AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

ಸಿನಿಮಾ ಬಿಟ್ಟು ರಂಗಭೂಮಿ ಕಡೆಗೆ ತೆರಳಿದ್ದ ಸಾರಿಕಾ ಅವರಿಗೆ ಜೀವನ ಸಾಗಿಸುವುದು ಕಷ್ಟ ಆಗಿತ್ತು. ಈಗ ಅವರು ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ.

ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ
ಸಾರಿಕಾ, ಶ್ರುತಿ ಹಾಸನ್, ಅಕ್ಷರಾ ಹಾಸನ್, ಕಮಲ್ ಹಾಸನ್
TV9 Web
| Edited By: |

Updated on: May 18, 2022 | 2:35 PM

Share

ನಟ ಕಮಲ್​ ಹಾಸನ್​ (Kamal Haasan) ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ಬ್ಯುಸಿ ಆಗಿದೆ. ಕಮಲ್​ ಹಾಸನ್​ ಅವರ ಎರಡನೇ ಹಾಗೂ ಮಾಜಿ ಪತ್ನಿ ಸಾರಿಕಾ (Sarika) ಅವರು ಕೂಡ ಫೇಮಸ್​ ನಟಿ. ಅದೇ ರೀತಿ, ಸಾರಿಕಾ ಮಕ್ಕಳಾದ ಅಕ್ಷರಾ ಹಾಸನ್​ ಹಾಗೂ ಶ್ರುತಿ ಹಾಸನ್​ ಅವರು ಸಹ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಅಚ್ಚರಿ ಎಂದರೆ ಸಾರಿಕಾ ಅವರು ತೀವ್ರ ಆರ್ಧಿಕ ಸಂಕಷ್ಟ ಎದುರಿಸಿದ್ದಾರೆ. ಲಾಕ್​ ಡೌನ್ (Lockdown)​ ಸಂದರ್ಭದಲ್ಲಿ ಅನೇಕ ಕಲಾವಿದರ ಜೀವನ ಕಷ್ಟ ಆಗಿತ್ತು. ಸಾರಿಕಾ ಕೂಡ ಜೀವನ ಸಾಗಿಸಲು ಪ್ರತಿ ದಿನ ಕಷ್ಟಪಟ್ಟಿದ್ದರು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ಬಾಯಿ ಬಿಟ್ಟಿದ್ದಾರೆ. ಕೇವಲ 3 ಸಾವಿರ ರೂಪಾಯಿ ದುಡಿಯುವ ಮೂಲಕ ಲಾಕ್​ಡೌನ್​ನಲ್ಲಿ ತೀವ್ರ ಸಂಕಷ್ಟದ ದಿನಗಳನ್ನು ಎದುರಿಸಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ.

ಬಾಲ ನಟಿಯಾಗಿಯೇ ಬಣ್ಣದ ಲೋಕಕ್ಕೆ ಕಾಲಿಟ್ಟವರು ಸಾರಿಕಾ. ನಂತರ ಅವರು ಅನೇಕ ಸಿನಿಮಾಗಳಲ್ಲಿ ಹೀರೋಯಿನ್​ ಆಗಿ ಮಿಂಚಿದರು. ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದ ಪ್ರತಿಭಾವಂತೆ ಅವರು. ಆದರೆ ಲಾಕ್​ಡೌನ್​ ಆಗುವುದಕ್ಕಿಂತಲೂ ಮುನ್ನ ಒಂದು ವರ್ಷ ಬ್ರೇಕ್​ ತೆಗೆದುಕೊಳ್ಳೋಣ ಎಂದು ಅವರು ನಿರ್ಧರಿಸಿದ್ದರು. ಹಾಗಾಗಿ ಅವರು ರಂಗಭೂಮಿಯಲ್ಲಿ ತೊಡಗಿಕೊಂಡರು. ಆದರೆ ಅದು 5 ವರ್ಷಗಳಿಗೆ ಮುಂದುವರಿಯಿತು. ಅದೇ ಸಮಯಕ್ಕೆ ಲಾಕ್​ಡೌನ್ ಆರಂಭ ಆಗಿದ್ದರಿಂದ ಪರಿಸ್ಥಿತಿ ಕಷ್ಟ ಆಯಿತು. ಆಗ ಅವರು ಹಣವಿಲ್ಲದೇ ಒದ್ದಾಡಬೇಕಾಯಿತು.

ಇದನ್ನೂ ಓದಿ: ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

ಇದನ್ನೂ ಓದಿ
Image
Vikram Trailer: ಯಶ್​ ಸ್ಟೈಲ್​ ಕಾಪಿ ಮಾಡಿದ್ರಾ ಕಮಲ್​ ಹಾಸನ್? ‘ವಿಕ್ರಮ್​’ ಚಿತ್ರದಲ್ಲೂ ಇದೆ ದೊಡ್ಡಮ್ಮ ಗನ್​
Image
ಶ್ರುತಿ ಹಾಸನ್​ ಹೊಸ ಫೋಟೋಶೂಟ್​; ಬಗೆ ಬಗೆಯಲ್ಲಿ ಪೋಸ್​ ನೀಡಿದ ಕಮಲ್ ಹಾಸನ್​​ ಪುತ್ರಿ
Image
ಲಸಿಕೆ ಪಡೆದ ನಂತರವೂ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಹೇಗೆ? ವೈದ್ಯರು ಹೇಳಿದ್ದಿಷ್ಟು
Image
ಕಮಲ್​ ಹಾಸನ್​ ವಿಚ್ಛೇದನ ಪಡೆದಾಗ ಖುಷಿಪಟ್ಟಿದ್ದ ಮಗಳು ಶ್ರುತಿ ಹಾಸನ್​; ಕಾರಣ ಏನು?

ಸಾರಿಕಾ ಅವರು ಕೊನೆಯದಾಗಿ ನಟಿಸಿದ್ದು ‘ಬಾರ್ ಬಾರ್​ ದೇಖೋ’ ಸಿನಿಮಾದಲ್ಲಿ. ಆ ಚಿತ್ರದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ, ಕತ್ರಿನಾ ಕೈಫ್​ ಕೂಡ ನಟಿಸಿದ್ದರು. ಆ ಸಿನಿಮಾ ಬಳಿಕ ಸಾರಿಕಾ ಯಾವುದೇ ಹೊಸ ಚಿತ್ರದಲ್ಲಿ ನಟಿಸಲಿಲ್ಲ. ಒಳ್ಳೆಯ ಪಾತ್ರಗಳು ಸಿಗದ ಕಾರಣ ಅವರು ರಂಗಭೂಮಿ ಕಡೆಗೆ ಹೊರಳಿದರು. ಆದರೆ ರಂಗಭೂಮಿಯಲ್ಲಿ ಅವರಿಗೆ ಸಿಗುತ್ತಿದ್ದ ಸಂಭಾವನೆ ತುಂಬ ಕಡಿಮೆ. ಕೇವಲ 3 ಸಾವಿರ ರೂಪಾಯಿ ಪಡೆಯುವುದರಿಂದ ಜೀವನ ನಡೆಸುವುದು ಕಷ್ಟ ಎಂಬುದು ಅವರಿಗೆ ಅರಿವಾಯಿತು. ನಂತರ ಅವರು ಸಿನಿಮಾಗೆ ಮರಳುವ ನಿರ್ಧಾರ ಮಾಡಿದರು.

ಇದನ್ನೂ ಓದಿ: ಲಾಕ್​ಡೌನ್​ ಎಫೆಕ್ಟ್: ಬಣ್ಣದ ಲೋಕ ತೊರೆದು ಮೀನು ಮಾರಾಟಕ್ಕೆ ಇಳಿದ ಕಿರುತೆರೆ ನಟ, ಫೋಟೋ ವೈರಲ್​

ಈಗ ಸಾರಿಕಾ ಅವರು ಅನೇಕ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡಿದ್ದಾರೆ. ಅವರು ನಟಿಸಿರುವ ‘ಮಾಡರ್ನ್​ ಲವ್​: ಮುಂಬೈ’ ವೆಬ್​ ಸಿರೀಸ್​ ಮೇ 13ರಂದು ಬಿಡುಗಡೆ ಆಗಿದೆ. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಇದು ಪ್ರಸಾರ ಆಗುತ್ತಿದೆ. ಸಾರಿಕಾ ಜೊತೆಗೆ ಅರ್ಷದ್​ ವಾರ್ಸಿ, ಚಿತ್ರಾಂಗದಾ ಸಿಂಗ್​, ಫಾತಿಮಾ ಸನಾ ಶೇಖ್​ ಕೂಡ ನಟಿಸಿದ್ದಾರೆ.

2004ರಲ್ಲಿ ಕಮಲ್​ ಹಾಸನ್​-ಸಾರಿಕಾ ವಿಚ್ಛೇದನ:

1988ರಲ್ಲಿ ಕಮಲ್​ ಹಾಸನ್​ ಮತ್ತು ಸಾರಿಕಾ ಅವರು ಮದುವೆ ಆದರು. ಅವರಿಗೆ ಅಕ್ಷರಾ ಹಾಸನ್​ ಮತ್ತು ಶ್ರುತಿ ಹಾಸನ್​ ಜನಿಸಿದರು. 2004ರಲ್ಲಿ ಈ ದಂಪತಿ ವಿಚ್ಛೇದನ ಪಡೆದುಕೊಂಡರು. ಅಕ್ಷರಾ ಹಾಸನ್​ ಮತ್ತು ಶ್ರುತಿ ಹಾಸನ್ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬಹುಬೇಡಿಕೆಯ ನಟಿಯಾಗಿ ಶ್ರುತಿ ಹಾಸನ್​ ಗುರುತಿಸಿಕೊಂಡಿದ್ದಾರೆ. ಆದರೂ ಕೂಡ ಅವರ ತಾಯಿ ಸಾರಿಕಾ ಲಾಕ್​ಡೌನ್​ನಲ್ಲಿ ಆರ್ಥಿಕ ಸಂಕಷ್ಟ ಅನುಭವಿಸಬೇಕಾಯಿತು ಎಂಬುದು ಅಚ್ಚರಿಯ ಸಂಗತಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್