AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾ ರಣಾವತ್​​ಗೆ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು

Kangana Ranaut: ಅನೇಕರು ಇದನ್ನು ವಿರೋಧಿಸಿದ್ದಾರೆ. ‘ದೇಶದ ಹೆಸರನ್ನು ಬದಲಿಸಿದ್ದರಿಂದ ಅಥವಾ ಬದಲಿಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ದೆಶದ ಜನತೆಯ ಆಲೋಚನೆ ಹಾಗೂ ನಡತೆ ಎರಡೂ ಬದಲಾಗಬೇಕು ಎಂದಿದ್ದಾರೆ.

‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾ ರಣಾವತ್​​ಗೆ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು
ಕಂಗನಾ ರಣಾವತ್
ರಾಜೇಶ್ ದುಗ್ಗುಮನೆ
|

Updated on:Jun 23, 2021 | 4:03 PM

Share

ಕಂಗನಾ ರಣಾವತ್​ ಸದಾ ಪ್ರಚಲಿತದಲ್ಲಿರಲು ಪ್ರಯತ್ನಿಸುತ್ತಾರೆ. ಸಿನಿಮಾ ವಿಚಾರವಲ್ಲದೆ, ತಮ್ಮ ಅಭಿಪ್ರಾಯ ಹೊರ ಹಾಕುವ ಮೂಲಕ ಅವರು ಸುದ್ದಿಯಲ್ಲಿರುತ್ತಾರೆ. ಈಗ ಕಂಗನಾ ಹೊಸ ವಿಚಾರವನ್ನು ಚರ್ಚೆಗೆ ಎಳೆದು ತಂದಿದ್ದಾರೆ. ಇಂಡಿಯಾ ಅನ್ನೋ ಹೆಸರನ್ನು ಬದಲಿಸಿ ಭಾರತ ಎಂದು ನಮ್ಮ ದೇಶವನ್ನು ಕರೆಯಬೇಕು ಎಂದು ಕಂಗನಾ ಆಗ್ರಹಿಸಿದ್ದಾರೆ.

ಕೂ ಖಾತೆಯಲ್ಲಿ ಕಂಗನಾ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಭಾರತವು ತನ್ನ ಪ್ರಾಚೀನ ಆಧ್ಯಾತ್ಮಿಕತೆ ಮುಂದುವರಿಸಿಕೊಂಡು ಹೋದರೆ ಮಾತ್ರ ಏಳ್ಗೆ ಕಾಣಬಹುದು. ಪ್ರಾಚೀನ ಆಧ್ಯಾತ್ಮಿಕತೆ ನಮ್ಮ ನಾಗರಿಕತೆಯ ಆತ್ಮ. ನಾವು ಪಾಶ್ಚಿಮಾತ್ಯ ಪ್ರಪಂಚದ ಪ್ರತಿಬಿಂಬ ಆಗದೆ ನಮ್ಮ ವೇದಗಳು, ಗೀತಾ ಮತ್ತು ಯೋಗಗಳಲ್ಲಿ ಆಳವಾಗಿ ಬೇರೂರಿದರೆ ನಾವು ವಿಶ್ವ ನಾಯಕರಾಗಿ ಹೊರಹೊಮ್ಮುತ್ತೇವೆ. ದಯವಿಟ್ಟು ಆ ಗುಲಾಮರು ಇಟ್ಟ ಇಂಡಿಯಾ ಎನ್ನುವ ಹೆಸರನ್ನು ಭಾರತ ಎಂದು ಬದಲಾಯಿಸಬಹುದೇ?’ ಎಂದು ಪ್ರಶ್ನೆ ಮಾಡಿದ್ದಾರೆ.

‘ಬ್ರಿಟಿಷರು ನಮಗೆ ಇಂಡಿಯಾ ಎಂಬ ಗುಲಾಮಗಿರಿಯ ಹೆಸರನ್ನು ನೀಡಿದರು. ಇಂಡಿಯಾ ಎಂದರೆ ಸಿಂಧೂ ಕಣಿವೆಯ ಪೂರ್ವ ಎಂದರ್ಥ. ಇದು ಯಾವ ರೀತಿಯ ಹೆಸರು? ಭಾರತ ಎಂಬ ಹೆಸರಿನ ಅರ್ಥವನ್ನು ನೀವು ತಿಳಿದುಕೊಳ್ಳಬೇಕು. ಭಾ- ಭಾವ, ರ- ರಾಗ, ತ-ತಾಳ ಇದು ಭಾರತ ಶಬ್ದದ ಅರ್ಥ’ ಎಂದಿದ್ದಾರೆ ಅವರು.

ಅನೇಕರು ಇದನ್ನು ವಿರೋಧಿಸಿದ್ದಾರೆ. ‘ದೇಶದ ಹೆಸರನ್ನು ಬದಲಿಸಿದ್ದರಿಂದ ಅಥವಾ ಬದಲಿಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ದೇಶದ ಜನತೆಯ ಆಲೋಚನೆ ಹಾಗೂ ನಡತೆ ಎರಡೂ ಬದಲಾಗಬೇಕು. ಅಂದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ’ ಎಂದು ಹಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ನೀವು ಹೇಳಿದಂತೆ ಈ ದೇಶಕ್ಕೆ ಹೆಸರು ಬಂದಿಲ್ಲ. ಶಂಕುತಲಾ ಮತ್ತು ದುಶ್ಯಂತನ ಮಗ ಭರತನಿಂದ ಭಾರತ ಎನ್ನುವ ಹೆಸರು ಬಂದಿದೆ’ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

ಆ್ಯಸಿಡ್​ ದಾಳಿಯಿಂದ ಕಂಗನಾ ಅಕ್ಕನ ಮುಖಕ್ಕೆ 53 ಸರ್ಜರಿ; ಕಡೆಗೂ ಯೋಗದಿಂದ ನಡೆದಿದ್ದು ಮ್ಯಾಜಿಕ್​

  

Published On - 3:50 pm, Wed, 23 June 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ