲ್ಲಿ ನನ್ನ ಸಿನಿಮಾಗಳು ಹೆಚ್ಚು ಬ್ಯುಸಿನೆಸ್​ ಮಾಡುತ್ತವೆ. ಪಾಕಿಸ್ತಾನದಿಂದ ನನಗೆ ಸಿಗುವಷ್ಟು ಪ್ರೀತಿ ಬೇರೆಲ್ಲಿಂದ ಸಿಗುತ್ತದೆ’ ಎಂದು ಆ ವಿಡಿಯೋದಲ್ಲಿ ಅಕ್ಷಯ್​ ಕುಮಾರ್​ ಹೇಳಿದ್ದರು. ‘ನಮ್ಮ ದೇಶಭಕ್ತ ಕೆನಡಿಯನ್​ ನಟ ಅಕ್ಕಿ ಅವರು ಪಾಕಿಸ್ತಾನದ ಬಗ್ಗೆ ಹೇಳಿದ ಮಾತು’ ಎಂಬ ವ್ಯಂಗ್ಯದ ಕ್ಯಾಪ್ಷನ್​ನೊಂದಿಗೆ ಕಮಾಲ್​ ಆರ್​. ಖಾನ್​ ಇದನ್ನು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಈ ವಿಚಾರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಅನೇಕರು ಅಕ್ಷಯ್​ ಕುಮಾರ್​ ಪರವಾಗಿ ಮಾತನಾಡಿದ್ದಾರೆ. ತಮ್ಮ ಕೆಲಸ ಮತ್ತು ದೇಣಿಗೆಗಳ ಮೂಲಕ ಅಕ್ಷಯ್​ ಕುಮಾರ್​ ಅವರು ಭಾರತದ ಬಗ್ಗೆ ಇರುವ ದೇಶಭಕ್ತಿಯನ್ನು ಸಾಬೀತು ಮಾಡಿದ್ದಾರೆ ಎಂದು ಹಲವರು ಕಮೆಂಟ್​ ಮಾಡಿದ್ದಾರೆ. ಕಳೆದ ವರ್ಷ ಕೊವಿಡ್​ನಿಂದ ಲಾಕ್​ಡೌನ್​ ಆದಾಗ ಪಿಎಂ ಕೇರ್ಸ್​ ಫಂಡ್​ಗೆ ಅಕ್ಷಯ್ ಕುಮಾರ್​ ಬರೋಬ್ಬರಿ 25 ಕೋಟಿ ರೂ. ದೇಣಿಗೆ ನೀಡಿದ್ದರು.

ಇದನ್ನೂ ಓದಿ:

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಅಂಡರ್​ಟೇಕರ್​ ಜತೆ ಗುದ್ದಾಡಿದ್ದ ಅಕ್ಷಯ್​ ಕುಮಾರ್​? ಫೋಟೋ ಹಂಚಿಕೊಂಡ ನಟ  

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ