AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KH233: ಕಮಲ್​ ಹಾಸನ್​ ನಟನೆಯ 233ನೇ ಚಿತ್ರದ ಬಗ್ಗೆ ಸಿಕ್ತು ಬ್ರೇಕಿಂಗ್​ ನ್ಯೂಸ್​; ಕಥೆಗೆ ಇದೆ ರಾಜಕೀಯದ ನಂಟು?

Kamal Haasan: ಕಮಲ್​ ಹಾಸನ್​ ಅವರು 233ನೇ ಸಿನಿಮಾದ ಪೋಸ್ಟರ್​ನಲ್ಲಿ ‘Rise to rule’ ಎಂಬ ಟ್ಯಾಗ್​ ಲೈನ್​ ಇದೆ. ಜನನಾಯಕನ ರೀತಿ ಕಮಲ್​ ಹಾಸನ್​ ಪೋಸ್​ ನೀಡಿದ್ದಾರೆ.

KH233: ಕಮಲ್​ ಹಾಸನ್​ ನಟನೆಯ 233ನೇ ಚಿತ್ರದ ಬಗ್ಗೆ ಸಿಕ್ತು ಬ್ರೇಕಿಂಗ್​ ನ್ಯೂಸ್​; ಕಥೆಗೆ ಇದೆ ರಾಜಕೀಯದ ನಂಟು?
ಕಮಲ್​ ಹಾಸನ್
ಮದನ್​ ಕುಮಾರ್​
|

Updated on: Jul 05, 2023 | 12:11 PM

Share

ನಟ ಕಮಲ್​ ಹಾಸನ್​ (Kamal Haasan) ಅವರು ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಈಗ ಅವರ 233ನೇ ಸಿನಿಮಾ ಅನೌನ್ಸ್​ ಆಗಿದೆ. ಈ ಚಿತ್ರದ ಬಗ್ಗೆ ಒಂದಷ್ಟು ದಿನಗಳಿಂದ ಗಾಸಿಪ್​ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಖ್ಯಾತ ನಿರ್ದೇಶಕ ಎಚ್​. ವಿನೋದ್​ (H Vinoth) ಜೊತೆ ಕಮಲ್​ ಹಾಸನ್​ ಅವರು ಕೈ ಜೋಡಿಸಿದ್ದಾರೆ. ಈ ಬ್ರೇಕಿಂಗ್​ ನ್ಯೂಸ್​ ನೀಡುವ ಸಲುವಾಗಿ ಒಂದು ಪ್ರೋಮೋ (KH233 Teaser) ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಮಲ್​ ಹಾಸನ್​ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ಅಂದಹಾಗೆ, ಇದು ರಾಜಕೀಯಕ್ಕೆ ಸಂಬಂಧಿಸಿದ ಸಿನಿಮಾ ಇರಬಹುದಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಕಾರಣವೂ ಇವೆ.

ಕಮಲ್​ ಹಾಸನ್​ ಅವರು ಸದ್ಯ ನಿರ್ದೇಶಕ ಶಂಕರ್​ ಜೊತೆ ‘ಇಂಡಿಯನ್​ 2’ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಪೂರ್ಣಗೊಂಡ ಬಳಿಕ ಅವರು ಸಂಪೂರ್ಣವಾಗಿ ರಾಜಕೀಯದ ಮೇಲೆ ಗಮನ ಹರಿಸಬಹುದು ಎಂದು ಹೇಳಲಾಗಿತ್ತು. ಆದರೆ ಅದು ನಿಜವಾಗುವ ಲಕ್ಷಣ ಕಾಣುತ್ತಿಲ್ಲ. ಯಾಕೆಂದರೆ, ‘ಇಂಡಿಯನ್​ 2’ ಬಳಿಕ ಎಚ್​. ವಿನೋದ್​ ಜೊತೆಗಿನ ಸಿನಿಮಾದಲ್ಲಿ ಕಮಲ್​ ಹಾಸನ್​ ನಟಿಸುವುದು ಖಚಿತವಾಗಿದೆ. ಈ ಸಿನಿಮಾದ ಪೋಸ್ಟರ್​ನಲ್ಲಿ ಒಂದಷ್ಟು ಸುಳಿವು ಬಿಟ್ಟುಕೊಡಲಾಗಿದೆ.

View this post on Instagram

A post shared by Kamal Haasan (@ikamalhaasan)

ಕಮಲ್​ ಹಾಸನ್​ ಅವರು 233ನೇ ಸಿನಿಮಾದ ಪೋಸ್ಟರ್​ನಲ್ಲಿ ‘Rise to rule’ ಎಂಬ ಬರಹ ಇದೆ. ಜನನಾಯಕನ ರೀತಿ ಕಮಲ್​ ಹಾಸನ್​ ಪೋಸ್​ ನೀಡಿದ್ದಾರೆ. ಇದರಲ್ಲಿ ಸಂಪೂರ್ಣ ರಾಜಕೀಯದ ಕುರಿತ ಕಹಾನಿ ಇರಲಿದೆ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಇನ್ನಷ್ಟೇ ಬಹಿರಂಗ ಆಗಬೇಕಿದೆ. ಈ ಸಿನಿಮಾದ ಬಳಿಕ ಕಮಲ್​ ಹಾಸನ್​ ಅವರು ಮಣಿರತ್ನಂ ಜೊತೆ ಒಂದು ಸಿನಿಮಾ ಮಾಡಲಿದ್ದಾರೆ. ಈ ಚಿತ್ರಕ್ಕೆ ಎ.ಆರ್​. ರೆಹಮಾನ್​ ಸಂಗೀತ ನೀಡಲಿದ್ದಾರೆ.

ಇದನ್ನೂ ಓದಿ: Kamal Haasan: ‘ದಿ ಕೇರಳ ಸ್ಟೋರಿ ಒಂದು ಪ್ರೊಪೊಗಾಂಡ ಸಿನಿಮಾ, ಅದರಲ್ಲಿ ಸತ್ಯ ಇಲ್ಲ’: ಕಮಲ್​ ಹಾಸನ್​ ನೇರ ಟೀಕೆ

ನಿರ್ಮಾಪಕನಾಗಿಯೂ ಕಮಲ್​ ಹಾಸನ್​ ಅವರು ಸಕ್ರಿಯರಾಗಿದ್ದಾರೆ. ಅವರ ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಬ್ಯಾನರ್​ ಮೂಲಕ ‘KH233’ ಸಿನಿಮಾ ನಿರ್ಮಾಣ ಆಗಲಿದೆ. ಅವರ ಜೊತೆ ‘ಟರ್ಮರಿಕ್​ ಮೀಡಿಯಾ’ ಸಂಸ್ಥೆ ಕೂಡ ಕೈ ಜೋಡಿಸಿದೆ. 2022ರಲ್ಲಿ ಕಮಲ್​ ಹಾಸನ್​ ಅವರು ‘ವಿಕ್ರಮ್​’ ಸಿನಿಮಾ ಮೂಲಕ ದೊಡ್ಡ ಗೆಲುವು ಪಡೆದರು. ಆ ಚಿತ್ರದ ಯಶಸ್ಸಿನಿಂದ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ