AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಕೋಟಿ ರೂಪಾಯಿ ಮೋಸ ಹೋದ ಕಮಲ್ ಹಾಸನ್ ಮಾಜಿ ಪಾರ್ಟ್ನರ್ ಗೌತಮಿ

 ಗೌತಮಿ ಅವರು ಚೆನ್ನೈನ ಶ್ರೀಪೆರಂಬದೂರ್​ನಲ್ಲಿ 46 ಎಕರೆ ಭೂಮಿ ಖರೀದಿ ಮಾಡಿದ್ದರು. ಸಿನಿಮಾ ಇಂಡಸ್ಟ್ರಿಯಲ್ಲಿ ಗಳಿಕೆ ಮಾಡಿದ ಅಷ್ಟೂ ಹಣವನ್ನು ಅವರು ಜಮೀನು ಖರೀದಿ ಮಾಡಲು ಬಳಕೆ ಮಾಡಿಕೊಂಡಿದ್ದರು. ಜಾಗದ ಈಗಿನ ಮಾರುಕಟ್ಟೆ ಬೆಲೆ 25 ಕೋಟಿ ರೂಪಾಯಿಗೂ ಅಧಿಕವಾಗಿದೆ ಎನ್ನಲಾಗಿದೆ.

25 ಕೋಟಿ ರೂಪಾಯಿ ಮೋಸ ಹೋದ ಕಮಲ್ ಹಾಸನ್ ಮಾಜಿ ಪಾರ್ಟ್ನರ್ ಗೌತಮಿ
ಗೌತಮಿ-ಕಮಲ್
ರಾಜೇಶ್ ದುಗ್ಗುಮನೆ
|

Updated on: Sep 14, 2023 | 7:10 AM

Share

ಕಮಲ್ ಹಾಸನ್ (Kamal Haasan) ಮಾಜಿ ಪಾರ್ಟ್ನರ್ (ಅಧಿಕೃತವಾಗಿ ಪತ್ನಿ ಅಲ್ಲ) ಗೌತಮಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ಬಿಲ್ಡರ್​ನಿಂದ ಮೋಸ ಹೋಗಿದ್ದಾರೆ. ಈ ಕಾರಣದಿಂದ ಅವರಿಗೆ 25 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಈ ಬಗ್ಗೆ ಗೌತಮಿ ಅವರು ಚೆನ್ನೈ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಮಲ್ ಹಾಸನ್ ಹಾಗೂ ಗೌತಮಿ (Gautami) ಒಟ್ಟಾಗಿ ಬಾಳ್ವೆ ನಡೆಸುತ್ತಿದ್ದರು. 2016ರಲ್ಲಿ ಬೇರೆ ಆದರು. ಗೌತಮಿ ನಟಿ ಕೂಡ ಹೌದು.

ಗೌತಮಿ ಅವರು ಚೆನ್ನೈನ ಶ್ರೀಪೆರಂಬದೂರ್​ನಲ್ಲಿ 46 ಎಕರೆ ಭೂಮಿ ಖರೀದಿ ಮಾಡಿದ್ದರು. ಸಿನಿಮಾ ಇಂಡಸ್ಟ್ರಿಯಲ್ಲಿ ಗಳಿಕೆ ಮಾಡಿದ ಅಷ್ಟೂ ಹಣವನ್ನು ಅವರು ಜಮೀನು ಖರೀದಿ ಮಾಡಲು ಬಳಕೆ ಮಾಡಿಕೊಂಡಿದ್ದರು. ಜಾಗದ ಈಗಿನ ಮಾರುಕಟ್ಟೆ ಬೆಲೆ 25 ಕೋಟಿ ರೂಪಾಯಿಗೂ ಅಧಿಕವಾಗಿದೆ ಎನ್ನಲಾಗಿದೆ. ವೈದ್ಯಕಿಯ ಖರ್ಚು ಹಾಗೂ ಮಗಳ ಶಿಕ್ಷಣಕ್ಕಾಗಿ ಹಣ ಬೇಕಿರುವುದರಿಂದ ಗೌತಮಿ ಅವರು ಈ ಭೂಮಿ ಮಾರಲು ಮುಂದಾಗಿದ್ದರು. ಇದನ್ನು ತಿಳಿದ ಬಿಲ್ಡರ್ ಒಬ್ಬರು ಅವರನ್ನು ಸಂಪರ್ಕಿಸಿದ್ದಾರೆ ಮತ್ತು ಸುಲಭದಲ್ಲಿ ಭೂಮಿ ಮಾರಾಟ ಮಾಡಿಕೊಡುವುದಾಗಿ ಹೇಳಿದ್ದಾರೆ.

ವ್ಯವಹಾರ ಸುಲಭವಾಗಲಿ ಎನ್ನುವ ಕಾರಣಕ್ಕೆ 45 ಎಕರೆ ಜಾಗದ ಒಡೆತನವನ್ನು ಬಿಲ್ಡರ್​ಗೆ ನೀಡಿದ್ದರು. ಆದರೆ, ಬಿಲ್ಡರ್ ಇದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಸಂಪೂರ್ಣ ಜಾಗದ ಹಕ್ಕನ್ನು ಅವರೇ ಪಡೆದುಕೊಂಡಿದ್ದಾರೆ. ಸದ್ಯ ಈ ಪ್ರಕರಣ ಸಿಸಿಬಿಗೆ ವರ್ಗವಾಣೆ ಆಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ: ಮಣಿರತ್ನಂ-ಕಮಲ್ ಹಾಸನ್ ಸಿನಿಮಾದಲ್ಲಿ ತಾರಾ ದಂಡು: ಮೇಕಪ್ ​ಮ್ಯಾನ್​ನಿಂದಾಗಿ ಗುಟ್ಟು ರಟ್ಟು

ಗೌತಮಿ ಅವರಿಗೆ 55 ವರ್ಷ. ಅವರು 1987ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಸಿನಿಮಾದಲ್ಲಿ ನಟಿಸಿ ಅವರು ಬಣ್ಣದ ಲೋಕಕ್ಕೆ ಬಂದರು. ‘ಏಳು ಸುತ್ತಿನ ಕೋಟೆ’, ‘ಸಾಹಸ ವೀರ’ ಮೊದಲಾದ ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2017ರ ಬಳಿಕ ಗೌತಮಿ ಅವರು ಬಣ್ಣ ಹಚ್ಚಿರಲಿಲ್ಲ. ಈಗ ಮತ್ತೆ ಅವರು ಕಂಬ್ಯಾಕ್ ಮಾಡಿದ್ದಾರೆ. 2004ರಿಂದ 2016ರವರೆಗೆ ಇಬ್ಬರೂ ಒಟ್ಟಾಗಿ ಇದ್ದರು. ಅಂದಹಾಗೆ ಇವರ ಮದುವೆ ನೋಂದಣಿ ಆಗಿಲ್ಲ. ಇದನ್ನು ಲಿವ್​ಇನ್ ರಿಲೇಶನ್​ಶಿಪ್ ರೀತಿಯಲ್ಲಿ ಪರಿಗಣಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ