AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ.

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?
ಕಮಲ್​ ಹಾಸನ್​
ರಾಜೇಶ್ ದುಗ್ಗುಮನೆ
|

Updated on: May 27, 2021 | 9:28 PM

Share

 ತಮಿಳು ಬಿಗ್​ ಬಾಸ್​ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈ ನಾಲ್ಕೂ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು ಖ್ಯಾತ ನಟ ಕಮಲ್​ ಹಾಸನ್​. ಮುಂಬರುವ ಐದನೇ ಸೀಸನ್​ಅನ್ನು ಕೂಡ ಕಮಲ್​ ಹಾಸನ್​ ಅವರೇ ನಡೆಸಿಕೊಡಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಅವರು ಬಿಗ್​ ಬಾಸ್​ ಸಂಭಾವನೆ ಹೆಚ್ಚಿಸಿಕೊಂಡ ಬಗ್ಗೆ ವರದಿಗಳು ಹರಿದಾಡುತ್ತಿವೆ. 

ತಮಿಳು ಬಿಗ್​ ಬಾಸ್​ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆ ಇನ್ನೂ ಹಾಗೆಯೇ ಇದೆ. ಜುಲೈ ವೇಳೆಗೆ ಇದರ ಅಬ್ಬರ ಕಡಿಮೆ ಆಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದನ್ನೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ವರ್ಷಾಂತ್ಯಕ್ಕೆ ತಮಿಳು ಬಿಗ್​ ಬಾಸ್​ ಸೀಸನ್-5ಅನ್ನು ಆರಂಭಿಸುವ ಆಲೋಚನೆಯನ್ನು ವಾಹಿನಿ ಹೊಂದಿದೆ.

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ. ಈಗ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಿದ್ದು, ಮತ್ತೆ ಬಿಗ್​ ಬಾಸ್​ನತ್ತ ಮುಖ ಮಾಡುವುದಿಲ್ಲ ಎನ್ನಲಾಗಿತ್ತು. ಆದರೆ, ಈಗ ರಾಜಕೀಯದಲ್ಲಿ ಯಶಸ್ಸು ಸಿಗದ ಕಾರಣ ಸಿನಿಮಾ ಕೆಲಸಕ್ಕೆ ಕಂಬ್ಯಾಕ್​ ಮಾಡಿದ್ದಾರೆ. ಈ ಮಧ್ಯೆ ಕಮಲ್​ ಹಾಸನ್​ ಬಿಗ್​ ಬಾಸ್​ಗಾಗಿ​ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಕಮಲ್​ ಹಾಸನ್​ ಬಿಗ್​ ಬಾಸ್​​ಗಾಗಿ​ 4.80 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದರಂತೆ.ಅಂದರೆ ಪ್ರತಿ ಎಪಿಸೋಡ್​ಗೆ ಸುಮಾರು 16 ಲಕ್ಷ. ಈ ಬಾರಿ ಅವರು ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ತಮಿಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಕಮಲ್​ ಹಾಸನ್​ ‘ವಿಕ್ರಮ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಇಂಡಿಯನ್​ 2 ಸಿನಿಮಾದಲ್ಲೂ ಕಮಲ್​ ನಟಿಸುತ್ತಿದ್ದಾರೆ.

ಇದನ್ನೂ ಒದಿ: ಕಮಲ್ ಹಾಸನ್ ಪಕ್ಷದಿಂದ ಹೊರನಡೆದ ಇನ್ನಿಬ್ಬರು ಮುಖಂಡರು; ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜೀನಾಮೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ