AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಇಟ್ಟ ನಟ ಕಮಲ್ ಹಾಸನ್; ಏನದು?

ಚಿತ್ರರಂಗದ ಒಳಿತಿಗಾಗಿ ಕಮಲ್ ಹಾಸನ್ ಅವರು ಈ ಬೇಡಿಕೆಗಳನ್ನು ಇಟ್ಟಿದ್ದಾರೆ. ಇವುಗಳಿಗೆ ಸಿಎಂ ವಿಜಯ್ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದುನೋಡಬೇಕು. ಪ್ರಸ್ತುತ ಚಿತ್ರರಂಗ ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ವಿಜಯ್ ಜೊತೆ ಕಮಲ್ ಹಾಸನ್ ಅವರು ಚರ್ಚಿಸಿದ್ದಾರೆ. ಭೇಟಿಯ ಬಳಿಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಇಟ್ಟ ನಟ ಕಮಲ್ ಹಾಸನ್; ಏನದು?
Kamal Haasan, CM Vijay
ಮದನ್​ ಕುಮಾರ್​
|

Updated on:May 17, 2026 | 7:12 AM

Share

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ದಳಪತಿ ವಿಜಯ್ (CM Vijay) ಅವರನ್ನು ಹಿರಿಯ ನಟ ಕಮಲ್ ಹಾಸನ್ ಮೇ 16ರಂದು ಭೇಟಿಯಾಗಿದ್ದಾರೆ. ಈ ಸೌಜನ್ಯಯುತ ಭೇಟಿಯ ಚಿತ್ರಗಳನ್ನು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ಕಮಲ್ ಹಾಸನ್ (Kamal Haasan), ತಮಿಳು ಚಿತ್ರರಂಗ ಎದುರಿಸುತ್ತಿರುವ ಸವಾಲುಗಳ ಕುರಿತು ಚರ್ಚಿಸಿ, ಚಿತ್ರೋದ್ಯಮದ ಬೆಂಬಲಕ್ಕಾಗಿ 6 ಪ್ರಮುಖ ಬೇಡಿಕೆಗಳನ್ನೊಳಗೊಂಡ ಪ್ರಸ್ತಾವನೆಯನ್ನು ಸಿಎಂ ವಿಜಯ್ ಅವರಿಗೆ ಸಲ್ಲಿಸಿದ್ದಾರೆ.

ಸಿಎಂ ವಿಜಯ್ ಭೇಟಿಯ ನಂತರ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಕಮಲ್ ಹಾಸನ್, ‘ಇಂದು ಗೌರವಾನ್ವಿತ ತಮಿಳುನಾಡು ಮುಖ್ಯಮಂತ್ರಿ, ಸಹೋದರ ವಿಜಯ್ ಅವರನ್ನು ಖುದ್ದಾಗಿ ಭೇಟಿಯಾಗಿ ನನ್ನ ಶುಭ ಹಾರೈಕೆಗಳನ್ನು ತಿಳಿಸಿದೆ. ತಮಿಳುನಾಡಿನ ಏಳಿಗೆಗಾಗಿ ಅವರು ಹೊಂದಿರುವ ಹಲವು ಕನಸುಗಳನ್ನು ಉತ್ಸಾಹದಿಂದ ಹಂಚಿಕೊಂಡರು. ಅವರ ನಮ್ರತೆ ಮತ್ತು ಪ್ರೀತಿ ನನಗೆ ಹೆಮ್ಮೆ ತಂದಿದೆ. ವಿವಿಧ ಅಡೆತಡೆಗಳನ್ನು ಎದುರಿಸುತ್ತಿರುವ ತಮಿಳು ಚಿತ್ರರಂಗಕ್ಕೆ ಸರ್ಕಾರದ ಬೆಂಬಲದ ಅಗತ್ಯವಿದ್ದು, ಈ ನಿಟ್ಟಿನಲ್ಲಿ 6 ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಕಮಲ್ ಹಾಸನ್ ಸಲ್ಲಿಸಿರುವ 6 ಪ್ರಮುಖ ಬೇಡಿಕೆಗಳು ಇಲ್ಲಿವೆ:

1. ಸರ್ಕಾರಿ ಒಟಿಟಿ ಪ್ಲಾಟ್‌ಫಾರ್ಮ್ ಆರಂಭ: ತಮಿಳು ಪ್ರೇಕ್ಷಕರಿಗೆ ಕೈಗೆಟುಕುವ ಮತ್ತು ರಿಯಾಯಿತಿ ದರದಲ್ಲಿ ತಮಿಳು ಸಿನಿಮಾಗಳು, ಸ್ವತಂತ್ರ ಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ವೀಕ್ಷಿಸಲು ಅನುವಾಗುವಂತೆ ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ ಪ್ಲಾಟ್‌ಫಾರ್ಮ್ ಪ್ರಾರಂಭಿಸಬೇಕು.

2. ಸ್ಥಳೀಯ ಸಂಸ್ಥೆಗಳ ಮನರಂಜನಾ ತೆರಿಗೆ ರದ್ದು: ಸದ್ಯ ಚಿತ್ರಮಂದಿರಗಳ ಮೇಲೆ ವಿಧಿಸಲಾಗುತ್ತಿರುವ ಶೇಕಡಾ 4ರಷ್ಟು ಸ್ಥಳೀಯ ಸಂಸ್ಥೆಗಳ ಮನರಂಜನಾ ತೆರಿಗೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.

3. ಬಲಿಷ್ಠ ಪೈರಸಿ ತಡೆ ತಂಡದ ರಚನೆ: ಚಿತ್ರರಂಗಕ್ಕೆ ದೊಡ್ಡ ತಲೆನೋವಾಗಿರುವ ಪೈರಸಿ ಹಾವಳಿಯನ್ನು ತಡೆಗಟ್ಟಲು ತಮಿಳುನಾಡು ಪೊಲೀಸ್ ಸೈಬರ್ ಕ್ರೈಮ್ ವಿಭಾಗದ ಅಡಿಯಲ್ಲಿ ಪ್ರತ್ಯೇಕ ಮತ್ತು ಬಲಿಷ್ಠ ‘ಆ್ಯಂಟಿ-ಪೈರಸಿ ತಂಡ’ವನ್ನು ರಚಿಸಬೇಕು.

4. ದಿನಕ್ಕೆ 5 ಪ್ರದರ್ಶನಗಳಿಗೆ ಅನುಮತಿ: ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಕಾನೂನುಬದ್ಧ ಅನುಮತಿ ನೀಡಬೇಕು. ಇದರಿಂದ ಚಿತ್ರಮಂದಿರಗಳ ಆದಾಯ ಹೆಚ್ಚಲಿದ್ದು, ಸಂಕಷ್ಟದಲ್ಲಿರುವ ಪ್ರದರ್ಶಕರ ವಲಯ ಚೇತರಿಸಿಕೊಳ್ಳಲು ಸಹಕಾರಿಯಾಗಲಿದೆ.

5. ಎಂಟು ವಾರಗಳ ಬಳಿಕವೇ ಒಟಿಟಿಗೆ: ತಮಿಳುನಾಡಿನಲ್ಲಿ ಬಿಡುಗಡೆಯಾಗುವ ಎಲ್ಲಾ ಸಿನಿಮಾಗಳು ಚಿತ್ರಮಂದಿರಗಳಲ್ಲಿ ರಿಲೀಸ್ ಆದ ಕನಿಷ್ಠ 8 ವಾರಗಳ ನಂತರವಷ್ಟೇ ಒಟಿಟಿಯಲ್ಲಿ ಬಿಡುಗಡೆಯಾಗಬೇಕು ಎಂಬ ನಿಯಮವನ್ನು ಕಡ್ಡಾಯಗೊಳಿಸಬೇಕು.

6. ಚಿತ್ರ ನಿರ್ಮಾಣ ಪ್ರೋತ್ಸಾಹಕ ಯೋಜನೆ: ಭಾರತೀಯ ಚಲನಚಿತ್ರಗಳ ಚಿತ್ರೀಕರಣ ಶೇಕಡಾ 50ಕ್ಕಿಂತ ಹೆಚ್ಚು ತಮಿಳುನಾಡಿನಲ್ಲಿ ನಡೆದರೆ, ಅಂತಹ ಸಿನಿಮಾಗಳ ಒಟ್ಟು ಬಜೆಟ್‌ನ ಶೇಕಡಾ 10ರಷ್ಟು ಹಣವನ್ನು ಸರ್ಕಾರದಿಂದ ಪ್ರೋತ್ಸಾಹಕ ಧನವಾಗಿ ನೀಡುವ ಯೋಜನೆ ಜಾರಿಗೆ ತರಬೇಕು.

ಇದನ್ನೂ ಓದಿ: ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ

ತಮಿಳು ಚಿತ್ರರಂಗದ ಇಬ್ಬರು ಹಿರಿಯ ಕಲಾವಿದರು ರಾಜಕೀಯ ವೇದಿಕೆಯಲ್ಲಿ ಭೇಟಿಯಾಗಿ ಉದ್ಯಮದ ಏಳಿಗೆಗಾಗಿ ಚರ್ಚಿಸಿರುವುದು ಗಮನಾರ್ಹ ಸಂಗತಿ. ಸಿನಿಮಾ ರಂಗದ ಹಿನ್ನೆಲೆಯಿಂದಲೇ ಬಂದಿರುವ ಸಿಎಂ ವಿಜಯ್ ಅವರು ಹಿರಿಯ ನಟ ಕಮಲ್ ಹಾಸನ್ ಅವರ ಈ ಬೇಡಿಕೆಗಳಿಗೆ ಹೇಗೆ ಸ್ಪಂದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:06 am, Sun, 17 May 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ