AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ.

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?
ಕಮಲ್​ ಹಾಸನ್​
ರಾಜೇಶ್ ದುಗ್ಗುಮನೆ
|

Updated on: May 27, 2021 | 9:28 PM

Share

 ತಮಿಳು ಬಿಗ್​ ಬಾಸ್​ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈ ನಾಲ್ಕೂ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು ಖ್ಯಾತ ನಟ ಕಮಲ್​ ಹಾಸನ್​. ಮುಂಬರುವ ಐದನೇ ಸೀಸನ್​ಅನ್ನು ಕೂಡ ಕಮಲ್​ ಹಾಸನ್​ ಅವರೇ ನಡೆಸಿಕೊಡಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಅವರು ಬಿಗ್​ ಬಾಸ್​ ಸಂಭಾವನೆ ಹೆಚ್ಚಿಸಿಕೊಂಡ ಬಗ್ಗೆ ವರದಿಗಳು ಹರಿದಾಡುತ್ತಿವೆ. 

ತಮಿಳು ಬಿಗ್​ ಬಾಸ್​ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆ ಇನ್ನೂ ಹಾಗೆಯೇ ಇದೆ. ಜುಲೈ ವೇಳೆಗೆ ಇದರ ಅಬ್ಬರ ಕಡಿಮೆ ಆಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದನ್ನೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ವರ್ಷಾಂತ್ಯಕ್ಕೆ ತಮಿಳು ಬಿಗ್​ ಬಾಸ್​ ಸೀಸನ್-5ಅನ್ನು ಆರಂಭಿಸುವ ಆಲೋಚನೆಯನ್ನು ವಾಹಿನಿ ಹೊಂದಿದೆ.

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ. ಈಗ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಿದ್ದು, ಮತ್ತೆ ಬಿಗ್​ ಬಾಸ್​ನತ್ತ ಮುಖ ಮಾಡುವುದಿಲ್ಲ ಎನ್ನಲಾಗಿತ್ತು. ಆದರೆ, ಈಗ ರಾಜಕೀಯದಲ್ಲಿ ಯಶಸ್ಸು ಸಿಗದ ಕಾರಣ ಸಿನಿಮಾ ಕೆಲಸಕ್ಕೆ ಕಂಬ್ಯಾಕ್​ ಮಾಡಿದ್ದಾರೆ. ಈ ಮಧ್ಯೆ ಕಮಲ್​ ಹಾಸನ್​ ಬಿಗ್​ ಬಾಸ್​ಗಾಗಿ​ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಕಮಲ್​ ಹಾಸನ್​ ಬಿಗ್​ ಬಾಸ್​​ಗಾಗಿ​ 4.80 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದರಂತೆ.ಅಂದರೆ ಪ್ರತಿ ಎಪಿಸೋಡ್​ಗೆ ಸುಮಾರು 16 ಲಕ್ಷ. ಈ ಬಾರಿ ಅವರು ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ತಮಿಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಕಮಲ್​ ಹಾಸನ್​ ‘ವಿಕ್ರಮ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಇಂಡಿಯನ್​ 2 ಸಿನಿಮಾದಲ್ಲೂ ಕಮಲ್​ ನಟಿಸುತ್ತಿದ್ದಾರೆ.

ಇದನ್ನೂ ಒದಿ: ಕಮಲ್ ಹಾಸನ್ ಪಕ್ಷದಿಂದ ಹೊರನಡೆದ ಇನ್ನಿಬ್ಬರು ಮುಖಂಡರು; ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜೀನಾಮೆ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್