AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘೋಷಣೆ ಆಗಿಯೇ ಬಿಡ್ತು ರಜನಿ-ಕಮಲ್ ಸಿನಿಮಾ, ಆದರೆ ಒಂದು ಟ್ವಿಸ್ಟ್

Kamal Haasan-Rajinikanth: ಕಮಲ್ ಹಾಸನ್ ಹಾಗೂ ರಜನೀಕಾಂತ್ ಅವರುಗಳು ಭಾರತದ ಟಾಪ್ ಸೂಪರ್ ಸ್ಟಾರ್​​ಗಳು, ದಶಕಗಳ ಹಿಂದೆ ಈ ಇಬ್ಬರೂ ಒಟ್ಟಿಗೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಇದೀಗ ಈ ಇಬ್ಬರು ಸೂಪರ್ ಸ್ಟಾರ್​​ಗಳು ಮತ್ತೊಮ್ಮೆ ಸಿನಿಮಾಕ್ಕಾಗಿ ಪರಸ್ಪರ ಕೈ ಜೋಡಿಸಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಸಹ ಇದೆ. ಇಲ್ಲಿದೆ ನೋಡಿ ಇಬ್ಬರು ದಿಗ್ಗಜರ ಸಿನಿಮಾ ಬಗ್ಗೆ ಮಾಹಿತಿ...

ಘೋಷಣೆ ಆಗಿಯೇ ಬಿಡ್ತು ರಜನಿ-ಕಮಲ್ ಸಿನಿಮಾ, ಆದರೆ ಒಂದು ಟ್ವಿಸ್ಟ್
Rajinikanth Kamal Haasan
ಮಂಜುನಾಥ ಸಿ.
|

Updated on: Nov 06, 2025 | 8:02 AM

Share

ರಜನೀಕಾಂತ್ (Rajinikanth) ಮತ್ತು ಕಮಲ್ ಹಾಸನ್ ತಮಿಳು ಚಿತ್ರರಂಗದ ಮಾತ್ರವಲ್ಲ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್​​ಗಳು. ದಶಕಗಳಿಂದಲೂ ಇವರು ಸ್ಟಾರ್​​ಗಳಾಗಿ ಮೆರೆಯುತ್ತಾ ಬಂದಿದ್ದಾರೆ. ಇಬ್ಬರಿಗೂ ಸಹ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇದೀಗ ಈ ಇಬ್ಬರೂ ಸೂಪರ್ ಸ್ಟಾರ್​​ಗಳು ಒಂದೇ ಸಿನಿಮಾನಲ್ಲಿ ನಟಿಸಲು ಮುಂದಾಗಿದ್ದಾರೆ. ರಜನಿ-ಕಮಲ್ ಅವರುಗಳು ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಲು ಆರಂಭವಾಗಿ ತಿಂಗಳುಗಳೇ ಆಗಿದ್ದವು, ಆದರೆ ನಿನ್ನೆ (ನವೆಂಬರ್ 05) ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ. ಆದರೆ ಒಂದು ಟ್ವಿಸ್ಟ್ ಇದೆ.

ರಜನೀಕಾಂತ್ ಮತ್ತು ಕಮಲ್ ಹಾಸನ್ ಸಿನಿಮಾವನ್ನು ‘ವಿಕ್ರಂ’, ‘ಖೈದಿ’, ‘ಕೂಲಿ’ ಇನ್ನೂ ಕೆಲ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಟ್ರೆಂಡಿಂಗ್ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಸುಳ್ಳಾಗಿದ್ದು, ಹಿರಿಯ ನಿರ್ದೇಶಕರೊಬ್ಬರನ್ನು, ಇಬ್ಬರು ಸೂಪರ್ ಸ್ಟಾರ್​​ಗಳ ಸಿನಿಮಾ ನಿರ್ದೇಶಿಸಿಲು ಕರೆ ತರಲಾಗಿದೆ. ಮತ್ತೊಂದು ವಿಶೇಷವೆಂದರೆ ರಜನೀಕಾಂತ್-ಕಮಲ್ ಅವರ ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ಸ್ವತಃ ಕಮಲ್ ಹಾಸನ್ ಅವರೇ ಆಗಿದ್ದಾರೆ.

ಇನ್ನು ಇಬ್ಬರು ಸೂಪರ್ ಸ್ಟಾರ್ ಗಳ ಈ ಸಿನಿಮಾವನ್ನು ಸುಂದರ್ ಸಿ ಅವರು ನಿರ್ದೇಶನ ಮಾಡಲಿದ್ದಾರೆ. 28 ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ರಜನೀಕಾಂತ್ ಅವರ ‘ಅರುಣಾಚಲಂ’ ಸಿನಿಮಾವನ್ನು ಇವರೇ ನಿರ್ದೇಶಿಸಿದ್ದರು. ಇನ್ನು ಕಮಲ್ ಹಾಸನ್ ಅವರ ಸೂಪರ್ ಹಿಟ್ ಸಿನಿಮಾ ‘ಅನ್ಬೆ ಶಿವಂ’ ಅನ್ನು ಸಹ ಸುಂದರ್ ಸಿ ಅವರೇ ನಿರ್ದೇಶನ ಮಾಡಿದ್ದಾರೆ. ಈಗ ಇವರು ‘ಮೂಕುತ್ತಿ ಅಮ್ಮನ್ 2’ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಸಿನಿಮಾನಲ್ಲಿ ದುನಿಯಾ ವಿಜಿ ಸಹ ನಟಿಸುತ್ತಿದ್ದಾರೆ. ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲಮ್ಸ್ ವತಿಯಿಂದ ಸಿನಿಮಾದ ನಿರ್ಮಾಣ ಮಾಡಲಾಗುತ್ತಿದೆ. ಇದು ಈ ನಿರ್ಮಾಣ ಸಂಸ್ಥೆಯ 44ನೇ ವರ್ಷವಾಗಿದ್ದು, ಸಿನಿಮಾವನ್ನು ಮಹೇಂದ್ರನ್ ಎಂಬುವರ ಜೊತೆ ಸೇರಿ ನಿರ್ಮಿಸುತ್ತಿದ್ದಾರೆ ಕಮಲ್ ಹಾಸನ್.

ಇದನ್ನೂ ಓದಿ:ರಜನೀಕಾಂತ್​ಗೆ ಹೆಸರಿಟ್ಟಿದ್ಯಾರು? ಅದೇ ಹೆಸರು ಆಯ್ಕೆ ಮಾಡಿದ್ದೇಕೆ?

ಸಿನಿಮಾದ ಘೋಷಣೆಯನ್ನು ನಿನ್ನೆಯಷ್ಟೆ ರಾಜ್ ಕಮಲ್ ಫಿಲಮ್ಸ್ ವತಿಯಿಂದ ಮಾಡಲಾಗಿದೆ. ಆದರೆ ಸಿನಿಮಾದ ಘೋಷಣೆ ಸಂದೇಶ ಓದಿದ ಕೆಲವರಿಗೆ ಅನುಮಾನವೂ ಮೂಡಿದೆ. ಘೋಷಣೆಯಲ್ಲಿ ರಜನೀಕಾಂತ್ ಅವರ 173ನೇ ಸಿನಿಮಾ ಎಂದು ಹೇಳಲಾಗಿದೆ ಆದರೆ ಕಮಲ್ ಹಾಸನ್ ಅವರ ಸಿನಿಮಾ ಸಂಖ್ಯೆಯ ನಮೂದು ಇಲ್ಲ. ಇದು ಕೆಲ ಅಭಿಮಾನಿಗಳಲ್ಲಿ ಅನುಮಾನ ಮೂಡಿಸಿದ್ದು, ಈ ಸಿನಿಮಾನಲ್ಲಿ ಕಮಲ್ ಹಾಸನ್ ನಟಿಸುತ್ತಿಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಬದಲಿಗೆ ಕಮಲ್ ಹಾಸನ್ ಕೇವಲ ನಿರ್ಮಾಣ ಅಷ್ಟೆ ಮಾಡಲಿದ್ದಾರೆ ಎಂಬ ಮಾತುಗಳು ಸಹ ಹರಿದಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!