AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷ; ಅಪರೂಪದ ಸಾಧನೆ ಮಾಡಿದ ನಟ

ಕಮಲ್ ಹಾಸನ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳು ಕಳೆದಿವೆ. ಆರೂವರೆ ದಶಕ ಚಿತ್ರರಂಗದಲ್ಲಿ ಕಳೆಯ ಬೇಕು ಎಂದರೆ ಅದು ಸಣ್ಣ ಮಾತಲ್ಲ. ಇಂಥ ಅಪೂರಪದ ಸಾಧನೆಯನ್ನು ಕಮಲ್ ಹಾಸನ್ ಮಾಡಿ ತೋರಿಸಿದ್ದಾರೆ. ಅವರ ಸಾಧನೆಯನ್ನು ಎಲ್ಲರೂ ಮೆಚ್ಚಿದ್ದಾರೆ.

ಕಮಲ್ ಹಾಸನ್ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷ; ಅಪರೂಪದ ಸಾಧನೆ ಮಾಡಿದ ನಟ
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: Aug 14, 2024 | 8:43 AM

Share

ಚಿತ್ರರಂಗದಲ್ಲಿ 10 ವರ್ಷ ಕಳೆಯಬೇಕು ಎಂದಾಗ ಸಾಕಷ್ಟು ಚಾಲೆಂಜ್​ಗಳು ಎದುರಾಗುತ್ತವೆ. ಇದಕ್ಕೆ ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ಕಮಲ್ ಹಾಸನ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷಗಳು ಕಳೆದಿವೆ. ಅವರ ಫ್ಯಾನ್ಸ್ ಇದನ್ನು ಸೆಲೆಬ್ರೇಟ್ ಮಾಡುತ್ತಿದ್ದಾರೆ. ಅಪರೂಪದ ಸಾಧನೆ ಮಾಡಿದ ಅವರನ್ನು ಎಲ್ಲರೂ ಮೆಚ್ಚುತ್ತಿದ್ದಾರೆ. ಇತ್ತೀಚೆಗೆ ಅವರು ತಮ್ಮ ನಟನೆಯ ‘ಥಗ್ ಲೈಫ್​’ ಸಿನಿಮಾ ಸೆಟ್​ಗೆ ಬಂದಾಗ ತಂಡದವರು ಇದನ್ನು ನೆನಪಿಸಿಕೊಂಡು ಮೆಚ್ಚುಗೆ ಸೂಚಿಸಿದರು.

ಕಮಲ್ ಹಾಸನ್ ಅವರು ಬಾಲ ಕಲಾವಿದನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ನಟಿಸಿದ ಮೊದಲ ಸಿನಿಮಾ ‘ಕಲಾಥುರ್ ಕಣ್ಣಮ್ಮ’. ಇದು ತಮಿಳು ಸಿನಿಮಾ. ಈ ಸಿನಿಮಾ ರಿಲೀಸ್ ಆಗಿದ್ದು 1960ರ ಆಗಸ್ಟ್ 12ರಂದು. ಜೆಮಿನಿ ಗಣೇಶನ್, ಸಾವಿತ್ರಿ ಗಣೇಶ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಬಾಲ ಕಲಾವಿದನ ಪಾತ್ರ ಮಾಡಿದ್ದರು ಕಮಲ್ ಹಾಸನ್. ಅಲ್ಲಿಂದ ಅವರ ಚಿತ್ರರಂಗದ ಜರ್ನಿ ಆರಂಭ ಆಯಿತು. ಈಗ ಅವರು ಚಿತ್ರರಂಗದಲ್ಲಿ 65ನೇ ವರ್ಷದ ಜರ್ನಿ ಆರಂಭಿಸಿದ್ದಾರೆ. ಈ ಸಾಧನೆ ಮಾಡಿದ ಕೆಲವೇ ಕೆಲವು ಹಿರೋಗಳಲ್ಲಿ ಕಮಲ್ ಹಾಸನ್ ಕೂಡ ಒಬ್ಬರು.

ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರವನ್ನು ಮಣಿರತ್ನಂ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ನಾಯಕನ್’ (1987) ಬಳಿಕ ಮಣಿರತ್ನಂ ಹಾಗೂ ಕಮಲ್ ಹಾಸನ್ ಮತ್ತೆ ತೆರೆಮೇಲೆ ಒಂದಾಗಿದ್ದಾರೆ. ಈ ಚಿತ್ರದ ಸೆಟ್​ನಲ್ಲಿ ಕಮಲ್ ಹಾಸನ್​ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.

ಇದನ್ನೂ ಓದಿ: ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ

ಕಮಲ್ ಹಾಸನ್ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಬೇಕಿದೆ. ಇಷ್ಟು ವರ್ಷ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದರು. ಈಗ ಅದಕ್ಕೆ ಅವರು ಬ್ರೇಕ್ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು