AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು.

ಕೊವಿಡ್​ನಿಂದ ಕಮಲ್​ ಹಾಸನ್​ ಸಂಪೂರ್ಣ ಗುಣಮುಖ; ಮನೆಗೆ ಮರಳಿದ ಹಿರಿಯ ನಟ
ಕಮಲ್​ ಹಾಸನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 04, 2021 | 4:54 PM

Share

ಕೊವಿಡ್​ ನಿಧಾನವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲೇ ನಟ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಸಾಕಷ್ಟು ಆತಂಕ ಮೂಡಿಸಿತ್ತು. ಕಮಲ್​ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕೋರಿಕೊಂಡಿದ್ದರು. ಈ ಪ್ರಾರ್ಥನೆ ಈಗ ಸಫಲವಾಗಿದೆ. ನಟ ಕಮಲ್​ ಹಾಸನ್​ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಈಗ ಸಂಪೂರ್ಣವಾಗಿ ಸುಧಾರಿಸಿದೆ.

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು. ಹೀಗಾಗಿ, ಕಡ್ಡಾಯವಾಗಿ ಕೆಲ ದಿನಗಳ ಕಾಲ ಮನೆಯಲ್ಲೇ ಇರುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಪಾಲ್ಗೊಳ್ಳದೆ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಇದನ್ನೂ ಓದಿ: ಲಸಿಕೆ ಪಡೆದ ನಂತರವೂ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಹೇಗೆ? ವೈದ್ಯರು ಹೇಳಿದ್ದಿಷ್ಟು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!