AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಸ್ಟಾರ್​ ನಟರ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಕಮಲ್​ ಹಾಸನ್​

 ಕಮಲ್​ ಹಾಸನ್​ ಮಲ್ಟಿಸ್ಟಾರರ್​ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತಮಿಳು ನಟ ವಿಕ್ರಮ್​ ಹಾಗೂ ವಿಜಯ್​ ಸೇತುಪತಿ ಅವರನ್ನು ಈ ಚಿತ್ರಕ್ಕೆ ಹಾಕಿಕೊಳ್ಳಬೇಕು ಎನ್ನುವ ಆಲೋಚನೆಯಲ್ಲಿ ಕಮಲ್​ ಹಾಸನ್​ ಇದ್ದಾರೆ. ಈ

ಇಬ್ಬರು ಸ್ಟಾರ್​ ನಟರ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಕಮಲ್​ ಹಾಸನ್​
ಕಮಲ್ ಹಾಸನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 14, 2021 | 9:49 PM

Share

ಕಮಲ್​ ಹಾಸನ್​ ನಟನೆ ಮೂಲಕ ಭೇಷ್​ ಎನಿಸಿಕೊಂಡಿದ್ದಾರೆ. ಇದರ ಜತೆಗೆ ನಿರ್ದೇಶನ ಹಾಗೂ ನಿರ್ಮಾಣದಲ್ಲೂ ಯಶಸ್ಸು ಕಂಡಿದ್ದಾರೆ ಅವರು. ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’  ಬ್ಯಾನರ್​ ಮೂಲಕ ಸಿನಿಮಾ ನಿರ್ಮಾಣ ಕೆಲಸದಲ್ಲೂ ಕಮಲ್​ ಬ್ಯುಸಿ ಆಗಿದ್ದಾರೆ. ರಾಜಕೀಯದಲ್ಲಿ ಯಶಸ್ಸು ಸಿಗದಿದ್ದಕ್ಕೆ ಕಮಲ್​ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಈಗ ಅವರು ಸಾಲುಸಾಲು ಸಿನಿಮಾ ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದಾರೆ. ಅಷ್ಟೇ ಅಲ್ಲ, ದೊಡ್ಡ ಪ್ರಾಜೆಕ್ಟ್​ ಬಗ್ಗೆ ಅವರಿಗೆ ಆಲೋಚನೆ ಇದೆ. ಶೀಘ್ರದಲ್ಲೇ ಈ ಬಗ್ಗೆ ಅವರು ಘೋಷಣೆ ಮಾಡಲಿದ್ದಾರೆ ಎಂಬುದು ಕಾಲಿವುಡ್​ ಮಂದಿಯ ಮಾತು.

ಕಮಲ್​ ಹಾಸನ್​ ಮಲ್ಟಿಸ್ಟಾರರ್​ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತಮಿಳು ನಟ ವಿಕ್ರಮ್​ ಹಾಗೂ ವಿಜಯ್​ ಸೇತುಪತಿ ಅವರನ್ನು ಈ ಚಿತ್ರಕ್ಕೆ ಹಾಕಿಕೊಳ್ಳಬೇಕು ಎನ್ನುವ ಆಲೋಚನೆಯಲ್ಲಿ ಕಮಲ್​ ಹಾಸನ್​ ಇದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಒಂದೊಮ್ಮೆ ಮಾತುಕತೆ ಯಶಸ್ಸಾದರೆ ಎರಡು ಸ್ಟಾರ್​ ನಟರು ಒಂದೇ ಸಿನಿಮಾದಲ್ಲಿ ನಟಿಸಿದಂತಾಗುತ್ತದೆ. ಕಮಲ್​ ಹಾಸನ್​ ಅವರು ಕಥೆ ಸಿದ್ಧಪಡಿಸಿದ್ದಾರೆ. ಈ ಕಥೆಗೆ ವಿಜಯ್​ ಸೇತುಪತಿ ಮತ್ತು ವಿಕ್ರಮ್​ ಹೊಂದಾಣಿಕೆ ಆಗುತ್ತಾರೆ. ಈ ಕಾರಣಕ್ಕೆ ಅವರನ್ನೇ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎನ್ನುವ ಆಲೋಚನೆ  ಕಮಲ್​ ಅವರದ್ದು.

ವಿಜಯ್​ ಹಾಗೂ ವಿಕ್ರಮ್​ ಕಾಲಿವುಡ್​ನಲ್ಲಿ ತಮ್ಮದೇ ಹವಾ ಸೃಷ್ಟಿ ಮಾಡಿದ್ದಾರೆ. ಇಬ್ಬರೂ ಸ್ಟಾರ್​ ನಟರು. ನಟನೆಯಲ್ಲಿ ಎಂಥವರನ್ನಾದರೂ ಮೀರಿಸುತ್ತಾರೆ. ಈಗ ಇಬ್ಬರೂ ಒಂದೇ ಸಿನಿಮಾದಲ್ಲಿ ಕಾಣಿಸಿಕೊಂಡರೆ ಸಿನಿ ಪ್ರಿಯರಿಗೆ ಹಬ್ಬದೂಟ ಗ್ಯಾರಂಟಿ. ಈ ಬಗ್ಗೆ ಶೀಘ್ರವೇ ಅಪ್​ಡೇಟ್​ ಸಿಗುವ ಸಾಧ್ಯತೆ ಇದೆ.

ಕಮಲ್​ ಹಾಸನ್​ ಅವರು ‘ವಿಕ್ರಮ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಟೀಸರ್​ ಒಂದು ಇತ್ತೀಚೆಗೆ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಕಮಲ್​ ಹಾಸನ್​ ಲುಕ್​ ನೋಡಿ ಎಲ್ಲರೂ ಇಷ್ಟಪಟ್ಟಿದ್ದರು. ಸಿನಿಮಾದ ಬ್ಯಾಕ್​​ಗ್ರೌಂಡ್​ ಮ್ಯೂಸಿಕ್​ ಕೂಡ ಎಲ್ಲರಿಗೂ ಇಷ್ಟವಾಗಿತ್ತು.

ಇದನ್ನೂ ಓದಿ: ‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?

Kamal Haasan Birthday: ಕಮಲ್​ ಹಾಸನ್​ ಜನ್ಮದಿನಕ್ಕೆ ‘ವಿಕ್ರಮ್​’ ತಂಡದಿಂದ ಭರ್ಜರಿ ಗಿಫ್ಟ್​​; ಅಭಿಮಾನಿಗಳು ಫಿದಾ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ