AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ‘ವಿಕ್ರಮ್​’ಗೆ ಕರ್ನಾಟಕದಲ್ಲಿ ವಿರೋಧ, ಸಿನಿಮಾ ನಿಷೇಧಿಸಲು ಆಗ್ರಹ; ಚಿತ್ರತಂಡ ಮಾಡಿದ ತಪ್ಪೇನು?

NoKannadaNoBusiness ಎನ್ನುವ ಹ್ಯಾಶ್​ಟ್ಯಾಗ್ ಅಡಿಯಲ್ಲಿ ಟ್ವೀಟ್ ಮಾಡಲಾಗುತ್ತಿದೆ. ‘ಸಿನಿಮಾವನ್ನು ನಿಷೇಧ ಮಾಡಿ’ ಎನ್ನುವ ಒತ್ತಾಯಗಳು ಕೇಳಿ ಬಂದಿವೆ.

ಕಮಲ್ ಹಾಸನ್ ‘ವಿಕ್ರಮ್​’ಗೆ ಕರ್ನಾಟಕದಲ್ಲಿ ವಿರೋಧ, ಸಿನಿಮಾ ನಿಷೇಧಿಸಲು ಆಗ್ರಹ; ಚಿತ್ರತಂಡ ಮಾಡಿದ ತಪ್ಪೇನು?
ಕಮಲ್ ಹಾಸನ್
TV9 Web
| Edited By: |

Updated on:Jun 03, 2022 | 6:51 PM

Share

ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಸಿನಿಮಾ (Vikram Movie) ಇಂದು (ಜೂನ್ 3) ತೆರೆಗೆ ಬಂದಿದೆ. ಮೊದಲ ದಿನ ಈ ಚಿತ್ರಕ್ಕೆ ಉತ್ತಮ ವಿಮರ್ಶೆ ಕೇಳಿ ಬಂದಿದೆ. ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚೆಚ್ಚು ತೆರೆಗೆ ಬರುತ್ತಿವೆ. ಪರಭಾಷೆಯ ಸಿನಿಮಾಗಳು ಕನ್ನಡಕ್ಕೂ ಡಬ್ ಆಗಿ ತೆರೆಗೆ ಬಂದಿವೆ. ಆದರೆ, ‘ವಿಕ್ರಮ್​’ ಸಿನಿಮಾ ತಮಿಳಿನಲ್ಲಿ ಮಾತ್ರ ರಿಲೀಸ್ ಆಗಿದೆ. ಇದಕ್ಕೆ ಕರ್ನಾಟಕದಲ್ಲಿ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ ಬಳಕೆ ಮಾಡಿಲ್ಲ ಎಂದರೆ ಸಿನಿಮಾ ರಿಲೀಸ್ ಮಾಡಲೇಬಾರದು ಎನ್ನುವ ಆಗ್ರಹ ಕೇಳಿ ಬಂದಿದೆ.

ಕಮಲ್ ಹಾಸನ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ಈಗ ಲೋಕೇಶ್ ಕನಗರಾಜ್​ ಅವರ ‘ವಿಕ್ರಮ್’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಇದೊಂದು ಪಕ್ಕಾ ಮಾಸ್​ ಆ್ಯಕ್ಷನ್ ಸಿನಿಮಾ ಅನ್ನೋದು ಟ್ರೇಲರ್​ನಲ್ಲೇ ಗೊತ್ತಾಗಿತ್ತು. ಟ್ರೇಲರ್​ನಲ್ಲಿ ತೋರಿಸಿದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಕೊಂಚ ಹೆಚ್ಚೇ ಇದೆ. ಒಟ್ಟಾರೆ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಕೆಲವರು ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಲ್ಲಿ ಹೇಗಿತ್ತು ನೋಡಿ ಕಮಲ್ ಹಾಸನ್ ‘ವಿಕ್ರಮ್​’ ಸಿನಿಮಾ ಪ್ರಮೋಷನ್
Image
‘ಕರ್ನಾಟಕ ನನಗೆ ಸಾಕಷ್ಟು ಗುರುಗಳನ್ನು ಕೊಟ್ಟಿದೆ’; ‘ವಿಕ್ರಮ್’ ಸಿನಿಮಾ ಪ್ರಚಾರದ ವೇಳೆ ಅಣ್ಣಾವ್ರ ನೆನೆದ ಕಮಲ್ ಹಾಸನ್
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?

ಕಮಲ್ ಹಾಸನ್​ ಅವರು ಚಿತ್ರದ ಪ್ರಚಾರಕ್ಕೆ ಜೂನ್ 2ರಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಅವರು ತಮಿಳಿನಲ್ಲೇ ಮಾತನಾಡಿದ್ದರು. ಈ ಬಗ್ಗೆಕೆಲವರು ತಕರಾರು ತೆಗೆದಿದ್ದರು. ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಇಂದು ಸಿನಿಮಾ ರಿಲೀಸ್​ ಆಗುತ್ತಿದ್ದಂತೆ ಚಿತ್ರಕ್ಕೆ ಟ್ವಿಟರ್​ನಲ್ಲಿ ಸಿನಿಮಾ ಬ್ಯಾನ್ ಮಾಡಿ ಎನ್ನುವ ಒತ್ತಾಯ ಕೇಳಿ ಬಂದಿದೆ.

NoKannadaNoBusiness ಎನ್ನುವ ಹ್ಯಾಶ್​ಟ್ಯಾಗ್ ಅಡಿಯಲ್ಲಿ ಟ್ವೀಟ್ ಮಾಡಲಾಗುತ್ತಿದೆ. ‘ಸಿನಿಮಾವನ್ನು ನಿಷೇಧ ಮಾಡಿ’ ಎನ್ನುವ ಒತ್ತಾಯಗಳು ಕೇಳಿ ಬಂದಿವೆ. ಮುಂದಿನ ದಿನಗಳಲ್ಲಿ ಇದು ತೀವ್ರ ಸ್ವರೂಪ ಪಡೆದುಕೊಂಡರೆ ‘ವಿಕ್ರಮ್’ ಚಿತ್ರದ ಕಲೆಕ್ಷನ್ ಮೇಲೆ ಹೊಡೆತ ಬೀಳಬಹುದು.

ಈ ಮೊದಲು ‘ಆರ್​ಆರ್​ಆರ್’, ‘ಪುಷ್ಪ’ ಸೇರಿ ಅನೇಕ ಪರಭಾಷೆಯ ಚಿತ್ರಗಳು ಕನ್ನಡಕ್ಕೆ ಡಬ್ ಆಗಿ ತೆರೆಗೆ ಬಂದಿವೆ. ಆದರೆ, ಬೆಂಗಳೂರಲ್ಲಿ ಕನ್ನಡ ವರ್ಷನ್​ಗೆ ಸಿಕ್ಕಿದ್ದು ಕೆಲವೇ ಕೆಲವು ಚಿತ್ರಮಂದಿರಗಳು ಮಾತ್ರ. ಈ ವಿಚಾರದ ಬಗ್ಗೆಯೂ ತೀವ್ರ ವಿರೋಧ ವ್ಯಕ್ತವಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:50 pm, Fri, 3 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್