AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬರಲಿದೆ ‘ಅಮರನ್’ ಕಾಂಬಿನೇಷನ್; ‘ಸಿಯೋನ್’ ಚಿತ್ರಕ್ಕೆ ಕಮಲ್ ಬಂಡವಾಳ

ಶಿವಕಾರ್ತಿಕೇಯನ್ ನಟನೆ, ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾ ಇದು. ಈ ಕಾಲಿವುಡ್ ಚಿತ್ರಕ್ಕೆ ‘ಸಿಯೋನ್’ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಶಿವಕಾರ್ತಿಕೇಯನ್ ಗೆಟಪ್ ಡಿಫರೆಂಟ್ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಮತ್ತೆ ಬರಲಿದೆ ‘ಅಮರನ್’ ಕಾಂಬಿನೇಷನ್; ‘ಸಿಯೋನ್’ ಚಿತ್ರಕ್ಕೆ ಕಮಲ್ ಬಂಡವಾಳ
Sivakarthikeyan
ಮದನ್​ ಕುಮಾರ್​
|

Updated on: Feb 19, 2026 | 5:58 PM

Share

ಕಮಲ್ ಹಾಸನ್ (Kamal Haasan) ಅವರು ಯಶಸ್ವಿ ನಿರ್ಮಾಪಕ ಕೂಡ ಹೌದು. ಬೇರೆ ಹೀರೋಗಳ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ಅವರು ಉತ್ತಮ ಕಥೆಗಳನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಈ ಮೊದಲು ಶಿವಕಾರ್ತಿಕೇಯನ್ (Sivakarthikeyan) ನಟನೆಯ ‘ಅಮರನ್’ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಿದ್ದರು. ಈಗ ಮತ್ತೆ ಅವರು ಶಿವಕಾರ್ತಿಕೇಯನ್ ಜೊತೆ ಕೈ ಜೋಡಿಸಿದ್ದಾರೆ. ‘ಸಿಯೋನ್’ (Seyon) ಸಿನಿಮಾವನ್ನು ಕಮಲ್ ಹಾಸನ್ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಶಿವಕಾರ್ತಿಕೇಯನ್ ನಟನೆ ಮತ್ತು ಕಮಲ್ ಹಾಸನ್ ನಿರ್ಮಾಣದ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ ‘ಅಮರನ್’ ಸಿನಿಮಾ ಹಿಟ್ ಆಗಿತ್ತು. ಈಗ ಅದೇ ಭರವಸೆಯಲ್ಲಿ ‘ಸಿಯೋನ್’ ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾದಲ್ಲಿ ಕೂಡ ಒಂದು ವಿಶೇಷವಾದ ಕಥಾವಸ್ತುವನ್ನು ಜನರಿಗೆ ಪರಿಚಯಿಸಲಾಗುತ್ತದೆ. ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಸುಳಿವು ಸಿಕ್ಕಿದೆ.

‘ರಾಜ್ ಕಮಲ್ ಇಂಟರ್ನ್ಯಾಷನಲ್’ ಮತ್ತು ‘ಟರ್ಮಿರಿಕ್ ಮೀಡಿಯಾ’ ಸಂಸ್ಥೆಗಳ ಮೂಲಕ ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಅವರು ‘ಸಿಯೋನ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ. ಶಿವಕಾರ್ತಿಕೇಯನ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಗ್ಲಿಂಪ್ಸ್ ಬಿಡುಗಡೆ ಮಾಡಲಾಗಿದೆ.

ಇದರಲ್ಲಿ ಶಿವಕಾರ್ತಿಕೇಯನ್ ಅವರ ಗೆಟಪ್ ಗಮನ ಸೆಳೆಯುತ್ತಿದೆ. ಹಣೆಯಲ್ಲಿ ವಿಭೂತಿ ಧರಿಸಿ, ಕೈಯಲ್ಲಿ ಕತ್ತಿ ಹಿಡಿದು ಮಾಸ್ ಅವತಾರದಲ್ಲಿ ಶಿವಕಾರ್ತಿಕೇಯನ್ ಅವರು ಕಾಣಿಸಿಕೊಂಡಿದ್ದಾರೆ. ಗ್ಲಿಂಪ್ಸ್ ನೋಡಿದ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡುವಂತಾಗಿದೆ. 2026ರ ಅಕ್ಟೋಬರ್ ತಿಂಗಳಲ್ಲಿ ‘ಸಿಯೋನ್’ ಸಿನಿಮಾ ಬಿಡುಗಡೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: ಸ್ಟಾರ್ ನಿರ್ದೇಶಕನ ಜೊತೆ ಕೈ ಜೋಡಿಸಲಿರುವ ಕಮಲ್ ಹಾಸನ್

ಶಿವಕಾರ್ತಿಕೇಯನ್ ನಿರ್ಮಾಣದ ‘ತಾಯ್ ಕಿಳವಿ’ ಸಿನಿಮಾಗೆ ನಿರ್ದೇಶನ ಮಾಡಿದ ಶಿವಕುಮಾರ್ ಮುರುಗೇಶನ್ ಅವರೇ ‘ಸಿಯೋನ್’ ಚಿತ್ರಕ್ಕೂ ಆಕ್ಷನ್-ಕಟ್ ಹೇಳುತ್ತಿದ್ದಾರೆ‌. ಸಂತೋಷ್ ನಾರಾಯಣ್ ಅವರ ಸಂಗೀತ ನಿರ್ದೇಶಕ ಈ ಚಿತ್ರಕ್ಕೆ ಇದೆ. ವಿವೇಕ್ ವಿಜಯಕುಮಾರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸ್ಯಾನ್ ಲೋಕೇಶ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು