AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?

ತಮಿಳುನಾಡಿನಲ್ಲಿ ‘ಬೀಸ್ಟ್’ ಬದಲು ಜನರು ‘ಕೆಜಿಎಫ್ 2’ ವೀಕ್ಷಿಸಿದ್ದಾರೆ. ಈಗ ಕಮಲ್ ಹಾಸನ್ ಹಾಗೂ ಇಳಯರಾಜ ಅವರು ತಮಿಳಿನಲ್ಲಿ ಈ ಚಿತ್ರ ವೀಕ್ಷಣೆ ಮಾಡಿದ್ದಾರೆ.

ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 29, 2022 | 4:04 PM

‘ಕೆಜಿಎಫ್: ಚಾಪ್ಟರ್ 2’ ಸಿನಿಮಾ (KGF Chapter 2) ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಿದೆ. ಬಾಲಿವುಡ್​(Bollywood) ಬಾಕ್ಸ್ ಆಫೀಸ್​ನಿಂದ ಈ ಸಿನಿಮಾ 350 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 400 ಕೋಟಿ ರೂಪಾಯಿ ಗಡಿ ದಾಟುವ ಸೂಚನೆ ಸಿಕ್ಕಿದೆ. ಈ ವಿಚಾರ ಇಡೀ ತಂಡಕ್ಕೆ ಖುಷಿ ನೀಡಿದೆ. ಇನ್ನು, ದೊಡ್ಡದೊಡ್ಡ ಸ್ಟಾರ್​ಗಳು ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲು ಅರ್ಜುನ್, ರಾಮ್ ಚರಣ್ (Ram Charan) ಮೊದಲಾದವರು ಯಶ್ ಚಿತ್ರದ ಬೆನ್ನು ತಟ್ಟಿದ್ದಾರೆ. ಈಗ ಹಿರಿಯ ನಟ ಕಮಲ್ ಹಾಸನ್ ಹಾಗೂ ಸಂಗೀತ ಲೋಕದ ದಿಗ್ಗಜ ಇಳಯರಾಜ ಅವರು ‘ಕೆಜಿಎಫ್: 2’ ವೀಕ್ಷಣೆ ಮಾಡಿದ್ದು, ಮೆಚ್ಚುಗೆ ಸೂಚಿಸಿದ್ದಾರೆ ಎಂದು ವರದಿ ಆಗಿದೆ.

‘ಕೆಜಿಎಫ್ 2’ ಸಿನಿಮಾ ಏಪ್ರಿಲ್ 14ರಂದು ತೆರೆಗೆ ಬಂದಿತ್ತು. 15 ದಿನಕ್ಕೆ ಈ ಸಿನಿಮಾ ಬರೋಬ್ಬರಿ 900 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತೆರೆಕಂಡಿದೆ. ಕೇರಳದ ಮಂದಿ ಕೂಡ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ‘ಬೀಸ್ಟ್’ ಬದಲು ಜನರು ‘ಕೆಜಿಎಫ್ 2’ ವೀಕ್ಷಿಸಿದ್ದಾರೆ. ಈಗ ಕಮಲ್ ಹಾಸನ್ ಹಾಗೂ ಇಳಯರಾಜ ಅವರು ತಮಿಳಿನಲ್ಲಿ ಈ ಚಿತ್ರ ವೀಕ್ಷಣೆ ಮಾಡಿದ್ದಾರೆ.

ಕಮಲ್ ಹಾಸನ್ ಹಾಗೂ ಇಳಯರಾಜ ಇಬ್ಬರೂ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದೆ. ವಿಶೇಷ ಸ್ಕ್ರೀನಿಂಗ್ ನಂತರ ಇಬ್ಬರೂ ಕ್ಯಾಮೆರಾಗೆ ಪೋಸ್​ ನೀಡಿದ್ದು ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ಹರಿದಾಡುತ್ತಿವೆ.

ಲೋಕೇಶ್ ಕನಗರಾಜ್ ನಿರ್ದೇಶನದ, ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ಜೂನ್ 3ರಂದು ತೆರೆಗೆ ಬರುತ್ತಿದೆ. ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಮೋಷನ್ ಮಾಡಲು ಚಿತ್ರತಂಡ ಪ್ಲ್ಯಾನ್ ರೂಪಿಸಿದೆ.     ಈ ಚಿತ್ರದ ಟ್ರೇಲರ್ ಮೇ 18ರಂದು ರಿಲೀಸ್ ಆಗುತ್ತಿದೆ.

‘ಕೆಜಿಎಫ್ 2’ ಸಿನಿಮಾ ಬಾಲಿವುಡ್​ನಲ್ಲಿ 350 ಕೋಟಿ ಗಳಿಕೆ ಮಾಡಿದೆ. ಈ ಮೂಲಕ ‘ಪಿಕೆ’, ‘ಸಂಜು’ ಚಿತ್ರಗಳ ಕಲೆಕ್ಷನ್ ಹಿಂದಿಕ್ಕಿದೆ. ಬಾಲಿವುಡ್​ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಎರಡನೇ ಸಿನಿಮಾ ಎಂದರೆ ಅದು ‘ದಂಗಲ್’. ಈ ಚಿತ್ರವನ್ನು ‘ಕೆಜಿಎಫ್ 2’ ಹಿಂದಿಕ್ಕಲಿದೆಯೇ ಎಂಬುದು ಸದ್ಯದ ಕುತೂಹಲ.

ಇದನ್ನೂ ಓದಿ: ಬಾಲಿವುಡ್​ನಲ್ಲಿ ಹಾಸಿಗೆಯನ್ನೇ ಉದ್ದ ಮಾಡಿ ಕಾಲು ಚಾಚಿದ ರಾಕಿ; ‘ಟೈಗರ್..’, ‘ಪಿಕೆ’ ಕಲೆಕ್ಷನ್ ಹಿಂದಿಕ್ಕಿದ ‘ಕೆಜಿಎಫ್ 2’

‘ಕೆಜಿಎಫ್ 2’, ‘ಆರ್​ಆರ್​ಆರ್’ ಗೆಲುವಿನ ಬಗ್ಗೆ ಅಭಿಷೇಕ್ ಬಚ್ಚನ್ ಹೇಳೋದೇ ಬೇರೆ; ಏನದು?

ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್