ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರಿನಿಂದ ಸ್ಪರ್ಧಿಸಲಿದ್ದಾರೆ ಕಮಲ್ ಹಾಸನ್?

ಕಮಲ್ ಹಾಸನ್ ಸಾರ್ವತ್ರಿಕ ಚುನಾವಣೆಯಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಡಿಎಂಕೆ ಪಕ್ಷ ಕೊಯಮತ್ತೂರು ಕ್ಷೇತ್ರದ ಟಿಕೆಟ್​ನ ಕಮಲ್ ಹಾಸನ್​ಗೆ ನೀಡಲು ಆಸಕ್ತಿ ತೋರಿಸಿದೆ.

ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರಿನಿಂದ ಸ್ಪರ್ಧಿಸಲಿದ್ದಾರೆ ಕಮಲ್ ಹಾಸನ್?
ಕಮಲ್ ಹಾಸನ್
Follow us
|

Updated on: Jul 25, 2023 | 1:04 PM

ನಟ ಹಾಗೂ ಎಂಎನ್‌ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ (Kamal Haasan) ಅವರಿಗೆ ರಾಜಕೀಯದಲ್ಲಿ ಅಷ್ಟಾಗಿ ಯಶಸ್ಸು ಸಿಕ್ಕಿಲ್ಲ. ಈ ಕಾರಣಕ್ಕೆ ಅವರು ನಟನೆಗೆ ಮರಳಿದ್ದಾರೆ. ಈಗ ಅವರ ದೃಷ್ಟಿ 2024ರ ಲೋಕಸಭೆ ಚುನಾವಣೆಯ ಮೇಲಿದೆ. ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಡಿಎಂಕೆ ಪಕ್ಷ ಕೊಯಮತ್ತೂರು ಕ್ಷೇತ್ರದ ಟಿಕೆಟ್​ನ ಕಮಲ್ ಹಾಸನ್​ಗೆ ನೀಡಲು ಆಸಕ್ತಿ ತೋರಿಸಿದೆ.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ವನತಿ ಶ್ರೀನಿವಾಸನ್ ವಿರುದ್ಧ ಕಮಲ್ ಹಾಸನ್ ಅವರು 1,728 ಮತಗಳ ಅಲ್ಪ ಅಂತರದಿಂದ ಸೋತರು. ಆದರೆ, ಇಬ್ಬರ ಮಧ್ಯೆ ಸ್ಪರ್ಧೆ ಬಲವಾಗಿತ್ತು. ಈ ಕಾರಣದಿಂದ ಅವರೊಂದಿಗೆ ಮೈತ್ರಿ ಮಾಡಿಕೊಂಡು ಕೊಯಮತ್ತೂರು ಸೀಟ್​ನ ನೀಡಲು ಡಿಎಂಕೆ ಆಸಕ್ತಿ ವಹಿಸಿದೆ ಎಂದು ಎಂಎನ್‌ಎಂ ಪಕ್ಷದ ಉನ್ನತ ಮೂಲಗಳು ಐಎಎನ್‌ಎಸ್‌ ಸುದ್ದಿ ಸಂಸ್ಥೆಗೆ ತಿಳಿಸಿವೆ. ಕಮಲ್ ಹಾಸನ್ ಭಾನುವಾರ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಂಎನ್‌ಎಂನ ರಾಜ್ಯ ಮಟ್ಟದ ಪ್ರಚಾರ ಅಭಿಯಾನ ‘ಮಕ್ಕಲೋಡು ಮೈಯಂ’ ಉದ್ಘಾಟಿಸಿದರು.

ಎಂಎನ್​ಎಮ್​ ಪಕ್ಷ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರದ ಜನರನ್ನು ಭೇಟಿ ಮಾಡಲು ಯೋಜಿಸುತ್ತಿದೆ. ವಾರ್ಡ್ ಮತ್ತು ಪಂಚಾಯತ್ ಮಟ್ಟದಲ್ಲಿ ಜನರನ್ನು ಭೇಟಿ ಮಾಡಿ ಅವರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚರ್ಚಿಸಲಿದ್ದಾರೆ. ಪಕ್ಷದ ಹಿರಿಯ ನಾಯಕರ ಪ್ರಕಾರ, ಜನರಿಂದ ಪ್ರತಿಕ್ರಿಯೆ ಪಡೆದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಕೊಯಮತ್ತೂರು ಜಿಲ್ಲಾ ಪದಾಧಿಕಾರಿಗಳು ಕಮಲ್ ಹಾಸನ್​ಗೆ ಈಗಾಗಲೇ ಮನವಿ ಮಾಡಿದ್ದಾರೆ ಎಂದು ಎಂಎನ್‌ಎಂ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್

ತಮಿಳುನಾಡಿನಲ್ಲಿ ವಿವಾದ ಒಂದಕ್ಕೆ ಸಿಲುಕಿ ಶರ್ಮಿಳಾ ಹೆಸರಿನ ಬಸ್ ಚಾಲಕಿ ವಜಾ ಗೊಂಡಿದ್ದರು. ಇವರಿಗೆ ಕಮಲ್ ಹಾಸನ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕೊಯಮತ್ತೂರು ಮೂಲದ ಶರ್ಮಿಳಾ ಅವರಿಗೆ ಕಾರನ್ನು ಉಡುಗೊರೆಯಾಗಿ ನೀಡಿದ ಕಮಲ್ ಅವರ ಕ್ರಮವನ್ನು ಜನಪ್ರಿಯತೆ ಗಳಿಸಲು ಮಾಡಿದ ತಂತ್ರ ಎಂದು ಬಣ್ಣಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್