AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಕೆರಳಿಸಿದ ಕಮಲ್ ಹಾಸನ್​ ಚಿತ್ರಕ್ಕೆ ಸಂಕಷ್ಟ; ‘ಥಗ್ ಲೈಫ್’ಗೆ ಸವಾಲಾದ ವಿವಾದ

ಕಮಲ್ ಹಾಸನ್ ಅವರ ‘ತಮಿಳಿನಿಂದಲೇ ಕನ್ನಡ ಹುಟ್ಟಿದೆ’ ಎಂಬ ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದೆ. ಅವರ ನಟನೆಯ ‘ಥಗ್ ಲೈಫ್’ ಚಿತ್ರದ ಬಿಡುಗಡೆಗೆ ಕರ್ನಾಟಕದಲ್ಲಿ ಅಡ್ಡಿಯಾಗುವ ಸಾಧ್ಯತೆ ಎದುರಾಗಿದೆ. ಕನ್ನಡ ಪರ ಹೋರಾಟಗಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಚಿತ್ರದ ಬಿಡುಗಡೆಯನ್ನು ತಡೆಯುವ ಬಗ್ಗೆ ಚರ್ಚೆ ನಡೆದಿದೆ.

ಕನ್ನಡಿಗರ ಕೆರಳಿಸಿದ ಕಮಲ್ ಹಾಸನ್​ ಚಿತ್ರಕ್ಕೆ ಸಂಕಷ್ಟ; ‘ಥಗ್ ಲೈಫ್’ಗೆ ಸವಾಲಾದ ವಿವಾದ
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: May 28, 2025 | 6:52 AM

Share

ಇತ್ತೀಚೆಗೆ ಸೋನು ನಿಗಮ್ (Sonu Nigam) ಅವರು ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಿದ್ದರು. ಆ ಬಳಿಕ ಕರ್ನಾಟಕದಲ್ಲಿ ಅವರಿಗೆ ಅವಕಾಶ ನೀಡಬಾರದು ಎನ್ನುವ ನಿರ್ಧಾರಕ್ಕೆ ಬಂದಾಗಿದೆ. ಈಗ ತಮಿಳು ನಟ ಕಮಲ್ ಹಾಸನ್ ಸರದಿ. ಅವರು ಕನ್ನಡದ ಬಗ್ಗೆ ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ಶಿವರಾಜ್​ಕುಮಾರ್ ಎದುರೇ ಕಮಲ್ ಹಾಸನ್ ಅವರು ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎನ್ನುವ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದಾಗಿ ‘ಥಗ್ ಲೈಫ್’ ಚಿತ್ರಕ್ಕೆ ಸಂಕಷ್ಟ ಉಂಟಾಗಿದೆ.

ಇತ್ತೀಚೆಗೆ ‘ಥಗ್ ಲೈಫ್’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಚೆನ್ನೈನಲ್ಲಿ ನಡೆಯಿತು.  ಇದಕ್ಕೆ ಶಿವರಾಜ್​ಕುಮಾರ್ ಅತಿಥಿಯಾಗಿ ತೆರಳಿದ್ದರು. ಈ ವೇಳೆ ಮಾತನಾಡುವಾಗ ಕಮಲ್ ಹಾಸನ್ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ. ‘ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು’ ಎಂದಿದ್ದಾರೆ. ಕಮಲ್ ಹಾಸನ್​ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಜೂನ್ 5ರಂದು ‘ಥಗ್ ಲೈಫ್’ ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲೂ  ಸಿನಿಮಾನ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಪ್ಲ್ಯಾನ್ ನಡೆದಿದೆ. ಆದರೆ, ಈಗ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಆಗಬಾರದು ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.  ಸಿನಿಮಾ ರಿಲೀಸ್ ಹತ್ತಿರವಾದಂತೆ ಆಕ್ರೋಶ ಇನ್ನಷ್ಟು ಬಲಗೊಳ್ಳಲಿದೆ.

ಇದನ್ನೂ ಓದಿ
Image
‘ನಾನು ಯಾರೊಂದಿಗೂ ಓಡಿ ಹೋಗಿಲ್ಲ, ಶ್ರೀಧರ್​​ಗೆ ಏಡ್ಸ್ ಬಂದಿತ್ತು’; ಪತ್ನಿ
Image
‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್
Image
ಸುರದ್ರೂಪಿ ಶ್ರೀಧರ್ ಕೊನೆಯ ದಿನಗಳು ಹೀಗಿದ್ದವು; ವೈರಿಗಳಿಗೂ ಹೀಗಾಗಬಾರದು
Image
‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ; ಫಲಿಸಲಿಲ್ಲ ಪ್ರಾರ್ಥನೆ

ಪ್ರತಿ ಬಾರಿ ರಜನಿಕಾಂತ್ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ಒಂದಷ್ಟು ಆಕ್ರೋಶ ವ್ಯಕ್ತವಾಗುತ್ತದೆ. ಅದೇ ರೀತಿ ಈಗ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆಯೂ ವಿವಾದ ಸೃಷ್ಟಿ ಆಗಿದ್ದು, ಕರ್ನಾಟಕದಲ್ಲಿ ಸಿನಿಮಾ ರಿಲೀಸ್​ಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಕನ್ನಡ ಹುಟ್ಟಿದ್ದು ತಮಿಳಿನಿಂದ’: ಶಿವಣ್ಣನ ಮುಂದೆಯೇ ವಿವಾದದ ಕಿಡಿ ಹೊತ್ತಿಸಿದ ಕಮಲ್ ಹಾಸನ್

‘ಥಗ್ ಲೈಫ್’ ಚಿತ್ರಕ್ಕೆ ಕಮಲ್ ಹಾಸನ್ ಹೀರೋ. ಅಭಿರಾಮಿ, ತ್ರಿಷಾ ಚಿತ್ರದ ನಾಯಕಿಯರು. ಮಣಿರತ್ನಂ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಹಲವು ವರ್ಷಗಳ ಬಳಿಕ ಕಮಲ್ ಹಾಸನ್ ಹಾಗೂ ಮಣಿರತ್ನಂ ಜೋಡಿ ಒಂದಾಗಿರೋದು ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ