AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ
ಕಮಲ್​ ಹಾಸನ್
TV9 Web
| Edited By: |

Updated on: Dec 04, 2021 | 4:54 PM

Share

ಕೊವಿಡ್​ ನಿಧಾನವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲೇ ನಟ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಸಾಕಷ್ಟು ಆತಂಕ ಮೂಡಿಸಿತ್ತು. ಕಮಲ್​ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕೋರಿಕೊಂಡಿದ್ದರು. ಈ ಪ್ರಾರ್ಥನೆ ಈಗ ಸಫಲವಾಗಿದೆ. ನಟ ಕಮಲ್​ ಹಾಸನ್​ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಈಗ ಸಂಪೂರ್ಣವಾಗಿ ಸುಧಾರಿಸಿದೆ.

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು. ಹೀಗಾಗಿ, ಕಡ್ಡಾಯವಾಗಿ ಕೆಲ ದಿನಗಳ ಕಾಲ ಮನೆಯಲ್ಲೇ ಇರುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಪಾಲ್ಗೊಳ್ಳದೆ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಇದನ್ನೂ ಓದಿ: ಲಸಿಕೆ ಪಡೆದ ನಂತರವೂ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಹೇಗೆ? ವೈದ್ಯರು ಹೇಳಿದ್ದಿಷ್ಟು

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?