Mani Ratnam: ಮಣಿರತ್ನಂ ಹುಟ್ಟುಹಬ್ಬಕ್ಕೆ ವಿಶೇಷ ಮಾತುಗಳಿಂದ ಶುಭ ಕೋರಿದ ನಟ ಕಮಲ್​ ಹಾಸನ್​

Mani Ratnam Birthday: ಬಣ್ಣದ ಲೋಕದಲ್ಲಿ ಮಣಿರತ್ನಂ ಅವರಿಗೆ ಇರುವ ಅನುಭವ ಅಪಾರ. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಂದಿಗೂ ಕೂಡ ಬೇಡಿಕೆ ಉಳಿಸಿಕೊಂಡಿದ್ದಾರೆ.

Mani Ratnam: ಮಣಿರತ್ನಂ ಹುಟ್ಟುಹಬ್ಬಕ್ಕೆ ವಿಶೇಷ ಮಾತುಗಳಿಂದ ಶುಭ ಕೋರಿದ ನಟ ಕಮಲ್​ ಹಾಸನ್​
ಮಣಿರತ್ನಂ, ಕಮಲ್​ ಹಾಸನ್​
Follow us
|

Updated on: Jun 02, 2023 | 1:08 PM

ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಇಂದು (ಜೂನ್ 2) ಹುಟ್ಟುಹಬ್ಬದ (Mani Ratnam Birthday) ಸಂಭ್ರಮ. ಈ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಅವರಿಗೆ ವಿಶ್​ ಮಾಡುತ್ತಿದ್ದಾರೆ. ಕಮಲ್​ ಹಾಸನ್ (Kamal Haasan)​ ಕೂಡ ವಿಶೇಷ ಮಾತುಗಳ ಮೂಲಕ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಮಣಿರತ್ನಂ (Mani Ratnam) ಮಾಡಿದ ಸಾಧನೆಯನ್ನು ಅವರು ಕೊಂಡಾಡಿದ್ದಾರೆ. ಬಣ್ಣದ ಲೋಕದಲ್ಲಿ ಮಣಿರತ್ನಂ ಅವರಿಗೆ ಇರುವ ಅನುಭವ ಅಪಾರ. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಂದಿಗೂ ಕೂಡ ಬೇಡಿಕೆ ಉಳಿಸಿಕೊಂಡಿದ್ದಾರೆ. ಅನೇಕ ಸ್ಟಾರ್​ ಕಲಾವಿದರ ಜೊತೆ ಅವರು ಕೆಲಸ ಮಾಡಿದ್ದಾರೆ. ಈ ವರ್ಷ ಅವರು ‘ಪೊನ್ನಿಯಿನ್​ ಸೆಲ್ವನ್ 2’ ಸಿನಿಮಾ ಮೂಲಕ ಗೆಲುವು ಕಂಡರು. ಈ ಎಲ್ಲ ಕಾರಣಗಳಿಂದಾಗಿ ಮಣಿರತ್ನಂ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. ಅಭಿಮಾನಿಗಳು, ಆಪ್ತರು ಅವರಿಗೆ ವಿಶ್​ ಮಾಡುತ್ತಿದ್ದಾರೆ.

‘ಸುತ್ತಲೂ ನೀವು ಸೃಷ್ಟಿಸಿದ ಖುಷಿಯಿಂದ ಜೀವನವನ್ನು ಎಣಿಸುವುದಾದರೆ, ನಿಮ್ಮ ಸುತ್ತ ಇರುವ ಸ್ನೇಹಿತರ ಸಂಖ್ಯೆಯಿಂದ ವಯಸ್ಸನ್ನು ಎಣಿಸುವುದಾದರೆ ನೀವು ಈಗಿರುವುದಕ್ಕಿಂತಲೂ ಹಿರಿಯ ವ್ಯಕ್ತಿ ಆಗುತ್ತೀರಿ. ಕಲೆಯ ಮೂಲಕ ಲಕ್ಷಾಂತರ ಹೃದಯಗಳನ್ನು ಮುಟ್ಟಿದ ಭಾರತೀಯ ಚಿತ್ರರಂಗದ ದೊರೆ ನೀವು. ಸಂಭಾಷಣೆಗಳಿಗೆ ಸುಂದರವಾದ ದೃಶ್ಯರೂಪ ನೀಡಿದವರು ನೀವು’ ಎಂದು ಮಣಿರತ್ನಂ ಅವರನ್ನು ಕಮಲ್​ ಹಾಸನ್​ ಹೊಗಳಿದ್ದಾರೆ.

‘ನೀವು ನಿರಂತರವಾಗಿ ಕಲಿಯುವ ಮೂಲಕ ಸವಾಲಿನ ಪ್ರಮಾಣವನ್ನು ಲೆಕ್ಕಿಸದೆ ಸಿನಿಮಾದ ಗಡಿಗಳನ್ನು ನಿರಂತರವಾಗಿ ಮೀರಿದ್ದೀರಿ. ಇಂದು ನೀವು ಮುಂದಿನ ಪೀಳಿಗೆಯ ಸಿನಿಮಾ ನಿರ್ದೇಶಕರನ್ನು ಪ್ರೇರೇಪಿಸುವ ಮಾಸ್ಟರ್ ಆಗಿದ್ದೀರಿ. ಅವರ ಮೂಲಕ ನಿಮ್ಮ ಪರಂಪರೆ ಶಾಶ್ವತವಾಗಿ ಮುಂದುವರಿಯುತ್ತದೆ. ‘ನಾಯಕನ್​’ ಸಿನಿಮಾದಿಂದ ‘ಕೆಎಚ್​234’ ಚಿತ್ರದವರೆಗೆ ನಿಮ್ಮೊಂದಿಗಿನ ನನ್ನ ಪಯಣ ಲಾಭದಾಯಕ ಮತ್ತು ಸಮೃದ್ಧಯುತವಾಗಿದೆ. ನಿಮಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಕಮಲ್​ ಹಾಸನ್​ ಅವರು ವಿಶ್​ ಮಾಡಿದ್ದಾರೆ.

ಇದನ್ನೂ ಓದಿ: ಮಣಿರತ್ನಂ ಜನ್ಮದಿನ: ನಿರ್ದೇಶಕನ ಪ್ರೇಮ ನಿವೇದನೆಯನ್ನು ರಿಜೆಕ್ಟ್ ಮಾಡಿದ್ದ ಸುಹಾಸಿನಿ

‘ಪೊನ್ನಿಯಿನ್​ ಸೆಲ್ವನ್​ 2’ ಚಿತ್ರದ ಬಗ್ಗೆ ಕಮಲ್​ ಹಾಸನ್​ ಅವರು ಈ ಹಿಂದೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ‘ಮಣಿರತ್ನಂ ಅವರು ಇಂಥ ದೊಡ್ಡ ಚಿತ್ರವನ್ನು ಮಾಡಲು ಸಾಕಷ್ಟು ಧೈರ್ಯ ತೋರಿಸಿದ್ದಾರೆ. ಮಣಿರತ್ನಂ ಮತ್ತು ಅವರ ಛಾಯಾಗ್ರಾಹಕರು, ಸಂಗೀತಗಾರರು ಹಾಗೂ ಇಡೀ ತಂಡದವರು ಒಟ್ಟಾಗಿ ತಮಿಳು ಸಿನಿಮಾವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ’ ಎಂದು ಕಮಲ್​ ಹಾಸನ್​ ಹೊಗಳಿದ್ದರು.

ಇದನ್ನೂ ಓದಿ: ಮಣಿರತ್ನಂ ಕಾಲಿಗೆ ನಮಸ್ಕರಿಸಿದ ಐಶ್ವರ್ಯಾ ರೈ; ನಿರ್ದೇಶಕನ ಬಗ್ಗೆ ನಟಿಗೆ ಇದೆ ವಿಶೇಷ ಗೌರವ

ಕಮಲ್​ ಹಾಸನ್​ ಅವರು ಅಭಿನಯದ ಜೊತೆಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರ ಒಡೆತನದ ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಮೂಲಕ ಸಾಕಷ್ಟು ಅತ್ಯುತ್ತಮ ಸಿನಿಮಾಗಳು ಮೂಡಿಬಂದಿವೆ. ಈಗ ಆ ಬ್ಯಾನರ್​ನಿಂದ ಹೊಸದೊಂದು ಚಿತ್ರ ನಿರ್ಮಾಣ ಆಗಲಿದ್ದು, ಅದಕ್ಕೆ 100 ಕೋಟಿ ರೂಪಾಯಿ ಬಂಡವಾಳ ಹೂಡಲು​ ಕಮಲ್​ ಹಾಸನ್​ ಸಜ್ಜಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ