AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
TV9 Web
| Edited By: |

Updated on:Aug 23, 2021 | 5:17 PM

Share

2019ರಲ್ಲಿ ‘ಕಾಂಚನ 3’ ಸಿನಿಮಾ ತಮಿಳಿನಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ರಾಘವ ಲಾರೆನ್ಸ್​ ನಟಿಸಿ ನಿರ್ದೇಶಿಸಿದ್ದರು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲೂ ಒಳ್ಳೆಯ ಗಳಿಕೆ ಮಾಡಿತ್ತು. ಈಗ ಈ ಸಿನಿಮಾದಲ್ಲಿ ನಟಿಸಿದ್ದ ಅಲೆಕ್ಸಾಂಡ್ರಾ ಜಾವಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆ ಇರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ. ಆತ ಮನೆಯಿಂದ ಹೊರ ಹೋಗಿದ್ದನ್ನು ಕೆಲವರು ನೋಡಿದ್ದಾರೆ. ಈಗ ಅಲೆಕ್ಸಾಂಡ್ರಾ ಮೃತದೇಹ ಪತ್ತೆ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಅಲೆಕ್ಸಾಂಡ್ರಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಮನೆಯಲ್ಲಿರುವ ಫ್ಯಾನ್​ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

2019ರಲ್ಲಿ ಅಲೆಕ್ಸಾಂಡ್ರಾ ಸುದ್ದಿಯಾಗಿದ್ದರು. ಇದಕ್ಕೆ ಕಾರಣ ಚೆನ್ನೈ ಮೂಲದ ಫೋಟೋಗ್ರಾಫರ್​. ‘ಆತ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎನ್ನುವ ಗಂಭೀರ ಆರೋಪ ಮಾಡಿದ್ದರು. ಪೊಲೀಸರು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಫೋಟೋಗ್ರಾಫರ್​ನನ್ನು ಬಂಧಿಸಿದ್ದರು. ನಂತರ ಈತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಫೋಟೋಗ್ರಾಫರ್​ ಏನಾದರೂ ಅಲೆಕ್ಸಾಂಡ್ರಾಗೆ ಬೆದರಿಕೆ ವೊಡ್ಡಿದ್ದನೇ ಎನ್ನುವ ಅನುಮಾನ ಕೂಡ ಮೂಡಿದೆ. ಪೊಲೀಸರು ಈ ವಿಚಾರವಾಗಿಯೂ ತನಿಖೆ ನಡೆಸುತ್ತಿದ್ದಾರೆ.

‘ಕಾಂಚನ’, ‘ಕಾಂಚನ 2’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದೇ ಭರವಸೆಯಲ್ಲಿ ‘ಕಾಂಚನ 3’ ಮಾಡಲಾಗಿತ್ತು. ಈ ಸಿನಿಮಾ ಕೂಡ ಉತ್ತಮ ಗಳಿಕೆ ಮಾಡಿತ್ತು. ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

Published On - 11:40 am, Mon, 23 August 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ