AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’; ಕನ್ನಡಿಗರ ತಂಟೆಗೆ ಬಂದವರಿಗೆ ತಕ್ಕ ಪಾಠ

ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಿಲ್ಲ. ಇದರಿಂದ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಪಡೆಯಲು ವಿಫಲವಾಗಿದೆ. ಕನ್ನಡದ ಮೂಲ ತಮಿಳು ಎಂದು ಹೇಳಿದ್ದ ಅವರು, ಕ್ಷಮೆ ಕೇಳಲು ನಿರಾಕರಿಸಿದ್ದರು. ಇದು ಅವರ ಸಿನಿಮಾಗೆ ದೊಡ್ಡ ಹೊಡೆತ ಕೊಟ್ಟಿದೆ.

ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’; ಕನ್ನಡಿಗರ ತಂಟೆಗೆ ಬಂದವರಿಗೆ ತಕ್ಕ ಪಾಠ
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: Jun 09, 2025 | 6:52 AM

Share

ಹಿರಿಯ ನಟ ಕಮಲ್ ಹಾಸನ್ (Kamal Haasan) ಅವರು ಸುಖಾಸುಮ್ಮನೆ ಕನ್ನಡಿಗರ ಕೆಣಕಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿದ್ದು ಮಾತ್ರವಲ್ಲದೆ, ಅದಕ್ಕೆ ಕ್ಷಮೆ ಕೇಳಲು ನಿರಾಕರಿಸಿದ್ದರು. ಇದರ ಪರಿಣಾಮ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಮೇಲೆ ಉಂಟಾಯಿತು. ಕರ್ನಾಟಕದಲ್ಲಿ ಸಿನಿಮಾ ರಿಲೀಸ್​ಗೆ ಅವಕಾಶ ನೀಡಿಲ್ಲ. ಈ ಕಾರಣದಿಂದಲೇ ಕಲೆಕ್ಷನ್ ವಿಚಾರದಲ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಮುಗ್ಗರಿಸಿದೆ. ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು, ಇನ್ನೂ 40 ಕೋಟಿ ರೂಪಾಯಿ ಕ್ಲಬ್ ಸೇರಲು ಒದ್ದಾಡುತ್ತಿದೆ.

ಈ ಮೊದಲು ರಿಲೀಸ್ ಆದ ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಹೀನಾಯ ವಿಮರ್ಶೆ ಪಡೆಯಿತು. ಈ ರೀತಿ ವಿಮರ್ಶೆ ಪಡೆದ ಸಿನಿಮಾ ಕೂಡ ಮೂರು ದಿನಕ್ಕೆ ಸುಮಾರು 70 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈ ಚಿತ್ರಕ್ಕೆ ಕರ್ನಾಟಕದಲ್ಲೂ ಒಳ್ಳೆಯ ಗಳಿಕೆ ಆಗಿತ್ತು. ಆದರೆ, ಈಗ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದ ಕಲೆಕ್ಷನ್ ಇಲ್ಲದೆ ಕಷ್ಟ ಹೆಚ್ಚಿದೆ. ‘ಇಂಡಿಯನ್ 2’ ಚಿತ್ರದ ಅರ್ಧದಷ್ಟು ಗಳಿಸಲು ಈ ಸಿನಿಮಾ ಬಳಿ ಸಾಧ್ಯವಾಗುತ್ತಿಲ್ಲ.

‘ಥಗ್ ಲೈಫ್’ ಸಿನಿಮಾ ಗುರುವಾರ (ಜೂನ್ 5) ರಿಲೀಸ್ ಆಯಿತು. ಮೊದಲ ದಿನ 15 ಕೋಟಿ ರೂಪಾಯಿ, ಎರಡನೇ ದಿನ 7.15 ಕೋಟಿ ರೂಪಾಯಿ ಗಳಿಸಿತು. ಶನಿವಾರ 7.75 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಸಾಮಾನ್ಯವಾಗಿ ಭಾನುವಾರ ಎಲ್ಲಾ ಸಿನಿಮಾಗಳಿಗೆ ತುಂಬಾನೇ ಮುಖ್ಯವಾಗುತ್ತದೆ. ಕಷ್ಟದಲ್ಲಿದ್ದ ‘ಥಗ್ ಲೈಫ್’ ಚಿತ್ರಕ್ಕೂ ಈ ದಿನ ಮುಖ್ಯವಾಗಿತ್ತು. ಆದರೆ, ಸಿನಿಮಾ ಗಳಿಸಿದ್ದು ಕೇವಲ 6.50 ಕೋಟಿ ರೂಪಾಯಿ. ಈ ಮೂಲಕ ಚಿತ್ರದ ಒಟ್ಟೂ ಕಲೆಕ್ಷನ್ 36.90 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ
Image
ಕಚೇರಿಯಲ್ಲಿರುವ ಸಮಯವೂ ನಿಮ್ಮದೇ, ಎಂಜಾಯ್ ಮಾಡಿ; ಜಯಂತ್ ಕಾಯ್ಕಿಣಿ
Image
‘ಥಗ್ ಲೈಫ್’ ಸೋಲಿನಿಂದ ರಾಮ್ ಚರಣ್ ಚಿತ್ರಕ್ಕೂ ಶುರವಾಗಿದೆ ಭಯ; ಏನಿದು ನಂಟು?
Image
ಒಂದಂಕಿಗೆ ಬಂತು ಥಗ್ ಲೈಫ್ ಕಲೆಕ್ಷನ್; ಕಮಲ್ ಚಿತ್ರಕ್ಕೆ ಕುಂಟೋಂದೋಂದೆ ಆಯ್ಕ
Image
ಹಿತಾಳು ಅಂಬಿಕಾ ಮಗಳು ಅನ್ನೋದು ದುರ್ಗಾಗೆ ತಿಳಿದೇ ಹೋಯ್ತು

ಇದನ್ನೂ ಓದಿ: ಕಮಲ್ ಹಾಸನ್ ಬಳಿಕ ಕನ್ನಡಕ್ಕೆ ಮಸಿ ಬಳಿಯಲು ಬಂದ ಆರ್​ಜಿವಿ; ಅಣ್ಣಾವ್ರ ಹೀಗಳೆದ ನಿರ್ದೇಶಕ

‘ವಿಕ್ರಮ್’ ಸಿನಿಮಾ ನಿರ್ಮಾಣ ಮಾಡಿ ಗೆದ್ದಿದ್ದ ಕಮಲ್ ಹಾಸನ್ ಅವರು ‘ಥಗ್ ಲೈಫ್’ ಕೂಡ ನಿರ್ಮಿಸಿದರು. ಆದರೆ, ಈ ಚಿತ್ರ ಅವರಿಗೆ ದೊಡ್ಡ ಹೊಡೆತ ಕೊಟ್ಟಿದೆ. ನಿರ್ಮಾಪಕನಾಗಿ ಅವರಿಗೆ ಸಾಕಷ್ಟು ಹಿನ್ನಡೆ ಆಗಿದೆ. ಅವರು ರಾಜಕೀಯದಲ್ಲೂ ಬ್ಯುಸಿ ಇದ್ದಾರೆ. ಈಗ ಕನ್ನಡಿಗರ ಕೆಣಕಿ ದೊಡ್ಡ ಪಾಠ ಕಲಿತುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ