AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯನ್ 2’ ಕಳಪೆ ಓಪನಿಂಗ್, 20 ನಿಮಿಷ ಕತ್ತರಿ ಹಾಕಿದ ನಿರ್ದೇಶಕ

ಕಮಲ್ ಹಾಸನ್ ನಟಿಸಿ, ಶಂಕರ್ ನಿರ್ದೇಶನ ಮಾಡಿರುವ ‘ಇಂಡಿಯನ್ 2’ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆ ಪ್ರೇಕ್ಷರಿಗಿತ್ತು ಆದರೆ ಸಿನಿಮಾ ಕಳಪೆ ಓಪನಿಂಗ್ ಕಂಡಿದೆ. ಇದೀಗ ಸಿನಿಮಾದ 20 ನಿಮಿಷ ಭಾಗವನ್ನು ಕತ್ತರಿಸುವ ನಿರ್ಣಯ ಮಾಡಲಾಗಿದೆ.

‘ಇಂಡಿಯನ್ 2’ ಕಳಪೆ ಓಪನಿಂಗ್, 20 ನಿಮಿಷ ಕತ್ತರಿ ಹಾಕಿದ ನಿರ್ದೇಶಕ
ಮಂಜುನಾಥ ಸಿ.
|

Updated on: Jul 13, 2024 | 9:46 PM

Share

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ನಿನ್ನೆಯಷ್ಟೆ (ಜುಲೈ 12) ರಾಷ್ಟ್ರದಾದ್ಯಂತ ಬಿಡುಗಡೆ ಆಗಿದೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸಿ, ಕಮಲ್ ಹಾಸನ್ ನಟಿಸಿರುವ ಈ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇತ್ತು. 1996 ರಲ್ಲಿ ಬಿಡುಗಡೆ ಆಗಿದ್ದ ‘ಇಂಡಿಯನ್’ ಸಿನಿಮಾದ ಮುಂದುವರೆದ ಭಾಗ ಎಂಬ ಕಾರಣಕ್ಕೂ ಪ್ರೇಕ್ಷಕರಲ್ಲಿ ದೊಡ್ಡ ನಿರೀಕ್ಷೆಯನ್ನು ಈ ಸಿನಿಮಾ ಹುಟ್ಟಿಸಿತ್ತು. ಆದರೆ ಸಿನಿಮಾ ಬಿಡುಗಡೆ ಆದ ಮೊದಲ ದಿನವೇ ಸಿನಿಮಾದ ಬಗ್ಗೆ ಋಣಾತ್ಮಕ ಪ್ರತಿಕ್ರಿಯೆಗಳು ಹರಿದಾಡಿದ್ದು, ಸಿನಿಮಾದ ಕಲೆಕ್ಷನ್ ಕಳಪೆಯಾಗಿದೆ.

‘ಇಂಡಿಯನ್ 2’ ಸಿನಿಮಾಕ್ಕೆ ಎಲ್ಲೆಡೆಯಿಂದ ಋಣಾತ್ಮಕ ವಿಮರ್ಶೆಗಳು ದೊರೆತಿದ್ದು, ಸಿನಿಮಾದ ಮೊದಲ ದಿನದ ಕಲೆಕ್ಷನ್ ಕಳಪೆಯಾಗಿದೆ. ಸಿನಿಮಾ ನೋಡಿದ ಹಲವರು ಸಿನಿಮಾದ ಅತಿಯಾದ ಉದ್ದ, ಅನಗತ್ಯ ದೃಶ್ಯಗಳ ಬಗ್ಗೆ ಟೀಕೆ ಮಾಡಿದ್ದಾರೆ. ಇದೇ ಕಾರಣಕ್ಕೆ ಸಿನಿಮಾವನ್ನು ಇನ್ನು ತುಸು ಟ್ರಿಮ್ ಮಾಡಲು ನಿರ್ದೇಶಕ ಶಂಕರ್ ಮುಂದಾಗಿದ್ದಾರೆ. ಅದೂ ಬರೋಬ್ಬರಿ 20 ನಿಮಿಷದ ದೃಶ್ಯಗಳನ್ನು ಶಂಕರ್ ತುಂಡರಿಸುತ್ತಿದ್ದಾರೆ.

ಇದನ್ನೂ ಓದಿ:ಕಮಲ್ ಹಾಸನ್ ನಟನೆಯ ಚಿತ್ರ ಎರಡು ವರ್ಷ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು

ಸಿನಿಮಾದಲ್ಲಿ ಕಮಲ್ ಎಂಟ್ರಿ ತಡವಾಗಿ ಆಗುತ್ತದೆ ಎಂಬುದು ಸೇರಿದಂತೆ ಹಲವು ದೃಶ್ಯಗಳಲ್ಲಿ ಭಾಷಣದ ರೀತಿ ಸಂಭಾಷಣೆ ಇದೆ ಇನ್ನೂ ಹಲವು ಋಣಾತ್ಮಕ ಅಭಿಪ್ರಾಯಗಳು ಪ್ರೇಕ್ಷಕರಿಂದ ವ್ಯಕ್ತವಾಗಿತ್ತು. ಇದೇ ಕಾರಣಕ್ಕೆ ಪ್ರೇಕ್ಷಕರ ಅಭಿಪ್ರಾಯವನ್ನು ಮನ್ನಿಸಿ ನಿರ್ದೇಶಕ ಶಂಕರ್ ‘ಇಂಡಿಯನ್ 2’ ಸಿನಿಮಾ ಬಿಡುಗಡೆ ಆದ ಎರಡನೇಯ ದಿನವೇ ಸಿನಿಮಾಕ್ಕೆ ಕತ್ತರಿ ಹಾಕಲು ಮುಂದಾಗಿದ್ದಾರೆ. ಸಿನಿಮಾದ ಹಲವು ಅನವಶ್ಯಕ ದೃಶ್ಯಗಳನ್ನು ತೆಗೆದು ಬಿಸಾಡಿ ಸಿನಿಮಾವನ್ನು 20 ನಿಮಿಷ ಕಡಿಮೆ ಮಾಡಲಿದ್ದಾರೆ. ‘ಇಂಡಿಯನ್ 2’ ಸಿನಿಮಾ ಈಗ 2:30 ಗಂಟೆ ಉದ್ದವಿದೆ. ಈಗ ಸಿನಿಮಾವನ್ನು ಟ್ರಿಮ್ ಮಾಡಿದ ಬಳಿಕ 2:10 ನಿಮಿಷ ಆಗಲಿದೆ. ಆಗಲಾದರು ಜನರಿಗೆ ಇಷ್ಟವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

‘ಇಂಡಿಯನ್ 2’ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆಗೆ ರಕುಲ್ ಪ್ರೀತ್ ಸಿಂಗ್, ನಟ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ಬ್ರಹ್ಮಾನಂದಂ, ಪ್ರಿಯಾ ಭವಾನಿ ಶಂಕರ್ ಇನ್ನೂ ಹಲವರು ನಟಿಸಿದ್ದಾರೆ. 1996 ರಲ್ಲಿ ಬಿಡುಗಡೆ ಆಗಿದ್ದ ‘ಇಂಡಿಯನ್’ ಸಿನಿಮಾದಲ್ಲಿ ಇದ್ದ ಸೇನಾಪತಿ ಪಾತ್ರವೇ ಈ ಸಿನಿಮಾದಲ್ಲಿಯೂ ಮುಂದುವರೆದಿದೆ. ಈ ಸಿನಿಮಾದಲ್ಲಿಯೂ ಸಹ ಸೇನಾಪತಿ ಲಂಚಗುಳಿತನ, ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ