AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್

‘ವಿಕ್ರಮ್’ ಸಿನಿಮಾ ಪ್ರಚಾರ ಕಾರ್ಯದಲ್ಲಿಕಮಲ್ ಹಾಸನ್ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಪ್ರಮೋಷನ್​ಗೆ ದೆಹಲಿಗೆ ತೆರಳಿದ್ದರು. ಈ ವೇಳೆ ಅಲ್ಲಿ ಹಲವು ವಿಚಾರಗಳ ಬಗ್ಗೆ ಕಮಲ್ ಹಾಸನ್ ಮಾತನಾಡಿದ್ದಾರೆ.  

1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್
ಕಮಲ್ ಹಾಸನ್-ಯಶ್
TV9 Web
| Edited By: |

Updated on: May 26, 2022 | 10:05 PM

Share

ಸದ್ಯ ಪ್ಯಾನ್ ಇಂಡಿಯಾ ಸಿನಿಮಾ (Pan India Movie) ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಕಾನ್ಸೆಪ್ಟ್​ನಿಂದಾಗಿ ಸಿನಿಮಾ ಇಂಡಸ್ಟ್ರಿಯ ಚಿತ್ರಣ ನಿಧಾನವಾಗಿ ಬದಲಾಗುತ್ತಿದೆ. ಹಲವು ದೊಡ್ಡ ಬಜೆಟ್ ಚಿತ್ರಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದರಿಂದ ನಿರ್ಮಾಪಕರಿಗೆ ಲಾಭದಾಯಕವಾಗಿದೆ. ಬೇರೆ ಭಾಷೆಯವರಿಗೆ ನಮ್ಮ ಚಿತ್ರರಂಗದ ಪರಿಚಯವಾಗುತ್ತದೆ. ‘ಬಾಹುಬಲಿ’ ತೆರೆಕಂಡ (Bahubali Movie) ನಂತರದಲ್ಲಿ ಪ್ಯಾನ್​ ಇಂಡಿಯಾ ಕಾನ್ಸೆಪ್ಟ್ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತ್ತು. ಆದರೆ, ಆ ಮೊದಲೇ ಈ ರೀತಿಯ ಪ್ರಯತ್ನಗಳು ನಡೆದಿದ್ದವು. ಈ ಬಗ್ಗೆ ಕಮಲ್ ಹಾಸನ್ (Kamal Haasan) ಮಾತನಾಡಿದ್ದಾರೆ. ‘ಕೆಜಿಎಫ್​’ ಹಾಗೂ ‘ಆರ್​ಆರ್​ಆರ್​’ ತಂಡದ್ದು ಪ್ಯಾನ್ ಇಂಡಿಯಾ ವಿಚಾರದಲ್ಲಿ ಹೊಸ ಪ್ರಯತ್ನವಲ್ಲ ಎಂದಿದ್ದಾರೆ ಅವರು.

ಕಮಲ್ ಹಾಸನ್ ಅವರು ಸುಮಾರು 200 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ, ತಮಿಳು, ತೆಲುಗು ಮೊದಲಾದ ಭಾಷೆಗಳಲ್ಲಿ ಅವರು ಅಭಿನಯಿಸಿದ್ದಾರೆ. ಸದ್ಯ, ‘ವಿಕ್ರಮ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಪ್ರಮೋಷನ್​ಗೆ ದೆಹಲಿಗೆ ತೆರಳಿದ್ದರು. ಈ ವೇಳೆ ಅಲ್ಲಿ ಹಲವು ವಿಚಾರಗಳ ಬಗ್ಗೆ ಕಮಲ್ ಹಾಸನ್ ಮಾತನಾಡಿದ್ದಾರೆ.

‘ಪ್ಯಾನ್​ ಇಂಡಿಯಾ ಎಂಬ ಕಾನ್ಸೆಪ್ಟ್ ಮೊದಲಿನಿಂದಲೂ ಇತ್ತು. ವಿ. ಶಾಂತಾರಾಮ್​ ಅವರು ಪ್ಯಾನ್​ ಇಂಡಿಯಾ ಸಿನಿಮಾ ಮಾಡಿದ್ದರು. 1960ರ ‘ಮುಘಲ್​-ಇ-ಅಜಾಮ್​’ ಹಾಗೂ 1965ರ ‘ಚೆಮ್ಮೀನ್​’ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿತ್ತು ‘ಆರ್​ಆರ್​ಆರ್​’, ‘ಕೆಜಿಎಫ್​’ ಮಾಡಿರುವುದು ಹೊಸತಲ್ಲ. ನಾವು ಬೇರೆಬೇರೆ ಭಾಷೆಗಳನ್ನು ಮಾತನಾಡುತ್ತೇವೆ. ಆದರೆ, ದೇಶಮಟ್ಟದಲ್ಲಿ ನಾವೆಲ್ಲರೂ ಒಂದು’ ಎಂದಿದ್ದಾರೆ ಕಮಲ್ ಹಾಸನ್.

ಇದನ್ನೂ ಓದಿ
Image
ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?
Image
ಶ್ರುತಿ ಹಾಸನ್​ ಹೊಸ ಫೋಟೋಶೂಟ್​; ಬಗೆ ಬಗೆಯಲ್ಲಿ ಪೋಸ್​ ನೀಡಿದ ಕಮಲ್ ಹಾಸನ್​​ ಪುತ್ರಿ
Image
ಕಮಲ್ ಹಾಸನ್ ಈಗ ಎಲ್ಲಿದ್ದಾರೆ?; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾದ ವೈರಲ್ ಫೋಟೋದ ಅಸಲಿಯತ್ತೇನು?
Image
Kamal Haasan: ನಟ ಕಮಲ್ ಹಾಸನ್ ಎನ್​ಎಫ್​ಟಿ ಪ್ರವೇಶಕ್ಕೆ ಸಿದ್ಧತೆ; ಏನಿದು ನಾನ್​ ಫಂಗಬಲ್​ ಟೋಕನ್?

ಇದನ್ನೂ ಓದಿ: ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?

‘ಕೆಜಿಎಫ್ 2’ ಹಾಗೂ ‘ಆರ್​ಆರ್​ಆರ್​’ ಸಿನಿಮಾ ಕಲೆಕ್ಷನ್​ 1000 ಕೋಟಿ ರೂಪಾಯಿ ದಾಟಿದೆ. ಇದಾದ ಬೆನ್ನಲ್ಲೇ ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂಬ ಚರ್ಚೆ ಶುರುವಾಗಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಕಮಲ್ ಹಾಸನ್ ಉತ್ತರಿಸಿದ್ದಾರೆ. ‘ನಾನು ಭಾರತೀಯ. ನೀವು ಯಾರು? ಮಧುರೈ ದೇವಸ್ಥಾನಕ್ಕೆ ನೀವು ತೆರಳಬಹುದು. ನಾನು ಕಾಶ್ಮೀರಕ್ಕೆ ಹೋಗಬಹುದು’ ಎಂದು ಹೇಳುವ ಮೂಲಕ ಈ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ