AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
TV9 Web
| Edited By: |

Updated on:Aug 23, 2021 | 5:17 PM

Share

2019ರಲ್ಲಿ ‘ಕಾಂಚನ 3’ ಸಿನಿಮಾ ತಮಿಳಿನಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ರಾಘವ ಲಾರೆನ್ಸ್​ ನಟಿಸಿ ನಿರ್ದೇಶಿಸಿದ್ದರು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲೂ ಒಳ್ಳೆಯ ಗಳಿಕೆ ಮಾಡಿತ್ತು. ಈಗ ಈ ಸಿನಿಮಾದಲ್ಲಿ ನಟಿಸಿದ್ದ ಅಲೆಕ್ಸಾಂಡ್ರಾ ಜಾವಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆ ಇರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ. ಆತ ಮನೆಯಿಂದ ಹೊರ ಹೋಗಿದ್ದನ್ನು ಕೆಲವರು ನೋಡಿದ್ದಾರೆ. ಈಗ ಅಲೆಕ್ಸಾಂಡ್ರಾ ಮೃತದೇಹ ಪತ್ತೆ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಅಲೆಕ್ಸಾಂಡ್ರಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಮನೆಯಲ್ಲಿರುವ ಫ್ಯಾನ್​ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

2019ರಲ್ಲಿ ಅಲೆಕ್ಸಾಂಡ್ರಾ ಸುದ್ದಿಯಾಗಿದ್ದರು. ಇದಕ್ಕೆ ಕಾರಣ ಚೆನ್ನೈ ಮೂಲದ ಫೋಟೋಗ್ರಾಫರ್​. ‘ಆತ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎನ್ನುವ ಗಂಭೀರ ಆರೋಪ ಮಾಡಿದ್ದರು. ಪೊಲೀಸರು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಫೋಟೋಗ್ರಾಫರ್​ನನ್ನು ಬಂಧಿಸಿದ್ದರು. ನಂತರ ಈತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಫೋಟೋಗ್ರಾಫರ್​ ಏನಾದರೂ ಅಲೆಕ್ಸಾಂಡ್ರಾಗೆ ಬೆದರಿಕೆ ವೊಡ್ಡಿದ್ದನೇ ಎನ್ನುವ ಅನುಮಾನ ಕೂಡ ಮೂಡಿದೆ. ಪೊಲೀಸರು ಈ ವಿಚಾರವಾಗಿಯೂ ತನಿಖೆ ನಡೆಸುತ್ತಿದ್ದಾರೆ.

‘ಕಾಂಚನ’, ‘ಕಾಂಚನ 2’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದೇ ಭರವಸೆಯಲ್ಲಿ ‘ಕಾಂಚನ 3’ ಮಾಡಲಾಗಿತ್ತು. ಈ ಸಿನಿಮಾ ಕೂಡ ಉತ್ತಮ ಗಳಿಕೆ ಮಾಡಿತ್ತು. ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

Published On - 11:40 am, Mon, 23 August 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ