AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ‘ಥಗ್ ಲೈಫ್’ ಕಲೆಕ್ಷನ್ ಎಷ್ಟು? ಕಮಲ್ ಹಾಸನ್ ಚಿತ್ರಕ್ಕೆ ಮುಂದಿದೆ ಕಷ್ಟ

ವಿವಾದದಿಂದಲೇ ಸಖತ್ ಸುದ್ದಿ ಆಗಿದ್ದ ‘ಥಗ್ ಲೈಫ್’ ಚಿತ್ರವು ಕರ್ನಾಟಕ ಹೊರತುಪಡಿಸಿ ಬೇರೆ ಕಡೆಗಳಲ್ಲಿ ಬಿಡುಗಡೆ ಆಗಿದೆ. ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ತಮಿಳು ಪ್ರೇಕ್ಷಕರು ಕೂಡ ಈ ಸಿನಿಮಾವನ್ನು ತೆಗಳುತ್ತಿದ್ದಾರೆ. ಮೊದಲ ದಿನ ಉತ್ತಮ ಕಲೆಕ್ಷನ್ ಆಗಿದ್ದರೂ ಕೂಡ ಮುಂದಿನ ದಿನಗಳಲ್ಲಿ ಕಲೆಕ್ಷನ್ ತಗ್ಗುವ ಸಾಧ್ಯತೆ ದಟ್ಟವಾಗಿದೆ.

ಮೊದಲ ದಿನ ‘ಥಗ್ ಲೈಫ್’ ಕಲೆಕ್ಷನ್ ಎಷ್ಟು? ಕಮಲ್ ಹಾಸನ್ ಚಿತ್ರಕ್ಕೆ ಮುಂದಿದೆ ಕಷ್ಟ
Kamal Haasan
ಮದನ್​ ಕುಮಾರ್​
|

Updated on: Jun 05, 2025 | 10:52 PM

Share

ಕಾಲಿವುಡ್ ನಟ ಕಮಲ್ ಹಾಸನ್ (Kamal Haasan) ಅಭಿನಯದ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗಿಲ್ಲ. ಆದರೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಮುಂತಾದ ಕಡೆಗಳಲ್ಲಿ ಇಂದು (ಜೂನ್ 5) ತೆರೆಕಂಡಿದೆ. ಮಣಿರತ್ನಂ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕೆಲವು ಕಾರಣಗಳಿಂದಾಗಿ ಈ ಸಿನಿಮಾ ಸಖತ್ ಸುದ್ದಿ ಆಗಿತ್ತು. ಮೊದಲ ದಿನ ಎಷ್ಟು ಕಲೆಕ್ಷನ್ (Thug Life Box Office Collection) ಮಾಡಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಮೊದಲ ದಿನ ‘ಥಗ್​ ಲೈಫ್’ (Thug Life) ಸಿನಿಮಾಗೆ 14.94 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎನ್ನಲಾಗಿದೆ.

ಕಮಲ್ ಹಾಸನ್ ಮತ್ತು ಮಣಿರತ್ನಂ ಅವರು ಅನೇಕ ವರ್ಷಗಳ ಬಳಿಕ ಒಟ್ಟಾಗಿ ಸಿನಿಮಾ ಮಾಡಿದ್ದಾರೆ. ಆದ್ದರಿಂದ ಅಭಿಮಾನಿಗಳು ‘ಥಗ್ ಲೈಫ್’ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದರು. ಪರಿಣಾಮವಾಗಿ, ತಮಿಳುನಾಡಿನಲ್ಲಿ ಫಸ್ಟ್ ಡೇ ಫಸ್ಟ್ ಶೋ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್ ಆಗಿದೆ. ಆದರೆ ಸಿನಿಮಾ ನೋಡಿ ಹೊರಬಂದ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

Sacnilk ವರದಿ ಪ್ರಕಾರ, ‘ಥಗ್ ಲೈಫ್’ ಸಿನಿಮಾಗೆ ಬೆಳಗ್ಗೆ ಮತ್ತು ಮಧ್ಯಾಹ್ನ ಅಂದಾಜು ಶೇಕಡ 50ರಷ್ಟು ಆಕ್ಯುಪೆನ್ಸಿ ಇತ್ತು. ಆದರೆ ಸಂಜೆ ವೇಳೆಗೆ ಪ್ರೇಕ್ಷಕರ ಪ್ರಮಾಣ ಕಡಿಮೆ ಆಯಿತು. ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಸಿಗಲು ಆರಂಭಿಸಿದ್ದರಿಂದ ಜನರ ಆಸಕ್ತಿ ಕಡಿಮೆ ಆಯಿತು. ಹಾಗಾಗಿ ಮುಂದಿನ ದಿನಗಳಲ್ಲಿ ಈ ಚಿತ್ರದ ಕಲೆಕ್ಷನ್ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ. ಮೊದಲ ದಿನ 14.94 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದರೂ ಕೂಡ ಚಿತ್ರತಂಡದವರು ಭಾರಿ ಸಂಭ್ರಮಪಡುವ ಪರಿಸ್ಥಿತಿ ಸದ್ಯಕ್ಕಿಲ್ಲ.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

ಕನ್ನಡದ ಬಗ್ಗೆ ಕಮಲ್ ಹಾಸನ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರಿಂದ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ ವಿರೋಧ ವ್ಯಕ್ತವಾಯಿತು. ಅದನ್ನು ಪ್ರಶ್ನಿಸಿ ಕಮಲ್ ಹಾಸನ್ ಅವರು ಹೈಕೋರ್ಟ್ ಮೆಟ್ಟಿಲೇರಿದರು. ಅಲ್ಲಿಯೂ ಕೂಡ ಅವರಿಗೆ ಹಿನ್ನಡೆ ಆಯಿತು. ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಆಗದ ಕಾರಣ ಕಮಲ್ ಹಾಸನ್ ಅವರಿಗೆ 40 ಕೋಟಿ ರೂಪಾಯಿ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಬೆಂಗಳೂರಿಗರ ನೆನೆದು ಮರುಗಿದ ಕಮಲ್ ಹಾಸನ್

ಈ ಸಿನಿಮಾದಲ್ಲಿ ತ್ರಿಶಾ ಕೂಡ ನಟಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ಈ ಸಿನಿಮಾ ಮೇಲೆ ತುಂಬ ಭರವಸೆ ಇತ್ತು. ಆದರೆ ಪ್ರೇಕ್ಷಕರಿಗೆ ಈ ಚಿತ್ರ ಇಷ್ಟ ಆಗಿಲ್ಲ. ತಮಿಳಿನಾಡಿನಲ್ಲಿ ಕೂಡ ಜನರು ನೆಗೆಟಿವ್ ವಿಮರ್ಶೆ ನೀಡಿದ್ದಾರೆ. ಹಾಗಾಗಿ ಚಿತ್ರದ ಬಾಕ್ಸ್ ಆಫೀಸ್ ಭವಿಷ್ಯ ಕಷ್ಟದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು