Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷ; ಅಪರೂಪದ ಸಾಧನೆ ಮಾಡಿದ ನಟ

ಕಮಲ್ ಹಾಸನ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳು ಕಳೆದಿವೆ. ಆರೂವರೆ ದಶಕ ಚಿತ್ರರಂಗದಲ್ಲಿ ಕಳೆಯ ಬೇಕು ಎಂದರೆ ಅದು ಸಣ್ಣ ಮಾತಲ್ಲ. ಇಂಥ ಅಪೂರಪದ ಸಾಧನೆಯನ್ನು ಕಮಲ್ ಹಾಸನ್ ಮಾಡಿ ತೋರಿಸಿದ್ದಾರೆ. ಅವರ ಸಾಧನೆಯನ್ನು ಎಲ್ಲರೂ ಮೆಚ್ಚಿದ್ದಾರೆ.

ಕಮಲ್ ಹಾಸನ್ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷ; ಅಪರೂಪದ ಸಾಧನೆ ಮಾಡಿದ ನಟ
ಕಮಲ್ ಹಾಸನ್
Follow us
ರಾಜೇಶ್ ದುಗ್ಗುಮನೆ
|

Updated on: Aug 14, 2024 | 8:43 AM

ಚಿತ್ರರಂಗದಲ್ಲಿ 10 ವರ್ಷ ಕಳೆಯಬೇಕು ಎಂದಾಗ ಸಾಕಷ್ಟು ಚಾಲೆಂಜ್​ಗಳು ಎದುರಾಗುತ್ತವೆ. ಇದಕ್ಕೆ ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ಕಮಲ್ ಹಾಸನ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷಗಳು ಕಳೆದಿವೆ. ಅವರ ಫ್ಯಾನ್ಸ್ ಇದನ್ನು ಸೆಲೆಬ್ರೇಟ್ ಮಾಡುತ್ತಿದ್ದಾರೆ. ಅಪರೂಪದ ಸಾಧನೆ ಮಾಡಿದ ಅವರನ್ನು ಎಲ್ಲರೂ ಮೆಚ್ಚುತ್ತಿದ್ದಾರೆ. ಇತ್ತೀಚೆಗೆ ಅವರು ತಮ್ಮ ನಟನೆಯ ‘ಥಗ್ ಲೈಫ್​’ ಸಿನಿಮಾ ಸೆಟ್​ಗೆ ಬಂದಾಗ ತಂಡದವರು ಇದನ್ನು ನೆನಪಿಸಿಕೊಂಡು ಮೆಚ್ಚುಗೆ ಸೂಚಿಸಿದರು.

ಕಮಲ್ ಹಾಸನ್ ಅವರು ಬಾಲ ಕಲಾವಿದನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ನಟಿಸಿದ ಮೊದಲ ಸಿನಿಮಾ ‘ಕಲಾಥುರ್ ಕಣ್ಣಮ್ಮ’. ಇದು ತಮಿಳು ಸಿನಿಮಾ. ಈ ಸಿನಿಮಾ ರಿಲೀಸ್ ಆಗಿದ್ದು 1960ರ ಆಗಸ್ಟ್ 12ರಂದು. ಜೆಮಿನಿ ಗಣೇಶನ್, ಸಾವಿತ್ರಿ ಗಣೇಶ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಬಾಲ ಕಲಾವಿದನ ಪಾತ್ರ ಮಾಡಿದ್ದರು ಕಮಲ್ ಹಾಸನ್. ಅಲ್ಲಿಂದ ಅವರ ಚಿತ್ರರಂಗದ ಜರ್ನಿ ಆರಂಭ ಆಯಿತು. ಈಗ ಅವರು ಚಿತ್ರರಂಗದಲ್ಲಿ 65ನೇ ವರ್ಷದ ಜರ್ನಿ ಆರಂಭಿಸಿದ್ದಾರೆ. ಈ ಸಾಧನೆ ಮಾಡಿದ ಕೆಲವೇ ಕೆಲವು ಹಿರೋಗಳಲ್ಲಿ ಕಮಲ್ ಹಾಸನ್ ಕೂಡ ಒಬ್ಬರು.

ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರವನ್ನು ಮಣಿರತ್ನಂ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ನಾಯಕನ್’ (1987) ಬಳಿಕ ಮಣಿರತ್ನಂ ಹಾಗೂ ಕಮಲ್ ಹಾಸನ್ ಮತ್ತೆ ತೆರೆಮೇಲೆ ಒಂದಾಗಿದ್ದಾರೆ. ಈ ಚಿತ್ರದ ಸೆಟ್​ನಲ್ಲಿ ಕಮಲ್ ಹಾಸನ್​ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.

ಇದನ್ನೂ ಓದಿ: ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ

ಕಮಲ್ ಹಾಸನ್ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಬೇಕಿದೆ. ಇಷ್ಟು ವರ್ಷ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದರು. ಈಗ ಅದಕ್ಕೆ ಅವರು ಬ್ರೇಕ್ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ