ಕಮಲ್ ಹಾಸನ್ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷ; ಅಪರೂಪದ ಸಾಧನೆ ಮಾಡಿದ ನಟ

ಕಮಲ್ ಹಾಸನ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳು ಕಳೆದಿವೆ. ಆರೂವರೆ ದಶಕ ಚಿತ್ರರಂಗದಲ್ಲಿ ಕಳೆಯ ಬೇಕು ಎಂದರೆ ಅದು ಸಣ್ಣ ಮಾತಲ್ಲ. ಇಂಥ ಅಪೂರಪದ ಸಾಧನೆಯನ್ನು ಕಮಲ್ ಹಾಸನ್ ಮಾಡಿ ತೋರಿಸಿದ್ದಾರೆ. ಅವರ ಸಾಧನೆಯನ್ನು ಎಲ್ಲರೂ ಮೆಚ್ಚಿದ್ದಾರೆ.

ಕಮಲ್ ಹಾಸನ್ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷ; ಅಪರೂಪದ ಸಾಧನೆ ಮಾಡಿದ ನಟ
ಕಮಲ್ ಹಾಸನ್
Follow us
|

Updated on: Aug 14, 2024 | 8:43 AM

ಚಿತ್ರರಂಗದಲ್ಲಿ 10 ವರ್ಷ ಕಳೆಯಬೇಕು ಎಂದಾಗ ಸಾಕಷ್ಟು ಚಾಲೆಂಜ್​ಗಳು ಎದುರಾಗುತ್ತವೆ. ಇದಕ್ಕೆ ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ಕಮಲ್ ಹಾಸನ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಬರೋಬ್ಬರಿ 64 ವರ್ಷಗಳು ಕಳೆದಿವೆ. ಅವರ ಫ್ಯಾನ್ಸ್ ಇದನ್ನು ಸೆಲೆಬ್ರೇಟ್ ಮಾಡುತ್ತಿದ್ದಾರೆ. ಅಪರೂಪದ ಸಾಧನೆ ಮಾಡಿದ ಅವರನ್ನು ಎಲ್ಲರೂ ಮೆಚ್ಚುತ್ತಿದ್ದಾರೆ. ಇತ್ತೀಚೆಗೆ ಅವರು ತಮ್ಮ ನಟನೆಯ ‘ಥಗ್ ಲೈಫ್​’ ಸಿನಿಮಾ ಸೆಟ್​ಗೆ ಬಂದಾಗ ತಂಡದವರು ಇದನ್ನು ನೆನಪಿಸಿಕೊಂಡು ಮೆಚ್ಚುಗೆ ಸೂಚಿಸಿದರು.

ಕಮಲ್ ಹಾಸನ್ ಅವರು ಬಾಲ ಕಲಾವಿದನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ನಟಿಸಿದ ಮೊದಲ ಸಿನಿಮಾ ‘ಕಲಾಥುರ್ ಕಣ್ಣಮ್ಮ’. ಇದು ತಮಿಳು ಸಿನಿಮಾ. ಈ ಸಿನಿಮಾ ರಿಲೀಸ್ ಆಗಿದ್ದು 1960ರ ಆಗಸ್ಟ್ 12ರಂದು. ಜೆಮಿನಿ ಗಣೇಶನ್, ಸಾವಿತ್ರಿ ಗಣೇಶ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಬಾಲ ಕಲಾವಿದನ ಪಾತ್ರ ಮಾಡಿದ್ದರು ಕಮಲ್ ಹಾಸನ್. ಅಲ್ಲಿಂದ ಅವರ ಚಿತ್ರರಂಗದ ಜರ್ನಿ ಆರಂಭ ಆಯಿತು. ಈಗ ಅವರು ಚಿತ್ರರಂಗದಲ್ಲಿ 65ನೇ ವರ್ಷದ ಜರ್ನಿ ಆರಂಭಿಸಿದ್ದಾರೆ. ಈ ಸಾಧನೆ ಮಾಡಿದ ಕೆಲವೇ ಕೆಲವು ಹಿರೋಗಳಲ್ಲಿ ಕಮಲ್ ಹಾಸನ್ ಕೂಡ ಒಬ್ಬರು.

ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರವನ್ನು ಮಣಿರತ್ನಂ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ನಾಯಕನ್’ (1987) ಬಳಿಕ ಮಣಿರತ್ನಂ ಹಾಗೂ ಕಮಲ್ ಹಾಸನ್ ಮತ್ತೆ ತೆರೆಮೇಲೆ ಒಂದಾಗಿದ್ದಾರೆ. ಈ ಚಿತ್ರದ ಸೆಟ್​ನಲ್ಲಿ ಕಮಲ್ ಹಾಸನ್​ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.

ಇದನ್ನೂ ಓದಿ: ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ

ಕಮಲ್ ಹಾಸನ್ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಬೇಕಿದೆ. ಇಷ್ಟು ವರ್ಷ ಅವರು ಬಿಗ್ ಬಾಸ್ ನಡೆಸಿಕೊಡುತ್ತಿದ್ದರು. ಈಗ ಅದಕ್ಕೆ ಅವರು ಬ್ರೇಕ್ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ