Sign In

By signing in or creating an account, you agree with Associated Broadcasting Company's Terms & Conditions and Privacy Policy.

1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್

‘ವಿಕ್ರಮ್’ ಸಿನಿಮಾ ಪ್ರಚಾರ ಕಾರ್ಯದಲ್ಲಿಕಮಲ್ ಹಾಸನ್ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಪ್ರಮೋಷನ್​ಗೆ ದೆಹಲಿಗೆ ತೆರಳಿದ್ದರು. ಈ ವೇಳೆ ಅಲ್ಲಿ ಹಲವು ವಿಚಾರಗಳ ಬಗ್ಗೆ ಕಮಲ್ ಹಾಸನ್ ಮಾತನಾಡಿದ್ದಾರೆ.  

1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್
ಕಮಲ್ ಹಾಸನ್-ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 26, 2022 | 10:05 PM

ಸದ್ಯ ಪ್ಯಾನ್ ಇಂಡಿಯಾ ಸಿನಿಮಾ (Pan India Movie) ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಕಾನ್ಸೆಪ್ಟ್​ನಿಂದಾಗಿ ಸಿನಿಮಾ ಇಂಡಸ್ಟ್ರಿಯ ಚಿತ್ರಣ ನಿಧಾನವಾಗಿ ಬದಲಾಗುತ್ತಿದೆ. ಹಲವು ದೊಡ್ಡ ಬಜೆಟ್ ಚಿತ್ರಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದರಿಂದ ನಿರ್ಮಾಪಕರಿಗೆ ಲಾಭದಾಯಕವಾಗಿದೆ. ಬೇರೆ ಭಾಷೆಯವರಿಗೆ ನಮ್ಮ ಚಿತ್ರರಂಗದ ಪರಿಚಯವಾಗುತ್ತದೆ. ‘ಬಾಹುಬಲಿ’ ತೆರೆಕಂಡ (Bahubali Movie) ನಂತರದಲ್ಲಿ ಪ್ಯಾನ್​ ಇಂಡಿಯಾ ಕಾನ್ಸೆಪ್ಟ್ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತ್ತು. ಆದರೆ, ಆ ಮೊದಲೇ ಈ ರೀತಿಯ ಪ್ರಯತ್ನಗಳು ನಡೆದಿದ್ದವು. ಈ ಬಗ್ಗೆ ಕಮಲ್ ಹಾಸನ್ (Kamal Haasan) ಮಾತನಾಡಿದ್ದಾರೆ. ‘ಕೆಜಿಎಫ್​’ ಹಾಗೂ ‘ಆರ್​ಆರ್​ಆರ್​’ ತಂಡದ್ದು ಪ್ಯಾನ್ ಇಂಡಿಯಾ ವಿಚಾರದಲ್ಲಿ ಹೊಸ ಪ್ರಯತ್ನವಲ್ಲ ಎಂದಿದ್ದಾರೆ ಅವರು.

ಕಮಲ್ ಹಾಸನ್ ಅವರು ಸುಮಾರು 200 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ, ತಮಿಳು, ತೆಲುಗು ಮೊದಲಾದ ಭಾಷೆಗಳಲ್ಲಿ ಅವರು ಅಭಿನಯಿಸಿದ್ದಾರೆ. ಸದ್ಯ, ‘ವಿಕ್ರಮ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಪ್ರಮೋಷನ್​ಗೆ ದೆಹಲಿಗೆ ತೆರಳಿದ್ದರು. ಈ ವೇಳೆ ಅಲ್ಲಿ ಹಲವು ವಿಚಾರಗಳ ಬಗ್ಗೆ ಕಮಲ್ ಹಾಸನ್ ಮಾತನಾಡಿದ್ದಾರೆ.

‘ಪ್ಯಾನ್​ ಇಂಡಿಯಾ ಎಂಬ ಕಾನ್ಸೆಪ್ಟ್ ಮೊದಲಿನಿಂದಲೂ ಇತ್ತು. ವಿ. ಶಾಂತಾರಾಮ್​ ಅವರು ಪ್ಯಾನ್​ ಇಂಡಿಯಾ ಸಿನಿಮಾ ಮಾಡಿದ್ದರು. 1960ರ ‘ಮುಘಲ್​-ಇ-ಅಜಾಮ್​’ ಹಾಗೂ 1965ರ ‘ಚೆಮ್ಮೀನ್​’ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿತ್ತು ‘ಆರ್​ಆರ್​ಆರ್​’, ‘ಕೆಜಿಎಫ್​’ ಮಾಡಿರುವುದು ಹೊಸತಲ್ಲ. ನಾವು ಬೇರೆಬೇರೆ ಭಾಷೆಗಳನ್ನು ಮಾತನಾಡುತ್ತೇವೆ. ಆದರೆ, ದೇಶಮಟ್ಟದಲ್ಲಿ ನಾವೆಲ್ಲರೂ ಒಂದು’ ಎಂದಿದ್ದಾರೆ ಕಮಲ್ ಹಾಸನ್.

ಇದನ್ನೂ ಓದಿ
Image
ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?
Image
ಶ್ರುತಿ ಹಾಸನ್​ ಹೊಸ ಫೋಟೋಶೂಟ್​; ಬಗೆ ಬಗೆಯಲ್ಲಿ ಪೋಸ್​ ನೀಡಿದ ಕಮಲ್ ಹಾಸನ್​​ ಪುತ್ರಿ
Image
ಕಮಲ್ ಹಾಸನ್ ಈಗ ಎಲ್ಲಿದ್ದಾರೆ?; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾದ ವೈರಲ್ ಫೋಟೋದ ಅಸಲಿಯತ್ತೇನು?
Image
Kamal Haasan: ನಟ ಕಮಲ್ ಹಾಸನ್ ಎನ್​ಎಫ್​ಟಿ ಪ್ರವೇಶಕ್ಕೆ ಸಿದ್ಧತೆ; ಏನಿದು ನಾನ್​ ಫಂಗಬಲ್​ ಟೋಕನ್?

ಇದನ್ನೂ ಓದಿ: ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?

‘ಕೆಜಿಎಫ್ 2’ ಹಾಗೂ ‘ಆರ್​ಆರ್​ಆರ್​’ ಸಿನಿಮಾ ಕಲೆಕ್ಷನ್​ 1000 ಕೋಟಿ ರೂಪಾಯಿ ದಾಟಿದೆ. ಇದಾದ ಬೆನ್ನಲ್ಲೇ ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂಬ ಚರ್ಚೆ ಶುರುವಾಗಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಕಮಲ್ ಹಾಸನ್ ಉತ್ತರಿಸಿದ್ದಾರೆ. ‘ನಾನು ಭಾರತೀಯ. ನೀವು ಯಾರು? ಮಧುರೈ ದೇವಸ್ಥಾನಕ್ಕೆ ನೀವು ತೆರಳಬಹುದು. ನಾನು ಕಾಶ್ಮೀರಕ್ಕೆ ಹೋಗಬಹುದು’ ಎಂದು ಹೇಳುವ ಮೂಲಕ ಈ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ