AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ.

‘ಬಿಗ್ ಬಾಸ್​ ಸೀಸನ್​ 5’ ಕಮಲ್​ ಹಾಸನ್ ಪಡೆಯುತ್ತಿರೋ ಸಂಭಾವನೆ ಎಷ್ಟು?
ಕಮಲ್​ ಹಾಸನ್​
ರಾಜೇಶ್ ದುಗ್ಗುಮನೆ
|

Updated on: May 27, 2021 | 9:28 PM

Share

 ತಮಿಳು ಬಿಗ್​ ಬಾಸ್​ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈ ನಾಲ್ಕೂ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು ಖ್ಯಾತ ನಟ ಕಮಲ್​ ಹಾಸನ್​. ಮುಂಬರುವ ಐದನೇ ಸೀಸನ್​ಅನ್ನು ಕೂಡ ಕಮಲ್​ ಹಾಸನ್​ ಅವರೇ ನಡೆಸಿಕೊಡಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ, ಅವರು ಬಿಗ್​ ಬಾಸ್​ ಸಂಭಾವನೆ ಹೆಚ್ಚಿಸಿಕೊಂಡ ಬಗ್ಗೆ ವರದಿಗಳು ಹರಿದಾಡುತ್ತಿವೆ. 

ತಮಿಳು ಬಿಗ್​ ಬಾಸ್​ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆ ಇನ್ನೂ ಹಾಗೆಯೇ ಇದೆ. ಜುಲೈ ವೇಳೆಗೆ ಇದರ ಅಬ್ಬರ ಕಡಿಮೆ ಆಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದನ್ನೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ವರ್ಷಾಂತ್ಯಕ್ಕೆ ತಮಿಳು ಬಿಗ್​ ಬಾಸ್​ ಸೀಸನ್-5ಅನ್ನು ಆರಂಭಿಸುವ ಆಲೋಚನೆಯನ್ನು ವಾಹಿನಿ ಹೊಂದಿದೆ.

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ. ಈಗ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಿದ್ದು, ಮತ್ತೆ ಬಿಗ್​ ಬಾಸ್​ನತ್ತ ಮುಖ ಮಾಡುವುದಿಲ್ಲ ಎನ್ನಲಾಗಿತ್ತು. ಆದರೆ, ಈಗ ರಾಜಕೀಯದಲ್ಲಿ ಯಶಸ್ಸು ಸಿಗದ ಕಾರಣ ಸಿನಿಮಾ ಕೆಲಸಕ್ಕೆ ಕಂಬ್ಯಾಕ್​ ಮಾಡಿದ್ದಾರೆ. ಈ ಮಧ್ಯೆ ಕಮಲ್​ ಹಾಸನ್​ ಬಿಗ್​ ಬಾಸ್​ಗಾಗಿ​ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಕಮಲ್​ ಹಾಸನ್​ ಬಿಗ್​ ಬಾಸ್​​ಗಾಗಿ​ 4.80 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದರಂತೆ.ಅಂದರೆ ಪ್ರತಿ ಎಪಿಸೋಡ್​ಗೆ ಸುಮಾರು 16 ಲಕ್ಷ. ಈ ಬಾರಿ ಅವರು ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ತಮಿಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಕಮಲ್​ ಹಾಸನ್​ ‘ವಿಕ್ರಮ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಇಂಡಿಯನ್​ 2 ಸಿನಿಮಾದಲ್ಲೂ ಕಮಲ್​ ನಟಿಸುತ್ತಿದ್ದಾರೆ.

ಇದನ್ನೂ ಒದಿ: ಕಮಲ್ ಹಾಸನ್ ಪಕ್ಷದಿಂದ ಹೊರನಡೆದ ಇನ್ನಿಬ್ಬರು ಮುಖಂಡರು; ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ರಾಜೀನಾಮೆ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ