AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ
ಕಮಲ್​ ಹಾಸನ್
TV9 Web
| Edited By: |

Updated on: Dec 04, 2021 | 4:54 PM

Share

ಕೊವಿಡ್​ ನಿಧಾನವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲೇ ನಟ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಸಾಕಷ್ಟು ಆತಂಕ ಮೂಡಿಸಿತ್ತು. ಕಮಲ್​ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕೋರಿಕೊಂಡಿದ್ದರು. ಈ ಪ್ರಾರ್ಥನೆ ಈಗ ಸಫಲವಾಗಿದೆ. ನಟ ಕಮಲ್​ ಹಾಸನ್​ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಈಗ ಸಂಪೂರ್ಣವಾಗಿ ಸುಧಾರಿಸಿದೆ.

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು. ಹೀಗಾಗಿ, ಕಡ್ಡಾಯವಾಗಿ ಕೆಲ ದಿನಗಳ ಕಾಲ ಮನೆಯಲ್ಲೇ ಇರುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಪಾಲ್ಗೊಳ್ಳದೆ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಇದನ್ನೂ ಓದಿ: ಲಸಿಕೆ ಪಡೆದ ನಂತರವೂ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಹೇಗೆ? ವೈದ್ಯರು ಹೇಳಿದ್ದಿಷ್ಟು

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ