AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಕೋಟಿ ರೂಪಾಯಿ ಮೋಸ ಹೋದ ಕಮಲ್ ಹಾಸನ್ ಮಾಜಿ ಪಾರ್ಟ್ನರ್ ಗೌತಮಿ

 ಗೌತಮಿ ಅವರು ಚೆನ್ನೈನ ಶ್ರೀಪೆರಂಬದೂರ್​ನಲ್ಲಿ 46 ಎಕರೆ ಭೂಮಿ ಖರೀದಿ ಮಾಡಿದ್ದರು. ಸಿನಿಮಾ ಇಂಡಸ್ಟ್ರಿಯಲ್ಲಿ ಗಳಿಕೆ ಮಾಡಿದ ಅಷ್ಟೂ ಹಣವನ್ನು ಅವರು ಜಮೀನು ಖರೀದಿ ಮಾಡಲು ಬಳಕೆ ಮಾಡಿಕೊಂಡಿದ್ದರು. ಜಾಗದ ಈಗಿನ ಮಾರುಕಟ್ಟೆ ಬೆಲೆ 25 ಕೋಟಿ ರೂಪಾಯಿಗೂ ಅಧಿಕವಾಗಿದೆ ಎನ್ನಲಾಗಿದೆ.

25 ಕೋಟಿ ರೂಪಾಯಿ ಮೋಸ ಹೋದ ಕಮಲ್ ಹಾಸನ್ ಮಾಜಿ ಪಾರ್ಟ್ನರ್ ಗೌತಮಿ
ಗೌತಮಿ-ಕಮಲ್
ರಾಜೇಶ್ ದುಗ್ಗುಮನೆ
|

Updated on: Sep 14, 2023 | 7:10 AM

Share

ಕಮಲ್ ಹಾಸನ್ (Kamal Haasan) ಮಾಜಿ ಪಾರ್ಟ್ನರ್ (ಅಧಿಕೃತವಾಗಿ ಪತ್ನಿ ಅಲ್ಲ) ಗೌತಮಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ಬಿಲ್ಡರ್​ನಿಂದ ಮೋಸ ಹೋಗಿದ್ದಾರೆ. ಈ ಕಾರಣದಿಂದ ಅವರಿಗೆ 25 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಈ ಬಗ್ಗೆ ಗೌತಮಿ ಅವರು ಚೆನ್ನೈ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಮಲ್ ಹಾಸನ್ ಹಾಗೂ ಗೌತಮಿ (Gautami) ಒಟ್ಟಾಗಿ ಬಾಳ್ವೆ ನಡೆಸುತ್ತಿದ್ದರು. 2016ರಲ್ಲಿ ಬೇರೆ ಆದರು. ಗೌತಮಿ ನಟಿ ಕೂಡ ಹೌದು.

ಗೌತಮಿ ಅವರು ಚೆನ್ನೈನ ಶ್ರೀಪೆರಂಬದೂರ್​ನಲ್ಲಿ 46 ಎಕರೆ ಭೂಮಿ ಖರೀದಿ ಮಾಡಿದ್ದರು. ಸಿನಿಮಾ ಇಂಡಸ್ಟ್ರಿಯಲ್ಲಿ ಗಳಿಕೆ ಮಾಡಿದ ಅಷ್ಟೂ ಹಣವನ್ನು ಅವರು ಜಮೀನು ಖರೀದಿ ಮಾಡಲು ಬಳಕೆ ಮಾಡಿಕೊಂಡಿದ್ದರು. ಜಾಗದ ಈಗಿನ ಮಾರುಕಟ್ಟೆ ಬೆಲೆ 25 ಕೋಟಿ ರೂಪಾಯಿಗೂ ಅಧಿಕವಾಗಿದೆ ಎನ್ನಲಾಗಿದೆ. ವೈದ್ಯಕಿಯ ಖರ್ಚು ಹಾಗೂ ಮಗಳ ಶಿಕ್ಷಣಕ್ಕಾಗಿ ಹಣ ಬೇಕಿರುವುದರಿಂದ ಗೌತಮಿ ಅವರು ಈ ಭೂಮಿ ಮಾರಲು ಮುಂದಾಗಿದ್ದರು. ಇದನ್ನು ತಿಳಿದ ಬಿಲ್ಡರ್ ಒಬ್ಬರು ಅವರನ್ನು ಸಂಪರ್ಕಿಸಿದ್ದಾರೆ ಮತ್ತು ಸುಲಭದಲ್ಲಿ ಭೂಮಿ ಮಾರಾಟ ಮಾಡಿಕೊಡುವುದಾಗಿ ಹೇಳಿದ್ದಾರೆ.

ವ್ಯವಹಾರ ಸುಲಭವಾಗಲಿ ಎನ್ನುವ ಕಾರಣಕ್ಕೆ 45 ಎಕರೆ ಜಾಗದ ಒಡೆತನವನ್ನು ಬಿಲ್ಡರ್​ಗೆ ನೀಡಿದ್ದರು. ಆದರೆ, ಬಿಲ್ಡರ್ ಇದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಸಂಪೂರ್ಣ ಜಾಗದ ಹಕ್ಕನ್ನು ಅವರೇ ಪಡೆದುಕೊಂಡಿದ್ದಾರೆ. ಸದ್ಯ ಈ ಪ್ರಕರಣ ಸಿಸಿಬಿಗೆ ವರ್ಗವಾಣೆ ಆಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ: ಮಣಿರತ್ನಂ-ಕಮಲ್ ಹಾಸನ್ ಸಿನಿಮಾದಲ್ಲಿ ತಾರಾ ದಂಡು: ಮೇಕಪ್ ​ಮ್ಯಾನ್​ನಿಂದಾಗಿ ಗುಟ್ಟು ರಟ್ಟು

ಗೌತಮಿ ಅವರಿಗೆ 55 ವರ್ಷ. ಅವರು 1987ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಸಿನಿಮಾದಲ್ಲಿ ನಟಿಸಿ ಅವರು ಬಣ್ಣದ ಲೋಕಕ್ಕೆ ಬಂದರು. ‘ಏಳು ಸುತ್ತಿನ ಕೋಟೆ’, ‘ಸಾಹಸ ವೀರ’ ಮೊದಲಾದ ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2017ರ ಬಳಿಕ ಗೌತಮಿ ಅವರು ಬಣ್ಣ ಹಚ್ಚಿರಲಿಲ್ಲ. ಈಗ ಮತ್ತೆ ಅವರು ಕಂಬ್ಯಾಕ್ ಮಾಡಿದ್ದಾರೆ. 2004ರಿಂದ 2016ರವರೆಗೆ ಇಬ್ಬರೂ ಒಟ್ಟಾಗಿ ಇದ್ದರು. ಅಂದಹಾಗೆ ಇವರ ಮದುವೆ ನೋಂದಣಿ ಆಗಿಲ್ಲ. ಇದನ್ನು ಲಿವ್​ಇನ್ ರಿಲೇಶನ್​ಶಿಪ್ ರೀತಿಯಲ್ಲಿ ಪರಿಗಣಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ