AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಥಗ್ ಲೈಫ್’ ಚಿತ್ರಕ್ಕಿಂದು ನಿರ್ಣಾಯಕ ದಿನ; ಕರ್ನಾಟಕದಲ್ಲಿ ಸಿನಿಮಾ ಪ್ರದರ್ಶನ ಬಹುತೇಕ ಅನುಮಾನ

ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಯಿಂದಾಗಿ ಅವರ ನಟನೆಯ ‘ಥಗ್ ಲೈಫ್’ ಚಿತ್ರದ ಕರ್ನಾಟಕದಲ್ಲಿನ ಬಿಡುಗಡೆ ಅನಿಶ್ಚಿತತೆಯಲ್ಲಿದೆ. ಕನ್ನಡ ಪರ ಸಂಘಟನೆಗಳ ಆಕ್ರೋಶದ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ. ಕಮಲ್ ಹಾಸನ್ ಕ್ಷಮೆ ಯಾಚಿಸದಿರುವುದು ಇನ್ನಷ್ಟು ಸಂಕಷ್ಟ ಉಂಟುಮಾಡಿದೆ. ಚಿತ್ರದ ಭವಿಷ್ಯ ಇಂದು ಫಿಲ್ಮ್ ಚೇಂಬರ್‌ನ ನಿರ್ಧಾರದ ಮೇಲೆ ಅವಲಂಬಿತವಾಗಿದೆ.

‘ಥಗ್ ಲೈಫ್’ ಚಿತ್ರಕ್ಕಿಂದು ನಿರ್ಣಾಯಕ ದಿನ; ಕರ್ನಾಟಕದಲ್ಲಿ ಸಿನಿಮಾ ಪ್ರದರ್ಶನ ಬಹುತೇಕ ಅನುಮಾನ
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: Jun 02, 2025 | 7:00 AM

Share

ಕನ್ನಡದ ಬಗ್ಗೆ ಅಜ್ಞಾನದ ಹೇಳಿಕೆ ನೀಡಿದ ಕಮಲ್ ಹಾಸನ್ ಅವರು ಮೊಂಡುವಾದ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅವರ ನಟನೆಯ ಸಿನಿಮಾ ರಿಲೀಸ್​ಗೆ ವಿರೋಧ ವ್ಯಕ್ತವಾಗಿದೆ. ಆದರೆ, ಪಟ್ಟು ಬಿಡದ ಕಮಲ್ ಹಾಸನ್ (Kamal Haasan) ಕ್ಷಮೆ ಕೇಳಿಲ್ಲ. ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್ ಆಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಬಗ್ಗೆ ಪ್ರಶ್ನೆ ಮೂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 2) ಫಿಲ್ಮ್ ಚೇಂಬರ್​ನಲ್ಲಿ ಮಹತ್ವದ ನಿರ್ಧಾರ ಆಗಲಿದೆ. ಹೀಗಾಗಿ ‘ಥಗ್ ಲೈಫ್’ ಚಿತ್ರಕ್ಕೆ ಇಂದು ಮಹತ್ವದ ದಿನ.

ಮಣಿರತ್ನಂ ನಿರ್ದೇಶನದ ‘ಥಗ್​ ಲೈಫ್’ ಚಿತ್ರ ಜೂನ್ 5ರಂದು ರಿಲೀಸ್ ಆಗಬೇಕಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್​ನಲ್ಲಿ ಶಿವರಾಜ್​ಕುಮಾರ್ ಉದ್ದೇಶಿಸಿ ಮಾತನಾಡುವಾಗ, ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಮಾತನ್ನು ಕಮಲ್ ಹಾಸನ್ ಹೇಳಿದ್ದರು. ಆ ಬಳಿಕ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದ ಅವರು, ‘ನಾನು ಪ್ರೀತಿಯಿಂದ ಹಾಗೆ ಹೇಳಿದ್ದೇನೆ. ಈ ವಿಚಾರದಲ್ಲಿ ಕ್ಷಮೆಯೇ ಇಲ್ಲ’ ಎಂದಿದ್ದರು.

ಇದಾದ ಬಳಿಕ ಸಿನಿಮಾ ರಿಲೀಸ್​ಗೆ ಅಡಚಣೆ ಉಂಟು ಮಾಡೋದಾಗಿ ಕಮಲ್ ಹಾಸನ್​ಗೆ ಬೆದರಿಕೆ ಹಾಕಲಾಯಿತು. ಆದರೆ, ಬೆದರಿಕೆಗೆ ಹೆದರೋ ಮಾತೇ ಇಲ್ಲ ಎಂದು ಕಮಲ್ ಹಾಸನ್ ಅವರು ಖಡಕ್ ಆಗಿ ಹೇಳಿದ್ದರು. ಸಿನಿಮಾ ರಿಲೀಸ್ ಹತ್ತಿರವಾದರೂ ಅವರು ಕ್ಷಮೆ ಕೇಳಿಲ್ಲ.

ಇದನ್ನೂ ಓದಿ
Image
ಟಾಲಿವುಡ್​ನಲ್ಲಿ ರೀ-ಯೂನಿಯನ್ ಸಂಭ್ರಮ; ಸ್ಯಾಂಡಲ್​ವುಡ್​ನಲ್ಲಿ ಯಾವಾಗ?
Image
ಎಚ್​ಎಸ್​ ವೆಂಕಟೇಶ​ಮೂರ್ತಿ ನಿಧನ; ಖ್ಯಾತ ಸಾಹಿತಿ, ಕವಿ ಇನ್ನಿಲ್ಲ
Image
ಹೊಂಬಾಳೆ ನಿರ್ಮಾಣದ ಹೃತಿಕ್ ಚಿತ್ರಕ್ಕೆ ದಕ್ಷಿಣದ ಖ್ಯಾತ ಹೀರೋ ಡೈರೆಕ್ಷನ್
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?

ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ದರೆ ಕನ್ನಡ ಪರ ಹೋರಾಟಗಾರರ ಕಿಚ್ಚು ಮುಂದುವರೆಯಲಿದೆ. ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರದಲ್ಲಿ ಕರ್ನಾಟಕದ ವಿತರಕರ ನಿರ್ಧಾರ ಏನು ಅನ್ನೋ ಕುತೂಹಲ ಕೂಡ ಇದೆ.

ಇದನ್ನೂ ಓದಿ: ಕಮಲ್ ಹಾಸನ್ ವಿವಾದದ ಬಳಿಕ ಮೊದಲ ಬಾರಿಗೆ ವೇದಿಕೆ ಮೇಲೆ ಮಾತನಾಡಿದ ಶಿವಣ್ಣ

ಈ‌ ನಡುವೆ ಕನ್ನಡ ಭಾಷೆ ವಿಚಾರಕ್ಕೆ ಕಮಲ್ ಹೆಳಿರೋ ಮಾತಿಗೆ ತೀವ್ರ ಆಕ್ರೋಶ ಮುಂದುವರೆದಿದೆ. ಇಂದು ಸಭೆ ನಡೆಯಲಿದ್ದು ಆ ಬಳಿಕ ಅಂತಿಮ ನಿರ್ಧಾರ ಆಗಲಿದೆ. ಸಿನಿಮಾ ಪ್ರದರ್ಶನ ಮಾಡಿದರೆ ಥಿಯೇಟರ್​ಗೆ ಬೆಂಕಿ ಹಚ್ಚುವ ಎಚ್ಚರಿಕೆ ನೀಡಾಗಿದೆ. ಇನ್ನು ಬುಕ್ ಮೈ ಶೋನಲ್ಲಿ ಸಿನಿಮಾ ಬುಕಿಂಗ್ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಚೆನ್ನೈನಲ್ಲಿ ಸಿನಿಮಾ ಬುಕಿಂಗ್ ಓಪನ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್