AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಸ್ಟಾರ್​ ನಟರ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಕಮಲ್​ ಹಾಸನ್​

 ಕಮಲ್​ ಹಾಸನ್​ ಮಲ್ಟಿಸ್ಟಾರರ್​ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತಮಿಳು ನಟ ವಿಕ್ರಮ್​ ಹಾಗೂ ವಿಜಯ್​ ಸೇತುಪತಿ ಅವರನ್ನು ಈ ಚಿತ್ರಕ್ಕೆ ಹಾಕಿಕೊಳ್ಳಬೇಕು ಎನ್ನುವ ಆಲೋಚನೆಯಲ್ಲಿ ಕಮಲ್​ ಹಾಸನ್​ ಇದ್ದಾರೆ. ಈ

ಇಬ್ಬರು ಸ್ಟಾರ್​ ನಟರ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಕಮಲ್​ ಹಾಸನ್​
ಕಮಲ್ ಹಾಸನ್ (ಸಂಗ್ರಹ ಚಿತ್ರ)
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 14, 2021 | 9:49 PM

Share

ಕಮಲ್​ ಹಾಸನ್​ ನಟನೆ ಮೂಲಕ ಭೇಷ್​ ಎನಿಸಿಕೊಂಡಿದ್ದಾರೆ. ಇದರ ಜತೆಗೆ ನಿರ್ದೇಶನ ಹಾಗೂ ನಿರ್ಮಾಣದಲ್ಲೂ ಯಶಸ್ಸು ಕಂಡಿದ್ದಾರೆ ಅವರು. ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’  ಬ್ಯಾನರ್​ ಮೂಲಕ ಸಿನಿಮಾ ನಿರ್ಮಾಣ ಕೆಲಸದಲ್ಲೂ ಕಮಲ್​ ಬ್ಯುಸಿ ಆಗಿದ್ದಾರೆ. ರಾಜಕೀಯದಲ್ಲಿ ಯಶಸ್ಸು ಸಿಗದಿದ್ದಕ್ಕೆ ಕಮಲ್​ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಈಗ ಅವರು ಸಾಲುಸಾಲು ಸಿನಿಮಾ ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದಾರೆ. ಅಷ್ಟೇ ಅಲ್ಲ, ದೊಡ್ಡ ಪ್ರಾಜೆಕ್ಟ್​ ಬಗ್ಗೆ ಅವರಿಗೆ ಆಲೋಚನೆ ಇದೆ. ಶೀಘ್ರದಲ್ಲೇ ಈ ಬಗ್ಗೆ ಅವರು ಘೋಷಣೆ ಮಾಡಲಿದ್ದಾರೆ ಎಂಬುದು ಕಾಲಿವುಡ್​ ಮಂದಿಯ ಮಾತು.

ಕಮಲ್​ ಹಾಸನ್​ ಮಲ್ಟಿಸ್ಟಾರರ್​ ಸಿನಿಮಾ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತಮಿಳು ನಟ ವಿಕ್ರಮ್​ ಹಾಗೂ ವಿಜಯ್​ ಸೇತುಪತಿ ಅವರನ್ನು ಈ ಚಿತ್ರಕ್ಕೆ ಹಾಕಿಕೊಳ್ಳಬೇಕು ಎನ್ನುವ ಆಲೋಚನೆಯಲ್ಲಿ ಕಮಲ್​ ಹಾಸನ್​ ಇದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಒಂದೊಮ್ಮೆ ಮಾತುಕತೆ ಯಶಸ್ಸಾದರೆ ಎರಡು ಸ್ಟಾರ್​ ನಟರು ಒಂದೇ ಸಿನಿಮಾದಲ್ಲಿ ನಟಿಸಿದಂತಾಗುತ್ತದೆ. ಕಮಲ್​ ಹಾಸನ್​ ಅವರು ಕಥೆ ಸಿದ್ಧಪಡಿಸಿದ್ದಾರೆ. ಈ ಕಥೆಗೆ ವಿಜಯ್​ ಸೇತುಪತಿ ಮತ್ತು ವಿಕ್ರಮ್​ ಹೊಂದಾಣಿಕೆ ಆಗುತ್ತಾರೆ. ಈ ಕಾರಣಕ್ಕೆ ಅವರನ್ನೇ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎನ್ನುವ ಆಲೋಚನೆ  ಕಮಲ್​ ಅವರದ್ದು.

ವಿಜಯ್​ ಹಾಗೂ ವಿಕ್ರಮ್​ ಕಾಲಿವುಡ್​ನಲ್ಲಿ ತಮ್ಮದೇ ಹವಾ ಸೃಷ್ಟಿ ಮಾಡಿದ್ದಾರೆ. ಇಬ್ಬರೂ ಸ್ಟಾರ್​ ನಟರು. ನಟನೆಯಲ್ಲಿ ಎಂಥವರನ್ನಾದರೂ ಮೀರಿಸುತ್ತಾರೆ. ಈಗ ಇಬ್ಬರೂ ಒಂದೇ ಸಿನಿಮಾದಲ್ಲಿ ಕಾಣಿಸಿಕೊಂಡರೆ ಸಿನಿ ಪ್ರಿಯರಿಗೆ ಹಬ್ಬದೂಟ ಗ್ಯಾರಂಟಿ. ಈ ಬಗ್ಗೆ ಶೀಘ್ರವೇ ಅಪ್​ಡೇಟ್​ ಸಿಗುವ ಸಾಧ್ಯತೆ ಇದೆ.

ಕಮಲ್​ ಹಾಸನ್​ ಅವರು ‘ವಿಕ್ರಮ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಟೀಸರ್​ ಒಂದು ಇತ್ತೀಚೆಗೆ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಕಮಲ್​ ಹಾಸನ್​ ಲುಕ್​ ನೋಡಿ ಎಲ್ಲರೂ ಇಷ್ಟಪಟ್ಟಿದ್ದರು. ಸಿನಿಮಾದ ಬ್ಯಾಕ್​​ಗ್ರೌಂಡ್​ ಮ್ಯೂಸಿಕ್​ ಕೂಡ ಎಲ್ಲರಿಗೂ ಇಷ್ಟವಾಗಿತ್ತು.

ಇದನ್ನೂ ಓದಿ: ‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?

Kamal Haasan Birthday: ಕಮಲ್​ ಹಾಸನ್​ ಜನ್ಮದಿನಕ್ಕೆ ‘ವಿಕ್ರಮ್​’ ತಂಡದಿಂದ ಭರ್ಜರಿ ಗಿಫ್ಟ್​​; ಅಭಿಮಾನಿಗಳು ಫಿದಾ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!