AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ.

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?
TV9 Web
| Edited By: |

Updated on:Aug 23, 2021 | 5:17 PM

Share

2019ರಲ್ಲಿ ‘ಕಾಂಚನ 3’ ಸಿನಿಮಾ ತಮಿಳಿನಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ರಾಘವ ಲಾರೆನ್ಸ್​ ನಟಿಸಿ ನಿರ್ದೇಶಿಸಿದ್ದರು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲೂ ಒಳ್ಳೆಯ ಗಳಿಕೆ ಮಾಡಿತ್ತು. ಈಗ ಈ ಸಿನಿಮಾದಲ್ಲಿ ನಟಿಸಿದ್ದ ಅಲೆಕ್ಸಾಂಡ್ರಾ ಜಾವಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆ ಇರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಅಲೆಕ್ಸಾಂಡ್ರಾ ರಷ್ಯಾದವರು. ಗೋವಾದಲ್ಲಿ ಅವರು ವಾಸವಾಗಿದ್ದರು. ಇತ್ತೀಚೆಗೆ ಅವರು ಖಿನ್ನತೆಗೆ ಒಳಗಾಗಿದ್ದರು. ಸಾಯುವುದಕ್ಕೂ ಕೆಲ ದಿನ ಮೊದಲು ಅಲೆಕ್ಸಾಂಡ್ರಾ ಬಾಯ್​ಫ್ರೆಂಡ್​ ಮನೆಗೆ ಬಂದಿದ್ದ. ಆತ ಮನೆಯಿಂದ ಹೊರ ಹೋಗಿದ್ದನ್ನು ಕೆಲವರು ನೋಡಿದ್ದಾರೆ. ಈಗ ಅಲೆಕ್ಸಾಂಡ್ರಾ ಮೃತದೇಹ ಪತ್ತೆ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಅಲೆಕ್ಸಾಂಡ್ರಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಮನೆಯಲ್ಲಿರುವ ಫ್ಯಾನ್​ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

2019ರಲ್ಲಿ ಅಲೆಕ್ಸಾಂಡ್ರಾ ಸುದ್ದಿಯಾಗಿದ್ದರು. ಇದಕ್ಕೆ ಕಾರಣ ಚೆನ್ನೈ ಮೂಲದ ಫೋಟೋಗ್ರಾಫರ್​. ‘ಆತ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎನ್ನುವ ಗಂಭೀರ ಆರೋಪ ಮಾಡಿದ್ದರು. ಪೊಲೀಸರು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಫೋಟೋಗ್ರಾಫರ್​ನನ್ನು ಬಂಧಿಸಿದ್ದರು. ನಂತರ ಈತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಫೋಟೋಗ್ರಾಫರ್​ ಏನಾದರೂ ಅಲೆಕ್ಸಾಂಡ್ರಾಗೆ ಬೆದರಿಕೆ ವೊಡ್ಡಿದ್ದನೇ ಎನ್ನುವ ಅನುಮಾನ ಕೂಡ ಮೂಡಿದೆ. ಪೊಲೀಸರು ಈ ವಿಚಾರವಾಗಿಯೂ ತನಿಖೆ ನಡೆಸುತ್ತಿದ್ದಾರೆ.

‘ಕಾಂಚನ’, ‘ಕಾಂಚನ 2’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದೇ ಭರವಸೆಯಲ್ಲಿ ‘ಕಾಂಚನ 3’ ಮಾಡಲಾಗಿತ್ತು. ಈ ಸಿನಿಮಾ ಕೂಡ ಉತ್ತಮ ಗಳಿಕೆ ಮಾಡಿತ್ತು. ವಿಮರ್ಶೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

Published On - 11:40 am, Mon, 23 August 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು