AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ; ರಿಲೀಸ್ ಆಗಲ್ಲ ಕಂಗನಾ ರಣಾವತ್ ಸಿನಿಮಾ?

ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 6ರಂದು ರಿಲೀಸ್​ ಆಗಲಿದೆ. ಸಿನಿಮಾ ಬಗ್ಗೆ ಸಿಖ್ ಸಮುದಾಯವರು ಈಗ ಅಪಸ್ವರ ತೆಗೆದಿದ್ದಾರೆ.

‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ; ರಿಲೀಸ್ ಆಗಲ್ಲ ಕಂಗನಾ ರಣಾವತ್ ಸಿನಿಮಾ?
ಎಮರ್ಜೆನ್ಸಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Aug 22, 2024 | 12:16 PM

Share

ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್ ವಾರದ ಹಿಂದಷ್ಟೇ ರಿಲೀಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ವಿವಾದ ಮಾಡುವ ಸೂಚನೆ ನೀಡಿತ್ತು. ಈಗ ಸಿನಿಮಾ ಮೇಲೆ ಬ್ಯಾನ್ ಹೇರುವಂತೆ ಅಕಲಾ ತಕ್ತ್ ಹಾಗೂ ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ (ಎಸ್​ಜಿಪಿಸಿ) ಒತ್ತಾಯ ಮಾಡಿದೆ. ಸಿಖ್ ವ್ಯಕ್ತಿಗಳನ್ನು ತಪ್ಪಾಗಿ ತೋರಿಸಲಾಗಿದೆ ಮತ್ತು ಸಮುದಾಯದ ಇತಿಹಾಸವನ್ನು ಅಗೌರವಿಸುವ ಕೆಲಸ ಆಗಿದೆ ಎಂದು ಸಮಿತಿಯವರು ಹೇಳಿದ್ದಾರೆ.

ಎಸ್​ಜಿಪಿಸಿ ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಮಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಎಮರ್ಜೆನ್ಸಿ ಸಿನಿಮಾ ಸಿಖ್ ಸಮುದಾಯವನ್ನು ಕೆಟ್ಟದಾಗಿ ತೋರಿಸಲಾಗಿದೆ. ಸಿಖ್ ಸಮುದಾಯದವರಿಗೆ ಮಸಿ ಬಳಿಯುವ ಕೆಲಸ ಆಗಿದೆ. ಜರ್ನೈಲ್ ಸಿಂಗ್ ಬಿಂದ್ರನ್​ವಾಲೆ ಅವರನ್ನು ನಾವು ಹುತಾತ್ಮ ಎಂದು ಪರಿಗಣಿಸಿದ್ದೇವೆ’ ಎಂಬುದಾಗಿ ಅವರು ಮಾತನಾಡಿದ್ದಾರೆ.

1975ರಲ್ಲಿ ತುರ್ತು ಪರಿಸ್ಥಿತಿ ಹೇರಲಾಯಿತು. ಇದನ್ನು ಆಧರಿಸಿ ಕಂಗನಾ ಸಿನಿಮಾ ಮಾಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಾಜಕೀಯ ಜೀವನ, ಅವರು ಎದುರಿಸಿದ ಸವಾಲುಗಳನ್ನು ತೋರಿಸಲಾಗಿದೆ. ಈ ಟ್ರೇಲರ್​ನ ಸಿಖ್ ಸಮುದಾಯವರು ಇಷ್ಟಪಟ್ಟಿಲ್ಲ. ಈಗಾಗಲೇ ಎಸ್​ಜಿಪಿಸಿ ಅವರು ಕಂಗನಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅವರ ವಿರುದ್ಧ ಎಫ್​ಐಆರ್​ಗೆ ಆಗ್ರಹಿಸಲಾಗಿದೆ.

‘ಸಿನಿಮಾಗಳಲ್ಲಿ ನಮ್ಮ ಇತಿಹಾಸವನ್ನು ತಪ್ಪಾಗಿ ಚಿತ್ರಿಸುವುದರಿಂದ ಸಿಖ್ ಸಮುದಾಯವು ಪದೇ ಪದೇ ನೋವುಂಟುಮಾಡುತ್ತಿದೆ. ಭವಿಷ್ಯದಲ್ಲಿ ಇಂತಹ ಸಿನಿಮಾಗಳನ್ನು ತಡೆಯಬೇಕು. ಭಾರತೀಯ ಚಿತ್ರರಂಗದಲ್ಲಿ ಸಿಖ್ ಭಾವನೆಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳಲು ಸಿಖ್ ಸದಸ್ಯರನ್ನು ಸೆನ್ಸಾರ್ ಮಂಡಳಿಯಲ್ಲಿ ಸೇರ್ಪಡೆ ಮಾಡಬೇಕು’ ಎಂದು ಎಜ್​ಪಿಸಿ ಮುಖ್ಯಸ್ಥ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 6ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Thu, 22 August 24

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ