AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ವೀಕ್ಷಕರಿಂದ ರಿಜೆಕ್ಟ್ ಆದ ‘ವಿಕ್ರಮ್’; ದಳಪತಿ ವಿಜಯ್​​ ನಟನೆಯ ‘ಬೀಸ್ಟ್​’ಗೆ ಭಾರೀ ಸ್ವಾಗತ

‘ವಿಕ್ರಮ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿತ್ತು. ಈ ಚಿತ್ರ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು.

ಕಿರುತೆರೆ ವೀಕ್ಷಕರಿಂದ ರಿಜೆಕ್ಟ್ ಆದ ‘ವಿಕ್ರಮ್’; ದಳಪತಿ ವಿಜಯ್​​ ನಟನೆಯ ‘ಬೀಸ್ಟ್​’ಗೆ ಭಾರೀ ಸ್ವಾಗತ
ಕಮಲ್-ವಿಜಯ್
TV9 Web
| Edited By: |

Updated on:Nov 05, 2022 | 6:06 PM

Share

ಬಾಕ್ಸ್ ಆಫೀಸ್​ನಲ್ಲಿ ಸೋತ ಚಿತ್ರಗಳು ಒಟಿಟಿಯಲ್ಲಿ ಹಾಗೂ ಟಿವಿಯಲ್ಲಿ ಕ್ಲಿಕ್ ಆದ ಉದಾಹರಣೆ ಸಾಕಷ್ಟಿದೆ. ಬಾಕ್ಸ್ ಆಫೀಸ್​ನಲ್ಲಿ ಕೆಲವೇ ಕೆಲವು ಕೋಟಿ ಕಲೆ ಹಾಕಿದ ಚಿತ್ರಗಳು ಇತ್ತೀಚೆಗೆ ಒಟಿಟಿಯಲ್ಲಿ ಸದ್ದು ಮಾಡಿವೆ. ಆದರೆ, ಬಾಕ್ಸ್ ಆಫೀಸ್(Box Office)  ಹಾಗೂ ಒಟಿಟಿಯಲ್ಲಿ ಹಿಟ್ ಆದ ಚಿತ್ರ ಟಿವಿಯಲ್ಲಿ ಸೋಲೋದು ತುಂಬಾನೇ ಅಪರೂಪ. ಈಗ ಆ ರೀತಿ ಆಗಿದೆ. ನಟ ಕಮಲ್ ಹಾಸನ್ (Kamal Haasan) ನಟಿಸಿ, ನಿರ್ಮಿಸಿದ್ದ ‘ವಿಕ್ರಮ್’  (Vikram Movie)ಸಿನಿಮಾನ ಕಿರುತೆರೆ ವೀಕ್ಷಕರು ಅಷ್ಟಾಗಿ ಮೆಚ್ಚಿಕೊಂಡಿಲ್ಲ.

‘ವಿಕ್ರಮ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿತ್ತು. ಈ ಚಿತ್ರ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಮೊದಲು ತೆರೆಗೆ ಬಂದ ‘ಕೈದಿ’ ಚಿತ್ರಕ್ಕೆ ಲಿಂಕ್ ಕೊಟ್ಟು ‘ವಿಕ್ರಮ್’ ಸಿನಿಮಾ ಮಾಡಿದ್ದರು. ಚಿತ್ರವನ್ನು ಸಖತ್ ಮಾಸ್ ಆಗಿ ಕಟ್ಟಿಕೊಡಲಾಗಿತ್ತು. ಕಮಲ್ ಹಾಸನ್, ಫಹಾದ್ ಫಾಸಿಲ್, ವಿಜಯ್ ಸೇತುಪತಿ ಮೊದಲಾದವರು ಈ ಚಿತ್ರದಲ್ಲಿ ಅಬ್ಬರಿಸಿದ್ದರು. ಆದರೆ, ಚಿತ್ರಕ್ಕೆ ಕಿರುತೆರೆ ವೀಕ್ಷಕರು ಶಾಕ್ ನೀಡಿದ್ದಾರೆ.

ದೀಪಾವಳಿ ಪ್ರಯುಕ್ತ ‘ವಿಕ್ರಮ್’ ಸಿನಿಮಾ ಕಿರುತೆರೆಯಲ್ಲಿ ಪ್ರಸಾರ ಕಂಡಿತು. ಈ ಚಿತ್ರಕ್ಕೆ ಜನರಿಂದ ಭರಪೂರ ಮನ್ನಣೆ ಸಿಗಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಇದು ಸುಳ್ಳಾಗಿದೆ. ಈ ಚಿತ್ರ ಕೇವಲ 4.42 ಟಿಆರ್​ಪಿ ಪಡೆದುಕೊಂಡಿದೆ. ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದ್ದ ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಕೂಡ ದೀಪಾವಳಿ ಸಂದರ್ಭದಲ್ಲಿ ಪ್ರಸಾರ ಕಂಡಿದ್ದು, ಬರೋಬ್ಬರಿ 12. 62 ಟಿಆರ್​ಪಿ ಪಡೆದಿದೆ. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ
Image
‘ಮೊದಲು ನನ್ನ ಸಾಲ ತೀರಿಸುತ್ತೇನೆ’; ‘ವಿಕ್ರಮ್​’ ಯಶಸ್ಸಿನ ಬಗ್ಗೆ ನಟ ಕಮಲ್ ಹಾಸನ್ ಮಾತು
Image
Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

ಚಿರಂಜೀವಿ ಹಾಗೂ ರಾಮ್ ಚರಣ್ ಒಟ್ಟಾಗಿ ಕಾಣಿಸಿಕೊಂಡಿದ್ದ ‘ಆಚಾರ್ಯ’ ಸಿನಿಮಾ ಹೀನಾಯವಾಗಿ ಸೋತಿತು. ಈ ಚಿತ್ರದಿಂದ ಸಿನಿಮಾ ಹಂಚಿಕೆದಾರರು ಸಾಕಷ್ಟು ನಷ್ಟ ಅನುಭವಿಸಿದರು. ಆ ಬಳಿಕ ಸ್ವತಃ ನಷ್ಟ ತುಂಬಿಕೊಡುವ ನಿರ್ಧಾರಕ್ಕೆ ಬಂದರು. ಈ ರೀತಿ ಸೋತ ಚಿತ್ರಕ್ಕೂ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಸಿನಿಮಾ ಟಿವಿಯಲ್ಲಿ 6.3 ರೇಟಿಂಗ್ ಪಡೆದಿದೆ. ಈ ಮೂಲಕ ‘ವಿಕ್ರಮ್’ ಚಿತ್ರಕ್ಕಿಂತ ಹೆಚ್ಚಿನ ಟಿಆರ್​ಪಿಯನ್ನು ‘ಆಚಾರ್ಯ’ ಪಡೆದಿದೆ.

ಇದನ್ನೂ ಓದಿ: 3 ದಿನಕ್ಕೆ ‘ವಿಕ್ರಮ್​ ವೇದ’ ಸಿನಿಮಾದ ಕಲೆಕ್ಷನ್​ ಎಷ್ಟು? ಹೃತಿಕ್​-ಸೈಫ್​ ಚಿತ್ರಕ್ಕೆ ಸಖತ್​ ಕಮಾಯಿ

‘ವಿಕ್ರಮ್’ ಚಿತ್ರ ಚಿತ್ರಮಂದಿರ ಹಾಗೂ ಒಟಿಟಿ ಎರಡರಲ್ಲೂ ಅಬ್ಬರಿಸಿದೆ. ಈ ಕಾರಣಕ್ಕೆ ಈ ಚಿತ್ರವನ್ನು ಟಿವಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿಲ್ಲ ಎನ್ನಲಾಗುತ್ತಿದೆ. ಕೋಟಿಕೋಟಿ ಕೊಟ್ಟು ಸಿನಿಮಾ ಖರೀದಿಸಿದವರಿಗೆ ಟಿಆರ್​ಪಿ ರೇಟಿಂಗ್ ವಿಚಾರ ಸಾಕಷ್ಟು ಚಿಂತೆ ಮೂಡಿಸಿದೆ.

Published On - 6:06 pm, Sat, 5 November 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ